23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಾಜಕೇಸರಿ ಸೇವಾ ಟ್ರಸ್ಟ್ ನ ನೂತನ ಲಾಂಛನ ಬಿಡುಗಡೆ

ಬೆಳ್ತಂಗಡಿ: ರಾಜಕೇಸರಿ ಸೇವಾ ಟ್ರಸ್ಟ್ ಕರ್ನಾಟಕ ಇದರ ನೂತನ ಲಾಂಛನ ಬಿಡುಗಡೆ ಕಾರ್ಯಕ್ರಮವು ಮಂಗಳೂರಿನ ಮಹತೋಭಾರ ಶ್ರೀ ಮಂಗಳಾದೇವಿ ದೇವಸ್ಥಾನದಲ್ಲಿ ಇತ್ತೀಚೆಗೆ ನಡೆಯಿತು.

ಕ್ಷೇತ್ರದ ಅರ್ಚಕ ಬಾಲಚಂದ್ರ ಐತಾಳ್ ರವರು ನೂತನ ಲಾಂಛನವನ್ನು ಬಿಡುಗಡೆಗೊಳಿಸಿ ಶ್ರೀದೇವಿಯು ಇನ್ನಷ್ಟು ಸೇವಾ ಕಾರ್ಯಗಳನ್ನು ಮಾಡಲು ಪ್ರೇರಣೆ ನೀಡಿ ಅನುಗ್ರಹಿಸಲಿ ಎಂದು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಜಿಲ್ಲೆಯ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರನ್ನು ಭೇಟಿಯಾಗಿ ಸಂಸ್ಥೆಯ ಈವರೆಗಿನ ಸೇವಾ ಕಾರ್ಯ ಚಟುವಟಿಕೆಗಳು ಹಾಗೂ ಮುಂದಿನ ಕಾರ್ಯ ಯೋಜನೆಗಳ ಬಗ್ಗೆ ಸವಿಸ್ತಾರವಾಗಿ ಮಾಹಿತಿ ನೀಡಲಾಯಿತು. ಬಡ ನಿರ್ಗತಿಕರಿಗೆ ಸೂರು ಒದಗಿಸುವ “ಆಸರೆ ಯೋಜನೆ” ಮತ್ತು ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ “ಸ್ವಚ್ಛಾಲಯ ಅಭಿಯಾನ” ಗಳ ಬಗ್ಗೆ ಸಂಸದರು ಬಹಳ ಮೆಚ್ಚುಗೆ ವ್ಯಕ್ತಪಡಿಸಿ ಮುಕ್ತಕಂಠದಿಂದ ಶ್ಲಾಘಿಸಿದರು. ಮುಂದಿನ ದಿನಗಳಲ್ಲಿ ಸಂಸ್ಥೆಯ ಜನಪರ ಕಾರ್ಯ ಯೋಜನೆಗಳಲ್ಲಿ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ರಾಜಕೇಸರಿ ಸೇವಾ ಟ್ರಸ್ಟ್ ಕರ್ನಾಟಕ ಇದರ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ, ದ.ಕ ಜಿಲ್ಲಾಧ್ಯಕ್ಷರಾದ ಸಂತೋಷ್ ಕೊಲ್ಯ , ಬೆಳ್ತಂಗಡಿ ತಾಲೂಕು ಘಟಕದ ಅಧ್ಯಕ್ಷರಾದ ಸತೀಶ್ ಕಂಗಿತ್ತಿಲು ಹಾಗೂ ಪದಾಧಿಕಾರಿಗಳಾದ ಗುರುಪ್ರಸಾದ್ ಕುಲಾಲ್, ಲೋಕೇಶ್ ಮಂಗಳಾದೇವಿ, ವರುಣ್ ಕುಮಾರ್ ಬಪ್ಪನಾಡು, ಮನೋಜ್ ಕುಂದರ್, ಪ್ರವೀಣ್ ಕುಲಾಲ್, ಸಂದೀಪ್ ಬೆಳ್ತಂಗಡಿ, ವಿನೋದ್ ಲಾಯಿಲಾ, ಸಂದೇಶ್ ,ಶರತ್ ಕರಾಯ ಮತ್ತು ಸಂತೋಷ್ ಉಜಿರೆ ಉಪಸ್ಥಿತರಿದ್ದರು.

Related posts

ಮಾ.1: ಉಜಿರೆಯಲ್ಲಿ ಅನು ಇಲೆಕ್ಟ್ರಾನಿಕ್ಸ್ & ಫರ್ನಿಚರ್ಸ್ ಶುಭಾರಂಭ

Suddi Udaya

ನಡ: ನಿವೃತ್ತ ಶಿಕ್ಷಕ ವೆಂಕಪ್ಪ ಗೌಡ ನಿಧನ

Suddi Udaya

ಕಳಿಯ : ಎರುಕಡಪ್ಪು ಅಂಗನವಾಡಿ ಕೇಂದ್ರದಲ್ಲಿ ಮಾವಿನಕಾಯಿಯನ್ನು ಹೋಲುವ ಕೋಳಿ ಮೊಟ್ಟೆ

Suddi Udaya

ಮಡಂತ್ಯಾರು: ‘ನೇತ್ರ ವೈದ್ಯರ ನಡೆ ಗ್ರಾಮ ಪಂಚಾಯತ್ ಕಡೆ’ ಯೋಜನಡಿಯಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ಕಾಜೂರು ಉರೂಸ್ ಪ್ರಯುಕ್ತ ಪ್ರತಿದಿನ ಉಪನ್ಯಾಸ ಮಾಲಿಕೆ; ಪ್ರಮುಖ ವಿದ್ವಾಂಸರಿಂದ ಧರ್ಮ ಸಂದೇಶ, ಬರ್ದಾ ಸಂಗಮ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ತಣ್ಣೀರುಪಂಥ ವಲಯದ ಹಲೇಜಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya
error: Content is protected !!