23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು ಗ್ರಾಮ ಪಂಚಾಯತ್ ಸ್ತ್ರೀಶಕ್ತಿ ಗೊಂಚಲಿನ ಸಭೆ

ಬೆಳಾಲು ಗ್ರಾಮ ಪಂಚಾಯತ್ ಸ್ತ್ರೀಶಕ್ತಿ ಗೊಂಚಲಿನ ಸರ್ವ ಸದಸ್ಯರ ಸಭೆಯನ್ನು ಗೊಂಚಲಿನ ಅಧ್ಯಕ್ಷೆ ಆಶಾ ಭಟ್ ಇವರ ಉಪಸ್ಥಿತಿಯಲ್ಲಿ ನಡೆಯಿತು.

ವೇದಿಕೆಯಲ್ಲಿ ಪಂಚಾಯತ್ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಗೌಡ, ಗೊಂಚಲಿನ ಕಾರ್ಯದರ್ಶಿ ಹರಿಣಾಕ್ಷಿ, ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಶಾರದಾ, ಗೊಂಚಲಿನ ಕೋಶಾಧಿಕಾರಿ ವಸಂತಿ ಉಪಸ್ಥಿತರಿದ್ದರು.

. ಪಂಚಾಯತ್ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಇವರು ನಾವೆಲ್ಲ ಸಮವಸ್ತ್ರ ಧರಿಸಿ ಒಟ್ಟಿಗೆ ಇದ್ದಾಗ ನಾವೆಲ್ಲ ಒಂದೇ ಎಂಬ ಭಾವನೆ ಬರುತ್ತದೆ. ಎಲ್ಲರೂ ಒಗ್ಗಟ್ಟಾಗಿರಲು ಸಾಧ್ಯ, ನಮಗೆ ತಿಳಿದಿರುವುದನ್ನು ಇನ್ನೊಬ್ಬರಿಗೆ ತಿಳಿಸಿ ಅವರನ್ನು ಮೇಲೆ ತರಬೇಕು ಎಂದು ಹಿತನುಡಿದರು.

ನಂತರ ಪದಾಧಿಕಾರಿಗಳ ಆಯ್ಕೆಮಾಡಲಾಯಿತು. ಅಧ್ಯಕ್ಷರಾಗಿ ಕಮಲ, ಉಪಾಧ್ಯಕ್ಷರಾಗಿ ಭಾರತಿ, ಕಾರ್ಯದರ್ಶಿಯಾಗಿ ಲಲಿತ, ಜೊತೆ ಕಾರ್ಯದರ್ಶಿಯಾಗಿ ಸುಮತಿ, ಕೋಶಾಧಿಕಾರಿಯಾಗಿ ಚಿತ್ರ ಇವರನ್ನು ಆಯ್ಕೆ ಮಾಡಿ ನಿರ್ಣಯ ಪುಸ್ತಕ ನೀಡುವುದರ ಮೂಲಕ ಅಧಿಕಾರ ಹಸ್ತಾಂತರಿಸಲಾಯಿತು. ಲತಾ ಇವರು ಕಪಿಲ ವಿವಿದೋದ್ಧೇಶ ಸಹಕಾರ ಸಂಘ ದಿಂದ ಸಿಗುವ ಸಾಲ ಸೌಲಭ್ಯಗಳ ಬಗ್ಗೆ ತಿಳಿಸಿದರು.

ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಶಾರದಾ ಇವರು ಸ್ತ್ರೀಶಕ್ತಿ ಸಂಘದ ಸದಸ್ಯರು ತಮಗೆ ಸಿಕ್ಕಿರುವ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಯಾವುದೂ ಕೂಡ ಆಗುವುದಿಲ್ಲ ಅಂತ ಹಿಂದೆ ಸರಿಯಬಾರದು. ಎಲ್ಲದರಲ್ಲೂ ಮುಂದೆ ಬರಬೇಕು ಎಂದು ತಿಳಿಸಿದರು. ಆಶಾ ಸ್ವಾಗತಿಸಿದರು. ಲತಾ ಕಾರ್ಯಕ್ರಮವನ್ನು ನಿರೂಪಿಸಿ ವಾರ್ಷಿಕ ವರದಿಯನ್ನು ಮಂಡಿಸಿದರು. ಅಂಗನವಾಡಿ ಕಾರ್ಯಕರ್ತೆ ಭಾರತಿ ವಂದಿಸಿದರು.

Related posts

ಉಜಿರೆ: ಎಸ್.ಡಿ.ಎಂ.ವಸತಿ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪ.ಪೂ. ವಿದ್ಯಾರ್ಥಿಗಳ ಸೇರ್ಪಡೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ಕುಣಿತ ಭಜನೆಯ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕಾಗಿ ಆಗ್ರಹಿಸಿ ಭಜಕರ ಬೃಹತ್ ಸಮಾವೇಶ: ಬೆಳ್ತಂಗಡಿ ಸಂತೆಕಟ್ಟೆ ಅಯ್ಯಪ್ಪ ದೇವಸ್ಥಾನದ ಬಳಿಯಿಂದ ಖಂಡನಾ ಮೆರವಣಿಗೆ

Suddi Udaya

ಕಸಾಪ ಸಮ್ಮೇಳನ; ಸರ್ವಾಧ್ಯಕ್ಷ ಪ್ರೊ.ಎ ಕೃಷ್ಣಪ್ಪ ಪೂಜಾರಿ ಅವರಿಗೆ ಅಧಿಕೃತ ಆಮಂತ್ರಣ

Suddi Udaya

ನಿರಂತರ ನೆಟ್‌ವರ್ಕ್ ಸಮಸ್ಯೆಯಿಂದ ಪರದಾಡುತ್ತಿರುವ ಗ್ರಾಮಸ್ಥರು, ಏರ್‌ಟೆಲ್ ವಿರುದ್ಧ ತೆಂಕಕಾರಂದೂರು ಗ್ರಾಮಸ್ಥರ ಪ್ರತಿಭಟನೆ

Suddi Udaya

ಬೆಳ್ತಂಗಡಿ ಕಾಂಗ್ರೆಸ್ ಕಚೇರಿಗೆ ಕೃಷಿ ಸಚಿವ ಚೆಲುವರಾಯಸ್ವಾಮಿ ಭೇಟಿ: ಹಲವು ಬೇಡಿಕೆಗಳಿಗೆ ಶೀಘ್ರವಾಗಿ ಸ್ಪಂದಿಸುವ ಭರವಸೆ ವ್ಯಕ್ತಪಡಿಸಿದ ಸಚಿವರು

Suddi Udaya

ಶುಭವಿವಾಹ ಐಶ್ವರ್ಯ-ಸ್ಕಂದ

Suddi Udaya
error: Content is protected !!