September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಇಂದಬೆಟ್ಟು ಯುವ ಶಕ್ತಿ ಪ್ರೆಂಡ್ಸ್ ಸಂಕೇಶ ವತಿಯಿಂದ ಕೆಸರ್ ದ ಕಂಡೊಂಡು ಒಂಜಿ ದಿನ ಕಾರ್ಯಕ್ರಮ

ಇಂದಬೆಟ್ಟು : ನಮ್ಮ ನೆಲದ ಆಚಾರ ವಿಚಾರ ಸಂಸ್ಕೃತಿಗಳನ್ನು ಉಳಿಸುವುದರಲ್ಲಿ ಯುವಜನತೆಯ ಪಾತ್ರ ಬಹಳ ಮುಖ್ಯವಾಗಿದೆ ಎಂದು ಉದ್ಯಮಿಗಳು, ಧಾರ್ಮಿಕ ಮುಖಂಡರು ಕಿರಣ್ ಚಂದ್ರ ಡಿ ಪುಷ್ಪಗಿರಿ ಇವರು ಅಭಿಪ್ರಾಯ ಪಟ್ಟರು.

ಅವರು ಯುವ ಶಕ್ತಿ ಪ್ರೆಂಡ್ಸ್ ಸಂಕೇಶ ಇಂದಬೆಟ್ಟು ಇದರ ನೇತೃತ್ವದಲ್ಲಿ ಕಜೆ ಶ್ರೀ ದೇವಕಿ ಆಚಾರ್ಯ ಇವರ ಗದ್ದೆಯಲ್ಲಿ ನಡೆದ ಕೆಸರ್ ದ ಕಂಡೊಂಡು ಒಂಜಿ ದಿನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು.

ಕಾರ್ಯಕ್ರಮ ದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಶಿವಪ್ರಸಾದ್ ಕೊಡಂಗೆ ಹೊಸಮನೆ ವಹಿಸಿದ್ದರು. ವೇದಿಕೆಯಲ್ಲಿ ಬಂಗಾಡಿ ವ್ಯವಸಾಯಿಕ ಸಂಘದ ಅಧ್ಯಕ್ಷ ಹರೀಶ್ ಸಾಲ್ಯಾನ್ ಮೊರ್ತಾಜೆ, ಇಂದಬೆಟ್ಟು ಗ್ರಾಂ.ಪಂ.ಮಾಜಿ ಅಧ್ಯಕ್ಷ ಆನಂದ ಹಡಿಲು, ಇಂದಬೆಟ್ಟು ನವಭಾರತ್ ಗೆಳೆಯರ ಬಳಗ ಅಧ್ಯಕ್ಷ ರಮೇಶ್ ನೂಜಿಲೆ , ಗೆಳೆಯರ ಬಳಗ ನೇತ್ರಾವತಿ ನಗರ ಅಧ್ಯಕ್ಷ ಹರೀಶ್, ಶಾಂತಿನಗರ ಕಜೆ ಹಾ.ಉ.ಸ.ಸಂಘದ ಅಧ್ಯಕ್ಷ ಉಮೇಶ್ ಮುದೆಲ್ಕಾಡಿ, ಇಂದಬೆಟ್ಟು ದೇವನಾರಿ ಶ್ರೀ ಅರ್ಧನಾರೀಶ್ವರ ಯಕ್ಷಗಾನ ಬಯಲಾಟ ಸೇವಾ ಸಮಿತಿ ಅಧ್ಯಕ್ಷ ಸಂಜೀವ ಗೌಡ ಮನ್ನಡ್ಕ., ಸರ್ವೊದಯ ಸ್ಪೋರ್ಟ್ಸ್ ಕ್ಲಬ್ ಶಾಂತಿನಗರ ಅಧ್ಯಕ್ಷ ಅವಿನಾಶ್ ಕಟ್ನಡ್ಕ, ಶ್ರೀ ಗಣೇಶ್ ಭಜನಾ ಮಂದಿರ ಕಜೆ ಶಾಂತಿನಗರ ಅಧ್ಯಕ್ಷ ಗಂಗಾಧರ ಎಸ್ ಪರಾರಿ, ಇಂದಬೆಟ್ಟು ಹಾ.ಉ.ಸ.ಸಂಘ ಅಧ್ಯಕ್ಷೆ ಶ್ರೀಮತಿ ರೇಣುಕಾ ವಸಂತ ಗೌಡ ಕಲ್ಲಾಜೆ, ಗುರಿಪಳ್ಳ ಜಯನಗರ ಹಾ.ಉ‌.ಸ.ಸಂಘದ ಅಧ್ಯಕ್ಷೆ ಸೌಮ್ಯಲತಾ ಜಯಂತ ಗೌಡ ಮತ್ತು ಬೆಳ್ತಂಗಡಿ ಭೂ ಅಭಿವೃದ್ಧಿ ಬ್ಯಾಂಕ್ ಮಾಜಿ ಉಪಾಧ್ಯಕ್ಷ ಸಂತೋಷ್ ಗೌಡ ಕೊಯಮಜಲುರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಯೋಗಾಸನ ತಾಲೂಕು ಜಿಲ್ಲೆ ರಾಜ್ಯ ಅಂತರ್ ರಾಜ್ಯ ಮತ್ತು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುವ ಮೋಹಿತ್ ಗೌಡ ಕಂಬಳದಡ್ಡು ಕನ್ಯಾಡಿ ಇವರನ್ನು ಸನ್ಮಾನಿಸಲಾಯಿತು. ಸುಂದರ‌.ಎ ಇಂದಬೆಟ್ಟು ಸ್ವಾಗತಿಸಿ, ನಿತಿನ್ ಮನ್ನಡ್ಕ ಧನ್ಯವಾದವಿತ್ತರು. ಸತೀಶ್ ಮನ್ನಡ್ಕ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಪ್ರಾಕೃತಿಕ ವಿಕೋಪದಿಂದ ಮನೆ ಬಿರುಕುಗೊಂಡ ಕುಟುಂಬಕ್ಕೆ ಸಹಾಯಧನ ಹಸ್ತಾಂತರ

Suddi Udaya

ಜಿಲ್ಲಾ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾಗಿ ಎ.ಜೆ ಅಜೇಯ್ ಜೆಕೋಬ್ ಬೆಳ್ತಂಗಡಿ ಆಯ್ಕೆ

Suddi Udaya

ಹತ್ಯಡ್ಕ ಪ್ರಾ.ಕೃ.ಪ.ಸ.ಸಂ. ಮುಖ್ಯಕಾರ್ಯನಿರ್ವಹಣಾಧಿಕಾರಿ ಪಿ. ತ್ಯಾಂಪಣ್ಣ ಶೆಟ್ಟಿಗಾರ್ ಸೇವಾ ನಿವೃತ್ತಿ

Suddi Udaya

ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿ: ನೆಕ್ಕಿಲು ಸ.ಕಿ.ಪ್ರಾ. ಶಾಲೆಗೆ ಹಲವು ಪ್ರಶಸ್ತಿ

Suddi Udaya

ರೂ. 2.00 ಕೋಟಿ ಅನುದಾನದಲ್ಲಿ ಬೆಳ್ತಂಗಡಿ ನಗರದ ಕೆ.ಇ.ಬಿ ರಸ್ತೆ- ರೆಂಕೆದಗುತ್ತು-ಮಲ್ಲೊಟ್ಟು ಸಂಪರ್ಕಿಸುವ ರಸ್ತೆಯ ಅಗಲೀಕರಣ ಡಾಂಬರೀಕರಣ ಮತ್ತು ಒಳಚರಂಡಿ ನಿರ್ಮಾಣಕ್ಕೆ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಶಿಲಾನ್ಯಾಸ, ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಶಿಶಿಲ: ಶ್ರೀ ವನದುರ್ಗಾ ಕೃಪಾಶ್ರಿತ ಸಂಚಾರಿ ನಡುಮನೆ ಯಕ್ಷಗಾನ ಚಿಕ್ಕ ಮೇಳ ತಿರುಗಾಟ ಆರಂಭ

Suddi Udaya
error: Content is protected !!