37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪಡ್ಡಂದಡ್ಕ ನೂರುಲ್ ಹುಧಾ ಜುಮ್ಮಾ ಮಸೀದಿಯಲ್ಲಿ ಮೂಲಭೂತ ಸೌಕರ್ಯಗಳ ಲೋಕಾರ್ಪಣೆ

ವೇಣೂರು: ಪಡ್ಡoದಡ್ಕದ ಕೇಂದ್ರ ಮಸೀದಿಯಲ್ಲಿ ವಿವಿಧ ಮೂಲಭೂತ ಸೌವಲತ್ತುಗಳನ್ನು ಸೆ.12 ರಂದು ಮಸೀದಿ ಆಡಳಿತ ಸಮಿತಿ ಅಧ್ಯಕ್ಷ ಇಸ್ಮಾಯಿಲ್ ಕೆ ಪೆರಿಂಜೆ ಯವರ ಅಧ್ಯಕ್ಷತೆಯಲ್ಲಿ ಲೋಕಾರ್ಪಣೆ ಮಾಡಲಾಯಿತು.

ಸುಸಜ್ಜಿತವಾದ ನವೀಕೃತ ಹೌಲ್ (ವಝು ಖಾನ)ನ್ನು ತ್ವಯಿಬಾ ಎಜುಕೇಷನಲ್ ಸೆಂಟರ್ ( ಪಟ್ಟಾಡಿ ) ಮೂಡಬಿದ್ರಿ ಚೇರ್ಮೆನ್ ಸಯ್ಯದ್ ಅಬ್ದುಲ್ ರಹಿಮಾನ್ ಸಾದಾತ್ ತಂಗಳ್ ಬಾಲರವಿ ನೆರವೇರಿಸಿದರು .ನವೀಕೃತ ಮದರಸವನ್ನು ಪ್ರಿನ್ಸಿಪಾಲ್ ದಾರುಸ್ಸಲಾಮ್ ದಾವ ಕಾಲೇಜು ಬೆಳ್ತಂಗಡಿಯ ತ್ವಾಹ ತಂಗಳ್ ನೆರವೇರಿಸಿದರು. ಮಸೀದಿ ಕಚೇರಿಯನ್ನು ಮುಂಬೈನ( ಎಂಪೈರ್ ವಿಸ್ತ ಇನ್ಫ್ರಾ )ಉದ್ಯಮಿ ಮೊಹಮ್ಮದ್ ಮುಸ್ತಫಾ ನೆರವೇರಿಸಿದರು. ಮಸೀದಿ ಖತೀಬ್ ಕಲಂದರ್ ಶಾಫಿ ಬಾಖವಿ ಖಾಮಿಲ್ ಅಲ್ ಮನ್ನಾನಿ ಕರಾಯ ಕಾರ್ಯಕ್ರಮ ಉದ್ಘಾಟಿಸಿದರು.

ಮುಖ್ಯ ಅಥಿತಿಗಳಾಗಿ ಉದ್ಯಮಿ ಹಾಗೂ ಡಿಡಿ ಸಮೂಹ ಸಂಸ್ಥೆಗಳ ಚೇರ್ಮನ್ ಅಬ್ದುಲ್ ರಝಾಕ್ ಕನ್ನಡಿಕಟ್ಟೆ, ಮಸೀದಿ ಮಾಜಿ ಅಧ್ಯಕ್ಷ ಹಾಗೂ ಉದ್ಯಮಿ ಯು.ಕೆ ಮೊಹಮ್ಮದ್ ಹಾಜಿ ,ಮೂಡಬಿದ್ರಿ ಅಲ್ ಮಫಾಝ ಕಾಲೇಜಿನ ಪ್ರಿನ್ಸಿಪಾಲ್ ಪಿಪಿ ಅಹ್ಮದ್ ಸಖಾಫಿ ,ಬೆಳ್ತಂಗಡಿ ಕೇಂದ್ರ ಲ್ ಮಸೀದಿ ಆಡಳಿತ ಸಮಿತಿ ಅಧ್ಯಕ್ಷ ಅಕ್ಬರ್ ಬೆಳ್ತಂಗಡಿ,ಪತ್ರಕರ್ತ ಜನಾಬ್ ಎಚ್ ಮಹಮ್ಮದ್ ವೇಣೂರು ಶುಭ ಹಾರೈಸಿದರು. ಪ್ರಮುಖರಾದ ಉಪಾಧ್ಯಕ್ಷ ಅಬ್ದುಲ್ ರಹಿಮಾನ್ ಕಟ್ಟೆ,ಕೋಶಾಧಿಕಾರಿ ಪಿಜೆ ಮಹಮೂದ್ ಲೆಕ್ಕ ಪರಿಶೋಧಕ ಇದ್ರೀಸ್ ಪುಲಾಬೆ, ಜೊತೆ ಕಾರ್ಯದರ್ಶಿ ಅಬ್ದು ಸಲಾಂ ಕೇಶವ ನಗರ, ಸದಸ್ಯರಾದ ಅಶ್ರಫ್ ಗಾಂಧಿ ನಗರ ,ಅಶ್ರಫ್ ಕಿರೋಡಿ ,ಯುಕೆ ಇರ್ಫಾನ್ ಪೆರಿಂಜೆ & ಶಾಂತಿ ನಗರ ಮದರಸ ಅಧ್ಯಕ್ಷ ಅಶ್ರಫ್ ಉಪಸ್ಥಿತರಿದ್ದರು.


ಪ್ರಮುಖ ದಾನಿಗಳಾದ ಸಾರ ಇಬ್ರಾಹಿಂ ಟ್ರಸ್ಟ್ ನ ಪರವಾಗಿ ಅಕ್ಬರ್ ಪೆರಿಂಜೆ ,ಯುಕೆ ಮೊಹಮ್ಮದ್ ಹಾಜಿ ಹಾಗು ಮೊಹಮ್ಮದ್ ಮುಸ್ತಫಾ ರವರನ್ನು ಶಾಲು ಹೊದಿಸಿ ಗೌರವಿಸಲಾಯಿತು. ಮೊಹಮ್ಮದ್ ಶಾಫಿ ಸ್ವಾಗತಿಸಿದರು. ಆಡಳಿತ ಸಮಿತಿ ಪ್ರಧಾನ ಕಾರ್ಯದರ್ಶಿ ರಫೀಕ್ ಪಡ್ಡ ವಂದಿಸಿದರು.

Related posts

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ

Suddi Udaya

 ಕಳಿಯ: ಅಕ್ರಮ ಮರಳು ಸಾಗಾಟ: ಎರಡು ಪಿಕಪ್ ವಾಹನ ಸಹಿತ ಮರಳು ವಶ

Suddi Udaya

ಅ.22 ಬಳಂಜ ಶಾರದೋತ್ಸವ, ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಶುಭಹಾರೈಸಿದ ಸತೀಶ್ ರೈ ಬಾರ್ದಡ್ಕಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಹಾಗೂ ಊರ ಮಹನೀಯರ ಸಹಕಾರದೊಂದಿಗೆ ವಿಜೃಂಭಣೆಯ ಶಾರದೋತ್ಸವಕ್ಕೆ ತಯಾರಿವೈಭವದ ಮೆರವಣಿಗೆ, ಆಟೋಟ ಸ್ಪರ್ಧೆಗಳು,500 ಭಜಕರಿಂದ ಭಜನೆ,ಸಾಂಸ್ಕೃತಿಕ ವೈಭವ ಕಾರ್ಯಕ್ರಮ

Suddi Udaya

ಶಿಬಾಜೆ ಶ್ರೀ ಕ್ಷೇತ್ರ ಮೊಂಟೆತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶತಚಂಡಿಕಾಯಾಗ

Suddi Udaya

ವಿಧಾನಪರಿಷತ್ತು ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜು ಪೂಜಾರಿ

Suddi Udaya

ಅಳದಂಗಡಿ ವಲಯ ಅರಣ್ಯದಲ್ಲಿ ಹಣ್ಣು ಹಂಪಲುಗಳ ಗಿಡ ನಾಟಿ ಕಾರ್ಯಕ್ರಮ

Suddi Udaya
error: Content is protected !!