September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಉಜಿರೆ ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರ ಸಂಘ ಆಡಳಿತ ಮಂಡಳಿಯ 15 ನಿರ್ದೇಶಕರುಗಳ ಸ್ಥಾನಕ್ಕೆ ಅವಿರೋಧ ಆಯ್ಕೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರ ಸಂಘು ಉಜಿರೆ ಇದರ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಯ 15 ನಿರ್ದೇಶಕರುಗಳ ಸ್ಥಾನಕ್ಕೆ ಸೆ.21 ರಂದು ನಿಗದಿಯಾಗಿದ್ದ ಚುನಾವಣೆಯಲ್ಲಿ ಎಲ್ಲಾ ಸ್ಥಾನಗಳಿಗೆ ನಿರ್ದೇಶಕರುಗಳು ಆವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸಹಕಾರಿ ಸಂಘ- ಸಂಸ್ಥೆಗಳು ಸ್ಥಾನದಿಂದ ಹಾಲಿ ಅಧ್ಯಕ್ಷ ಶ್ರೀಧರ ಜಿ. ಭಿಡೆ, ಸಾಮಾನ್ಯ ಸ್ಥಾನ ಬೆಳ್ತಂಗಡಿ ಫಿರ್ಕಾದಿಂದ ಹಾಲಿ ಉಪಾಧ್ಯಕ್ಷ ಅನಂತ ಭಟ್ ಮಚ್ಚಿಮಲೆ, ಹಿಂದುಳಿದ ವರ್ಗ ಎ ಮೀಸಲು ಸ್ಥಾನ ಬೆಳ್ತಂಗಡಿ ಫಿರ್ಕಾದಿಂದ ಸೋಮನಾಥ ಬಂಗೇರ ವರ್ಪಾಳೆ ಅಳದಂಗಡಿ, ಹಿಂದುಳಿದ ವರ್ಗ ಬಿ ಮೀಸಲು ಸ್ಥಾನ ಕೊಕ್ಕಡ ಫಿರ್ಕಾದಿಂದ ಹೆಚ್. ಪದ್ಮಗೌಡ ಬೆಳಾಲು , ಗ್ರೇಸಿಯನ್ ವೇಗಸ್ ಕನ್ಯಾಡಿ-|| ಕಲ್ಮಂಜ, ಮತ್ತು ಬಾಲಕೃಷ್ಣ ಗೌಡ ಕೇರಿಮಾರ್, ಸಾಮಾನ್ಯ ಸ್ಥಾನ ವೇಣೂರು ಫಿರ್ಕಾದಿಂದ ಡಾ. ಶಶಿಧರ ಡೋಂಗ್ರೆ ಶೇಣೆರೆಬೈಲ್ ಅಳದಂಗಡಿ, ಸಾಮಾನ್ಯ ಸ್ಥಾನ ಕೊಕ್ಕಡ ಫಿರ್ಕಾದಿಂದ ಶಾಜಿ ಪಿ.ಎ ಶಿಬಾಜೆ, ಕೆ.ಜೆ ಆಗಸ್ಟೀನ್ ಪೆರ್ಮಾಣು ನಡ, ಭರತ್ ಕುಮಾರ್ ಹೆಚ್. ಇಂದಬೆಟ್ಟು ಬಂಗಾಡಿ, ತಿಮ್ಮಪ್ಪ ಗೌಡ ಪಿ. ಬನ್ನಂದೂರು ಬೆಳಾಲು, ಮಹಿಳಾ ಮೀಸಲು ಸ್ಥಾನದಿಂದ ಸುಭಾಷಿಣಿ ಆರ್. ಮಠದಬೈಲು ಬೆಳ್ತಂಗಡಿ, ಜಯಶ್ರೀ ಡಿ.ಎಂ. ಉಜಿರೆ, ಪರಿಶಿಷ್ಟ ಜಾತಿ ಮೀಸಲು ಸ್ಥಾನದಿಂದ ಬೈರಪ್ಪ ಕಲ್ಲಗುಡ್ಡೆ ಕಳೆಂಜ, ಪರಿಶಿಷ್ಟ ಪಂಗಡ ಮೀಸಲು ಸ್ಥಾನದಿಂದ ಕೆ. ರಾಮನಾಯ್ಕ ಕಾಯರ್ತಡ್ಕ ಕಳೆಂಜ ಇವರು ಆವಿರೋಧವಾಗಿ ಆಯ್ಕೆಯಾದವರು.


ಚುನಾವಣಾಧಿಕಾರಿಯಾಗಿ ಸಹಕಾರ ಸಂಘಗಳ ಪುತ್ತೂರು ಉಪ ಸಹಾಯಕ ನಿಬಂಧಕರಾದ ಎಂ. ರಘು ಕಾರ್ಯನಿರ್ವಹಿಸಿದ್ದರು. ಉಜಿರೆ ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರ ಸಂಘುದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರಾಜು ಶೆಟ್ಟಿ ಸಹಕರಿಸಿದರು.

Related posts

ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪತ್ರಿಕಾ ದಿನಾಚರಣೆ ಉದ್ಘಾಟನೆ

Suddi Udaya

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ: ಅಂಗನವಾಡಿ ಕೇಂದ್ರಗಳ ಕಟ್ಟಡಗಳು ಶಿಥಿಲಾವ್ಯಸ್ಥೆಯಲ್ಲಿ ಇರುವುದರಿಂದ ನೂತನ ಕಟ್ಟಡ ರಚನೆಗೆ ಮನವಿ

Suddi Udaya

ತುಮಕೂರು ಕುಚ್ಚಂಗಿ ಕೆರೆಯ ಬಳಿ ಮೂವರ ಶವ ಸುಟ್ಟು ಹೋದ ರೀತಿಯಲ್ಲಿ ಪತ್ತೆ: ಮೂವರು ಬೆಳ್ತಂಗಡಿ ತಾಲೂಕಿನಿಂದ ನಾಪತ್ತೆಯಾದವರದ್ದು ಇರಬಹುದೆಂಬ ಶಂಕೆ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯಿಂದ ಇಲOತಿಲ ಕಾರ್ಯಕ್ಷೇತ್ರದ ಜ್ಞಾನವಿಕಾಸ ಕೇಂದ್ರದ ಸಭೆ

Suddi Udaya

ಉಜಿರೆ ಶ್ರೀ ಧ.ಮಂ.ಅ. ಪ್ರೌಢ ಶಾಲೆಯಲ್ಲಿ ನೈತಿಕ ಶಿಕ್ಷಣ ಮತ್ತು ಕಾನೂನು ಅರಿವು

Suddi Udaya

ಬೆಳ್ತಂಗಡಿ: ಅಜ್ಜಿಯನ್ನುಕೊಲೆ ಮಾಡಿ ಚಿನ್ನಾಭರಣ ದರೋಡೆ ಪ್ರಕರಣ: ಬಂಧಿತನಾಗಿದ್ದ ಆರೋಪಿ ಅಶೋಕ್ ಅಸೌಖ್ಯದಿಂದ ಸಾವು

Suddi Udaya
error: Content is protected !!