25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್ ಡಿ ಎಂ ಪಾಲಿಟೆಕ್ನಿಕ್ ನಲ್ಲಿ ಇಂಟರ್ ಪಾಲಿಟೆಕ್ನಿಕ್ ಟೆಕ್ನಿಕಲ್ ಸ್ಪರ್ಧೆ

ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ನಲ್ಲಿ ಇಂಜಿನಿಯರ್ಸ್ ದಿನಾಚರಣೆಯ ಪ್ರಯುಕ್ತ ಟೆಕ್ ಟ್ರಿಕ್ಸ್ 2025 ಜಿಲ್ಲಾ ಮಟ್ಟದ ಇಂಟರ್ ಪಾಲಿಟೆಕ್ನಿಕ್ ಟೆಕ್ನಿಕಲ್ ಸ್ಪರ್ಧೆಯು ಸೆ. 15 ರಂದು ನಡೆಯಿತು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಕುಕ್ಕೆ ಸುಬ್ರಹ್ಮಣ್ಯದ ಸ್ಪೆಷಲ್ ಸಬ್ ಡಿವಿಜನ್ ಅಸಿಸ್ಟೆಂಟ್ ಇಂಜಿನಿಯರ್ ಪ್ರಮೋದ್ ಕುಮಾರ್ ಕೆ. ಕೆ. ಉದ್ಘಾಟಿಸಿ ಮಾತನಾಡಿ ಇಂಜಿನಿಯರ್ ಕ್ಷೇತ್ರ ದಲ್ಲಿ ಸರ್ ಎಂ ವಿಶ್ವೇಶ್ವರಯ್ಯ ರವರ ಸಾಧನೆ ಅಮೋಘ ಅದಕ್ಕಾಗಿ ಅವರ ಜನ್ಮ ದಿನವನ್ನು ಭಾರತ ದೇಶದಲ್ಲಿ ಮಾತ್ರ ಅಲ್ಲದೆ ಇತರ ಎರಡು ದೇಶದಲ್ಲಿ ಇಂಜಿನಿಯರ್ಸ್ ದಿನವಾಗಿ ಆಚರಣೆ ಮಾಡಲಾಗುತ್ತಿದೆ. ಅವರ ಸಾಧನೆ ಹಿಂದೆ ತತ್ವಗಳು ಸೇವಾ ರೀತಿಯಲ್ಲಿ ಮುಂದುವರಿದಿದೆ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಅವಕಾಶ ಸಿಕ್ಕಿದಾಗ ಯಾವುದೇ ಸ್ಪರ್ಧೆಗಳಲ್ಲಿ ಭಾಗವಹಿಸುವುದರಿಂದ ನಮ್ಮ ಬದುಕಿಗೆ ಪ್ರಯೋಜನ ಆಗುತ್ತದೆ. ಸಮಾಜದಲ್ಲಿ ಇಂಜಿನಿಯರ್ ಗಳ ಕೊಡುಗೆ ಅಪಾರ ಈಗಿನ ಸಂದರ್ಭಕ್ಕೆ ತಕ್ಕಂತೆ ಹೊಂದಿಕೊಂಡು ಟೆಕ್ನಿಕಲ್ ಸೇವೆ ಮಾಡಿದರೆ ಯಶಸ್ವಿ ಸಾಧಿಸಲು ಅವಕಾಶ ಇದೆ. ಇದನ್ನು ವಿದ್ಯಾರ್ಥಿ ಜೀವನದಲ್ಲಿಯೇ ಅಳವಡಿಸಿ ಕೊಳ್ಳಬೇಕು ಎಂದರು.


ಪ್ರಾಂಶುಪಾಲರಾದ ಸಂತೋಷ್ ಅಧ್ಯಕ್ಷತೆ ವಹಿಸಿ ಮಾತನಾಡಿ ಸರ್ ಎಂ ವಿಶ್ವೇಶ್ವರಯ್ಯ ರವರ ಜನ್ಮ ದಿನವನ್ನು ಪ್ರತಿ ವರ್ಷ ಸೆ. 15 ರಂದು ಇಂಜಿನಿಯರ್ಸ್ ದಿನವಾಗಿ ಆಚರಣೆ ಮಾಡುತ್ತಾ ಬರುತ್ತಿದ್ದು ಮಹಾನ್ ವ್ಯಕ್ತಿ ಯಾದ ಅವರ ಜೀವನ ಚರಿತ್ರೆ, ಅವರ ಆದರ್ಶಗಳನ್ನು ತಿಳಿದಾಗ ವಿದ್ಯಾರ್ಥಿಗಳಿಗೆ ಸ್ಫೂರ್ತಿ ಸಿಗುವುದು. ವಿವಿಧ ವಿಭಾಗದಲ್ಲಿ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು ಸ್ಪರ್ಧಾ ಮನೋಭಾವದೊಂದಿಗೆ ಭಾಗವಹಿಸಬೇಕು ಎಂದರು.
ಪಾಲಿಟೆಕ್ನಿಕ್ ವ್ಯವಸ್ಥಾಪಕರಾದ ಚಂದ್ರನಾಥ ಜೈನ್ ಮತ್ತು ವಿವಿಧ ವಿಭಾಗಗಳ ಮುಖ್ಯಸ್ಥರುಗಳಾದ ಮೇರಿ ಸ್ಮಿತಾ, ರಾಜೇಶ್ ಕೆ ಎ, ದಿನೇಶ್, ಶ್ರೇಯಾಂಕ್ ಜೈನ್, ತೃಪ್ತಿ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಇಂಗ್ಲೀಷ್ ಉಪನ್ಯಾಸಕರಾದ ಶಂಕರ್ ಭಟ್ ಸ್ವಾಗತಿಸಿದರು. ರೆನಿಟಾ ಫೆರ್ನಾಂಡೀಸ್ ವಂದಿಸಿದರು. ಸಂಪತ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.
ಕಾರ್ಯಕ್ರಮದಲ್ಲಿ ಸ್ಪರ್ಧಿ ವಿದ್ಯಾರ್ಥಿಗಳು, ಉಪನ್ಯಾಸಕರು, ಸಿಬ್ಬಂದಿ ವರ್ಗದವರು ಹಾಜರಿದ್ದರು.

Related posts

ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ದೇವಸ್ಥಾನಕ್ಕೆ ರಕ್ಷಿತ್ ಶಿವರಾಂ ಭೇಟಿ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆ

Suddi Udaya

ಬೆಳಾಲು: ಶ್ರೀ ಅನಂತಪದ್ಮನಾಭ ದೇವಸ್ಥಾನ ವಾರ್ಷಿಕ ಮಹಾಸಭೆ ಹಾಗೂ ಲೆಕ್ಕಾಚಾರ ಮಂಡನೆ

Suddi Udaya

ಡಾ|| ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಸುದ್ದಿ ಉದಯ ವಾರಪತ್ರಿಕೆಯಿಂದ ವಿಶೇಷ ಪುರವಾಣಿ

Suddi Udaya

ಆ.15ರಿಂದ ಶೃಂಗೇರಿಯ ಶಾರದಾಂಬೆ ದರ್ಶನಕ್ಕೆ ‘ವಸ್ತ್ರ ಸಂಹಿತೆ’ ಜಾರಿ!

Suddi Udaya

ಉರುವಾಲು ಕಾರಿಂಜ ಬಾಕಿಮಾರು ದೈವಸ್ಥಾನದ “ಕಾರಿಂಜ ಶ್ರೀ ಕಲ್ಕುಡ” ಧ್ವನಿ ಸುರುಳಿ ಬಿಡುಗಡೆ

Suddi Udaya
error: Content is protected !!