22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಉಜಿರೆ ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರ ಸಂಘ ಆಡಳಿತ ಮಂಡಳಿಯ 15 ನಿರ್ದೇಶಕರುಗಳ ಸ್ಥಾನಕ್ಕೆ ಅವಿರೋಧ ಆಯ್ಕೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರ ಸಂಘು ಉಜಿರೆ ಇದರ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಯ 15 ನಿರ್ದೇಶಕರುಗಳ ಸ್ಥಾನಕ್ಕೆ ಸೆ.21 ರಂದು ನಿಗದಿಯಾಗಿದ್ದ ಚುನಾವಣೆಯಲ್ಲಿ ಎಲ್ಲಾ ಸ್ಥಾನಗಳಿಗೆ ನಿರ್ದೇಶಕರುಗಳು ಆವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸಹಕಾರಿ ಸಂಘ- ಸಂಸ್ಥೆಗಳು ಸ್ಥಾನದಿಂದ ಹಾಲಿ ಅಧ್ಯಕ್ಷ ಶ್ರೀಧರ ಜಿ. ಭಿಡೆ, ಸಾಮಾನ್ಯ ಸ್ಥಾನ ಬೆಳ್ತಂಗಡಿ ಫಿರ್ಕಾದಿಂದ ಹಾಲಿ ಉಪಾಧ್ಯಕ್ಷ ಅನಂತ ಭಟ್ ಮಚ್ಚಿಮಲೆ, ಹಿಂದುಳಿದ ವರ್ಗ ಎ ಮೀಸಲು ಸ್ಥಾನ ಬೆಳ್ತಂಗಡಿ ಫಿರ್ಕಾದಿಂದ ಸೋಮನಾಥ ಬಂಗೇರ ವರ್ಪಾಳೆ ಅಳದಂಗಡಿ, ಹಿಂದುಳಿದ ವರ್ಗ ಬಿ ಮೀಸಲು ಸ್ಥಾನ ಕೊಕ್ಕಡ ಫಿರ್ಕಾದಿಂದ ಹೆಚ್. ಪದ್ಮಗೌಡ ಬೆಳಾಲು , ಗ್ರೇಸಿಯನ್ ವೇಗಸ್ ಕನ್ಯಾಡಿ-|| ಕಲ್ಮಂಜ, ಮತ್ತು ಬಾಲಕೃಷ್ಣ ಗೌಡ ಕೇರಿಮಾರ್, ಸಾಮಾನ್ಯ ಸ್ಥಾನ ವೇಣೂರು ಫಿರ್ಕಾದಿಂದ ಡಾ. ಶಶಿಧರ ಡೋಂಗ್ರೆ ಶೇಣೆರೆಬೈಲ್ ಅಳದಂಗಡಿ, ಸಾಮಾನ್ಯ ಸ್ಥಾನ ಕೊಕ್ಕಡ ಫಿರ್ಕಾದಿಂದ ಶಾಜಿ ಪಿ.ಎ ಶಿಬಾಜೆ, ಕೆ.ಜೆ ಆಗಸ್ಟೀನ್ ಪೆರ್ಮಾಣು ನಡ, ಭರತ್ ಕುಮಾರ್ ಹೆಚ್. ಇಂದಬೆಟ್ಟು ಬಂಗಾಡಿ, ತಿಮ್ಮಪ್ಪ ಗೌಡ ಪಿ. ಬನ್ನಂದೂರು ಬೆಳಾಲು, ಮಹಿಳಾ ಮೀಸಲು ಸ್ಥಾನದಿಂದ ಸುಭಾಷಿಣಿ ಆರ್. ಮಠದಬೈಲು ಬೆಳ್ತಂಗಡಿ, ಜಯಶ್ರೀ ಡಿ.ಎಂ. ಉಜಿರೆ, ಪರಿಶಿಷ್ಟ ಜಾತಿ ಮೀಸಲು ಸ್ಥಾನದಿಂದ ಬೈರಪ್ಪ ಕಲ್ಲಗುಡ್ಡೆ ಕಳೆಂಜ, ಪರಿಶಿಷ್ಟ ಪಂಗಡ ಮೀಸಲು ಸ್ಥಾನದಿಂದ ಕೆ. ರಾಮನಾಯ್ಕ ಕಾಯರ್ತಡ್ಕ ಕಳೆಂಜ ಇವರು ಆವಿರೋಧವಾಗಿ ಆಯ್ಕೆಯಾದವರು.


ಚುನಾವಣಾಧಿಕಾರಿಯಾಗಿ ಸಹಕಾರ ಸಂಘಗಳ ಪುತ್ತೂರು ಉಪ ಸಹಾಯಕ ನಿಬಂಧಕರಾದ ಎಂ. ರಘು ಕಾರ್ಯನಿರ್ವಹಿಸಿದ್ದರು. ಉಜಿರೆ ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರ ಸಂಘುದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರಾಜು ಶೆಟ್ಟಿ ಸಹಕರಿಸಿದರು.

Related posts

ಅಂಡಿಂಜೆ : ನೆಲ್ಲಿಗೇರಿ ನಿವಾಸಿ ರಮೇಶ ಭಂಡಾರಿ ನಿಧನ

Suddi Udaya

ಬಳಂಜ ಗ್ರಾ.ಪಂ. ನ ಅಭಿವೃದ್ಧಿಯ ಓಟಕ್ಕೆ ಒಲಿದ ಪ್ರತಿಷ್ಠಿತ ಗಾಂಧಿ ಪುರಸ್ಕಾರ: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವ ಕುಮಾರ್,ಸಚಿವ ಪ್ರಿಯಾಂಕ್ ಖರ್ಗೆರವರಿಂದ ಪ್ರಶಸ್ತಿ ಪ್ರದಾನ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಿಕ್ಷಕರ ದಿನಾಚರಣೆ ಪ್ರಯುಕ್ತ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ

Suddi Udaya

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ ಸಾಮೂಹಿಕ ವಿವಾಹ ನಿಶ್ಚಿತಾರ್ಥ

Suddi Udaya

ಹೆಜ್ಜೇನು ದಾಳಿಯಿಂದ ಮಗುವನ್ನು ರಕ್ಷಿಸಿದ ಮೇಲಂತ ಬೆಟ್ಟು ಗ್ರಾಮ ಪಂಚಾಯತ್ ಸಿಬ್ಬಂದಿ: ಚಂದ್ರವತಿ ಯವರ ಸಮಯ ಪ್ರಜ್ಞೆ ತಾಯಿ ಮಮತೆ ಧೈರ್ಯಕ್ಕೆ ಗ್ರಾಮಸ್ಥರ ಮೆಚ್ಚುಗೆ

Suddi Udaya

ನಾರಾವಿ ಪೇಟೆಯಲ್ಲಿ ಬಿಜೆಪಿ ಬಿರುಸಿನ ಮತಪ್ರಚಾರ

Suddi Udaya
error: Content is protected !!