23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು ಗ್ರಾಮ ಪಂಚಾಯತ್ ಸ್ತ್ರೀಶಕ್ತಿ ಗೊಂಚಲಿನ ಸಭೆ

ಬೆಳಾಲು ಗ್ರಾಮ ಪಂಚಾಯತ್ ಸ್ತ್ರೀಶಕ್ತಿ ಗೊಂಚಲಿನ ಸರ್ವ ಸದಸ್ಯರ ಸಭೆಯನ್ನು ಗೊಂಚಲಿನ ಅಧ್ಯಕ್ಷೆ ಆಶಾ ಭಟ್ ಇವರ ಉಪಸ್ಥಿತಿಯಲ್ಲಿ ನಡೆಯಿತು.

ವೇದಿಕೆಯಲ್ಲಿ ಪಂಚಾಯತ್ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಗೌಡ, ಗೊಂಚಲಿನ ಕಾರ್ಯದರ್ಶಿ ಹರಿಣಾಕ್ಷಿ, ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಶಾರದಾ, ಗೊಂಚಲಿನ ಕೋಶಾಧಿಕಾರಿ ವಸಂತಿ ಉಪಸ್ಥಿತರಿದ್ದರು.

. ಪಂಚಾಯತ್ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಇವರು ನಾವೆಲ್ಲ ಸಮವಸ್ತ್ರ ಧರಿಸಿ ಒಟ್ಟಿಗೆ ಇದ್ದಾಗ ನಾವೆಲ್ಲ ಒಂದೇ ಎಂಬ ಭಾವನೆ ಬರುತ್ತದೆ. ಎಲ್ಲರೂ ಒಗ್ಗಟ್ಟಾಗಿರಲು ಸಾಧ್ಯ, ನಮಗೆ ತಿಳಿದಿರುವುದನ್ನು ಇನ್ನೊಬ್ಬರಿಗೆ ತಿಳಿಸಿ ಅವರನ್ನು ಮೇಲೆ ತರಬೇಕು ಎಂದು ಹಿತನುಡಿದರು.

ನಂತರ ಪದಾಧಿಕಾರಿಗಳ ಆಯ್ಕೆಮಾಡಲಾಯಿತು. ಅಧ್ಯಕ್ಷರಾಗಿ ಕಮಲ, ಉಪಾಧ್ಯಕ್ಷರಾಗಿ ಭಾರತಿ, ಕಾರ್ಯದರ್ಶಿಯಾಗಿ ಲಲಿತ, ಜೊತೆ ಕಾರ್ಯದರ್ಶಿಯಾಗಿ ಸುಮತಿ, ಕೋಶಾಧಿಕಾರಿಯಾಗಿ ಚಿತ್ರ ಇವರನ್ನು ಆಯ್ಕೆ ಮಾಡಿ ನಿರ್ಣಯ ಪುಸ್ತಕ ನೀಡುವುದರ ಮೂಲಕ ಅಧಿಕಾರ ಹಸ್ತಾಂತರಿಸಲಾಯಿತು. ಲತಾ ಇವರು ಕಪಿಲ ವಿವಿದೋದ್ಧೇಶ ಸಹಕಾರ ಸಂಘ ದಿಂದ ಸಿಗುವ ಸಾಲ ಸೌಲಭ್ಯಗಳ ಬಗ್ಗೆ ತಿಳಿಸಿದರು.

ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಶಾರದಾ ಇವರು ಸ್ತ್ರೀಶಕ್ತಿ ಸಂಘದ ಸದಸ್ಯರು ತಮಗೆ ಸಿಕ್ಕಿರುವ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಯಾವುದೂ ಕೂಡ ಆಗುವುದಿಲ್ಲ ಅಂತ ಹಿಂದೆ ಸರಿಯಬಾರದು. ಎಲ್ಲದರಲ್ಲೂ ಮುಂದೆ ಬರಬೇಕು ಎಂದು ತಿಳಿಸಿದರು. ಆಶಾ ಸ್ವಾಗತಿಸಿದರು. ಲತಾ ಕಾರ್ಯಕ್ರಮವನ್ನು ನಿರೂಪಿಸಿ ವಾರ್ಷಿಕ ವರದಿಯನ್ನು ಮಂಡಿಸಿದರು. ಅಂಗನವಾಡಿ ಕಾರ್ಯಕರ್ತೆ ಭಾರತಿ ವಂದಿಸಿದರು.

Related posts

ಗೇರುಕಟ್ಟೆ ಮೆದಿನದಲ್ಲಿ ‘ಸುಧನ್ವ ಮೋಕ್ಷ’ ತಾಳಮದ್ದಳೆ

Suddi Udaya

ಶಾಸಕರ ವಿರುದ್ಧ ಸಾಮಾಜಿಕ ಜಾಲತಾಣದ ಮೂಲಕ ಅಪಪ್ರಚಾರ

Suddi Udaya

ಮಚ್ಚಿನ: ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಚಿಕಿತ್ಸಾ ನೆರವು

Suddi Udaya

ಹೊಸಂಗಡಿ: ಬಡಕೋಡಿ ನಿವಾಸಿ ಶ್ರೀಮತಿ ಸುಶೀಲ ನಿಧನ

Suddi Udaya

ಉಜಿರೆ ಶ್ರೀ ಧ.ಮಂ. ಕಾಲೇಜಿನಲ್ಲಿ ಯಕ್ಷಗಾನ ಕೇಂದ್ರದ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ

Suddi Udaya

ಭಾರಿ ಗಾಳಿ ಮಳೆಗೆ ಹಾನಿಗೀಡಾದ ಮನೆ, ಶಾಲೆ, ಮದರಸಗಳಿಗೆ ನಾವೂರು ಗ್ರಾ.ಪಂ ನಿಂದ ಭೇಟಿ ಪರಿಶೀಲನೆ

Suddi Udaya
error: Content is protected !!