22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು ಗ್ರಾಮ ಪಂಚಾಯತ್ ಸ್ತ್ರೀಶಕ್ತಿ ಗೊಂಚಲಿನ ಸಭೆ

ಬೆಳಾಲು ಗ್ರಾಮ ಪಂಚಾಯತ್ ಸ್ತ್ರೀಶಕ್ತಿ ಗೊಂಚಲಿನ ಸರ್ವ ಸದಸ್ಯರ ಸಭೆಯನ್ನು ಗೊಂಚಲಿನ ಅಧ್ಯಕ್ಷೆ ಆಶಾ ಭಟ್ ಇವರ ಉಪಸ್ಥಿತಿಯಲ್ಲಿ ನಡೆಯಿತು.

ವೇದಿಕೆಯಲ್ಲಿ ಪಂಚಾಯತ್ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಗೌಡ, ಗೊಂಚಲಿನ ಕಾರ್ಯದರ್ಶಿ ಹರಿಣಾಕ್ಷಿ, ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಶಾರದಾ, ಗೊಂಚಲಿನ ಕೋಶಾಧಿಕಾರಿ ವಸಂತಿ ಉಪಸ್ಥಿತರಿದ್ದರು.

. ಪಂಚಾಯತ್ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಇವರು ನಾವೆಲ್ಲ ಸಮವಸ್ತ್ರ ಧರಿಸಿ ಒಟ್ಟಿಗೆ ಇದ್ದಾಗ ನಾವೆಲ್ಲ ಒಂದೇ ಎಂಬ ಭಾವನೆ ಬರುತ್ತದೆ. ಎಲ್ಲರೂ ಒಗ್ಗಟ್ಟಾಗಿರಲು ಸಾಧ್ಯ, ನಮಗೆ ತಿಳಿದಿರುವುದನ್ನು ಇನ್ನೊಬ್ಬರಿಗೆ ತಿಳಿಸಿ ಅವರನ್ನು ಮೇಲೆ ತರಬೇಕು ಎಂದು ಹಿತನುಡಿದರು.

ನಂತರ ಪದಾಧಿಕಾರಿಗಳ ಆಯ್ಕೆಮಾಡಲಾಯಿತು. ಅಧ್ಯಕ್ಷರಾಗಿ ಕಮಲ, ಉಪಾಧ್ಯಕ್ಷರಾಗಿ ಭಾರತಿ, ಕಾರ್ಯದರ್ಶಿಯಾಗಿ ಲಲಿತ, ಜೊತೆ ಕಾರ್ಯದರ್ಶಿಯಾಗಿ ಸುಮತಿ, ಕೋಶಾಧಿಕಾರಿಯಾಗಿ ಚಿತ್ರ ಇವರನ್ನು ಆಯ್ಕೆ ಮಾಡಿ ನಿರ್ಣಯ ಪುಸ್ತಕ ನೀಡುವುದರ ಮೂಲಕ ಅಧಿಕಾರ ಹಸ್ತಾಂತರಿಸಲಾಯಿತು. ಲತಾ ಇವರು ಕಪಿಲ ವಿವಿದೋದ್ಧೇಶ ಸಹಕಾರ ಸಂಘ ದಿಂದ ಸಿಗುವ ಸಾಲ ಸೌಲಭ್ಯಗಳ ಬಗ್ಗೆ ತಿಳಿಸಿದರು.

ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಶಾರದಾ ಇವರು ಸ್ತ್ರೀಶಕ್ತಿ ಸಂಘದ ಸದಸ್ಯರು ತಮಗೆ ಸಿಕ್ಕಿರುವ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಯಾವುದೂ ಕೂಡ ಆಗುವುದಿಲ್ಲ ಅಂತ ಹಿಂದೆ ಸರಿಯಬಾರದು. ಎಲ್ಲದರಲ್ಲೂ ಮುಂದೆ ಬರಬೇಕು ಎಂದು ತಿಳಿಸಿದರು. ಆಶಾ ಸ್ವಾಗತಿಸಿದರು. ಲತಾ ಕಾರ್ಯಕ್ರಮವನ್ನು ನಿರೂಪಿಸಿ ವಾರ್ಷಿಕ ವರದಿಯನ್ನು ಮಂಡಿಸಿದರು. ಅಂಗನವಾಡಿ ಕಾರ್ಯಕರ್ತೆ ಭಾರತಿ ವಂದಿಸಿದರು.

Related posts

ಪುಂಜಾಲಕಟ್ಟೆ ಸ.ಪ್ರ.ದ.‌ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ನ ಏಳು ವಿದ್ಯಾರ್ಥಿಗಳಿಗೆ ನಿಪುಣ್ ಪ್ರಶಸ್ತಿ: ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ರವರಿಂದ ಪ್ರಶಸ್ತಿ ಪ್ರದಾನ

Suddi Udaya

ಬೆಳ್ತಂಗಡಿ: ಜೈ ಕರ್ನಾಟಕ ಗಾಯಕರ ಬಳಗದ ಜಿಲ್ಲಾ ಪದಾಧಿಕಾರಿಗಳ ಆಯ್ಕೆ: ಗೌರವ ಅಧ್ಯಕ್ಷರಾಗಿ ಮನೋಹರ ಪ್ರಸಾದ್, ಜಿಲ್ಲಾ ಅಧ್ಯಕ್ಷರಾಗಿ ಇಸ್ಮಾಯಿಲ್ ಬಂಗಾಡಿ

Suddi Udaya

ಬೆಳ್ತಂಗಡಿ ಎಸ್.ಡಿ.ಎಂ ಶಾಲೆಯಲ್ಲಿ ಆಟಿದ ಗಮ್ಮತ್

Suddi Udaya

ಮಚ್ಚಿನ ಅಂಗನವಾಡಿ ಕೇಂದ್ರಕ್ಕೆ ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಮಕ್ಕಳ ಬರೆಯುವ ಟೇಬಲ್ ಕೊಡುಗೆ

Suddi Udaya

ಕರಾಯ: ಚರಂಡಿಗೆ ಬಿದ್ದ ಖಾಸಗಿ ಬಸ್

Suddi Udaya

ಸೌಜನ್ಯ ಸಾವಿನ ಪ್ರಕರಣದ ತನಿಖೆ ನಡೆಸುವಂತೆ ಎಸ್‌.ಐ.ಟಿ ಅಧಿಕಾರಿಗಳಿಗೆ ದೂರು ನೀಡಿದ ಸೌಜನ್ಯ ತಾಯಿ ಕುಸುಮಾವತಿ

Suddi Udaya
error: Content is protected !!