ಬೆಳ್ತಂಗಡಿ: ಬೆಂಗಳೂರು ಬಿಲ್ಲವ ಅಸೋಸಿಯೇಷನ್ ವತಿಯಿಂದ ನಡೆದ ಸುವರ್ಣ ಸಂಭ್ರಮದ ಕಾರ್ಯಕ್ರಮದಲ್ಲಿ ಸೆ.14ರಂದು ಬೆಂಗಳೂರು ಬಿಲ್ಲವ ರ ಅಸೋಸಿಯೇಷನ್ ಮಾಜಿ ಅಧ್ಯಕ್ಷ ನಿವೃತ್ತ ಪೊಲೀಸ್ ವರಿಷ್ಟಾಧಿಕಾರಿ ಪೀತಾಂಬರ ಹೆರಾಜೆ ಅವರನ್ನು ಬೆಂಗಳೂರು ಬಿಲ್ಲವ ಭವನದಲ್ಲಿ ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಆರ್ಯ ಈಡಿಗ ಮಹಾಸಂಸ್ಥಾನ ಸೋಲೂರು ಇದರ ಮಠಾಧಿಪತಿಗಳಾದ ಶ್ರೀ ವಿಖ್ಯಾತರಂದ ಸ್ವಾಮೀಜಿ, ಸಂಘದ ಗೌರವಾಧ್ಯಕ್ಷ ಗೋಪಾಲಕೃಷ್ಣ ನೆಕ್ಕಿದಪುಣಿ, ಅಧ್ಯಕ್ಷ ಎಮ್ ವೇದ ಕುಮಾರ, ಹಿರಿಯ ಉಪಾಧ್ಯಕ್ಷ ಕೇಶವ ಪೂಜಾರಿ, ಉಪಾಧ್ಯಕ್ಷೆ ಶ್ರೀಮತಿ ಜಯಂತಿ ವಿಜಯ ಕೃಷ್ಣ, ಪ್ರಧಾನ ಕಾರ್ಯದರ್ಶಿ ಸಂಪತ್ ಕುಮಾರ್, ಕೋಶಾಧಿಕಾರಿ ಜಯಾನಂದ ಪೂಜಾರಿ, ಜೊತೆ ಕಾರ್ಯದರ್ಶಿ ಎಂ ಕೆ ದಾಮೋದರ್ ಸುವರ್ಣ, ಸಂಘಟನಾ ಕಾರ್ಯದರ್ಶಿ ಕೆ ನಾರಾಯಣ ಪೂಜಾರಿ, ಮಹಿಳಾ ಅಧ್ಯಕ್ಷೆ ಶ್ರೀಮತಿ ಹರಿಣಿ ಹಾಗೂ ಇತರ ಗಣ್ಯರೂ ಉಪಸ್ಥಿತರಿದ್ದರು.











