23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು ಗ್ರಾಮ ಪಂಚಾಯತ್ ಸ್ತ್ರೀಶಕ್ತಿ ಗೊಂಚಲಿನ ಸಭೆ

ಬೆಳಾಲು ಗ್ರಾಮ ಪಂಚಾಯತ್ ಸ್ತ್ರೀಶಕ್ತಿ ಗೊಂಚಲಿನ ಸರ್ವ ಸದಸ್ಯರ ಸಭೆಯನ್ನು ಗೊಂಚಲಿನ ಅಧ್ಯಕ್ಷೆ ಆಶಾ ಭಟ್ ಇವರ ಉಪಸ್ಥಿತಿಯಲ್ಲಿ ನಡೆಯಿತು.

ವೇದಿಕೆಯಲ್ಲಿ ಪಂಚಾಯತ್ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಗೌಡ, ಗೊಂಚಲಿನ ಕಾರ್ಯದರ್ಶಿ ಹರಿಣಾಕ್ಷಿ, ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಶಾರದಾ, ಗೊಂಚಲಿನ ಕೋಶಾಧಿಕಾರಿ ವಸಂತಿ ಉಪಸ್ಥಿತರಿದ್ದರು.

. ಪಂಚಾಯತ್ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಇವರು ನಾವೆಲ್ಲ ಸಮವಸ್ತ್ರ ಧರಿಸಿ ಒಟ್ಟಿಗೆ ಇದ್ದಾಗ ನಾವೆಲ್ಲ ಒಂದೇ ಎಂಬ ಭಾವನೆ ಬರುತ್ತದೆ. ಎಲ್ಲರೂ ಒಗ್ಗಟ್ಟಾಗಿರಲು ಸಾಧ್ಯ, ನಮಗೆ ತಿಳಿದಿರುವುದನ್ನು ಇನ್ನೊಬ್ಬರಿಗೆ ತಿಳಿಸಿ ಅವರನ್ನು ಮೇಲೆ ತರಬೇಕು ಎಂದು ಹಿತನುಡಿದರು.

ನಂತರ ಪದಾಧಿಕಾರಿಗಳ ಆಯ್ಕೆಮಾಡಲಾಯಿತು. ಅಧ್ಯಕ್ಷರಾಗಿ ಕಮಲ, ಉಪಾಧ್ಯಕ್ಷರಾಗಿ ಭಾರತಿ, ಕಾರ್ಯದರ್ಶಿಯಾಗಿ ಲಲಿತ, ಜೊತೆ ಕಾರ್ಯದರ್ಶಿಯಾಗಿ ಸುಮತಿ, ಕೋಶಾಧಿಕಾರಿಯಾಗಿ ಚಿತ್ರ ಇವರನ್ನು ಆಯ್ಕೆ ಮಾಡಿ ನಿರ್ಣಯ ಪುಸ್ತಕ ನೀಡುವುದರ ಮೂಲಕ ಅಧಿಕಾರ ಹಸ್ತಾಂತರಿಸಲಾಯಿತು. ಲತಾ ಇವರು ಕಪಿಲ ವಿವಿದೋದ್ಧೇಶ ಸಹಕಾರ ಸಂಘ ದಿಂದ ಸಿಗುವ ಸಾಲ ಸೌಲಭ್ಯಗಳ ಬಗ್ಗೆ ತಿಳಿಸಿದರು.

ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಶಾರದಾ ಇವರು ಸ್ತ್ರೀಶಕ್ತಿ ಸಂಘದ ಸದಸ್ಯರು ತಮಗೆ ಸಿಕ್ಕಿರುವ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಯಾವುದೂ ಕೂಡ ಆಗುವುದಿಲ್ಲ ಅಂತ ಹಿಂದೆ ಸರಿಯಬಾರದು. ಎಲ್ಲದರಲ್ಲೂ ಮುಂದೆ ಬರಬೇಕು ಎಂದು ತಿಳಿಸಿದರು. ಆಶಾ ಸ್ವಾಗತಿಸಿದರು. ಲತಾ ಕಾರ್ಯಕ್ರಮವನ್ನು ನಿರೂಪಿಸಿ ವಾರ್ಷಿಕ ವರದಿಯನ್ನು ಮಂಡಿಸಿದರು. ಅಂಗನವಾಡಿ ಕಾರ್ಯಕರ್ತೆ ಭಾರತಿ ವಂದಿಸಿದರು.

Related posts

ದಿಡುಪೆ ಪಯ್ಯೆ ನಿವಾಸಿ ಸುಲೈಮಾನ್ ಪಯ್ಯೇ ನಿಧನ

Suddi Udaya

ತಾಲೂಕು ವಿಕಲಚೇತನರ ಪುನರ್ವಸತಿ ಕಾರ್ಯಕರ್ತರ ಪ್ರಗತಿ ಪರಿಶೀಲನ ಸಭೆ

Suddi Udaya

ಬೆಳ್ತಂಗಡಿ ಶ್ರೀ ದುರ್ಗಾಪರಮೇಶ್ವರಿ ಬಯಲಾಟ ಸೇವಾ ಸಮಿತಿಯ ಅಧ್ಯಕ್ಷರಾಗಿ ಸುರೇಶ್ ಆಚಾರ್ಯ, ಕಾರ್ಯದರ್ಶಿಯಾಗಿ ಕೃಷ್ಣಕುಮಾರ್

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ : 3781 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಮಲವಂತಿಗೆ ವೀರೇಶ್ವರ ಮರಾಠೆ ನಿಧನ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸುರಕ್ಷಾ ಚೆಕ್ ವಿತರಣೆ

Suddi Udaya
error: Content is protected !!