25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸ್ನೇಹಮಯಿ ಕೃಷ್ಣ ವಿರುದ್ಧ ಬೆಳ್ತಂಗಡಿ ವೃತ್ತ ನಿರೀಕ್ಷಕರಿಗೆ ವೆಂಕಪ್ಪ ಕೋಟ್ಯಾನ್ ರಿಂದ ದೂರು

ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದಲ್ಲಿ 2012ರಲ್ಲಿ ಕೊಲೆಯಾದ ಸೌಜನ್ಯಳನ್ನು ಆಕೆಯ ಮಾವ ವಿಠಲ ಗೌಡ ಕೊಲೆ ಮಾಡಿದ್ದಾನೆ ಎಂದು ಆರೋಪ ಮಾಡಿ ಹೇಳಿಕೆ ನೀಡಿದ್ದ ಸ್ನೇಹಮಯಿ ಕೃಷ್ಣ ವಿರುದ್ದ ಬೆಳ್ತಂಗಡಿ ವೃತ್ತ ನಿರೀಕ್ಷಕರಿಗೆ ವೆಂಕಪ್ಪ ಕೋಟ್ಯಾನ್ ಸೆ.12 ರಂದು ದೂರು ನೀಡಿದ್ದಾರೆ.

ಸ್ನೇಹಮಯಿ ಕೃಷ್ಣ ಅವರು ವಿಠಲ ಗೌಡ ಅವರ ಬಗ್ಗೆ ಪೊಲೀಸರಿಗೆ ದೂರು ನೀಡಿರುವುದಾಗಿ ತಿಳಿಸಿ ಬಳಿಕ ಮಾದ್ಯಮಗಳಿಗೆ ಹೇಳಿಕೆ ನೀಡಿದ್ದು ಇದು ಸೌಜನ್ಯ ಕೊಲೆಗಾರರನ್ನು ಪತ್ತೆ ಹಚ್ಚಬೇಕು ಎಂದು ನಡೆಯುತ್ತಿರುವ ಹೋರಾಟವನ್ನು ದಾರಿ ತಪ್ಪಿಸುವ ದುರುದ್ದೇಶದಿಂದ ಮಾಡಿರುವುದಾಗಿದೆ ಈತನನ್ನು ಮೈಸೂರಿನಿಂದ ಕರೆಸಿ ಈ ರೀತಿ ಹೇಳಿಕೆ ನೀಡಿರುವುದರ ಹಿಂದೆ ಯಾರೋ ಇರುವ ಅನುಮಾನವಿದೆ ಆದ್ದರಿಂದ ಆತನನ್ನು ಠಾಣೆಗೆ ಕರೆಸಿ ಕುಲಂಕುಷವಾಗಿ ವಿಚಾರಣೆ ನಡೆಸಬೇಕು ಹಾಗೂ ದೂರು ನೀಡಲು ಪ್ರೇರೇಪಿಸಿದವರನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಒತ್ತಾಯಿಸಲಾಗಿದೆ. ಬೆಳ್ತಂಗಡಿ ಪೊಲೀಸರು ದೂರನ್ನು ಸ್ವೀಕರಿಸಿದ್ದಾರೆ.

Related posts

ಧರ್ಮಸ್ಥಳ ಗ್ರಾ.ಪಂ. ಸ್ವಚ್ಛತೆಯೇ ಸೇವೆ ಕಾರ್ಯಕ್ರಮದಲ್ಲಿ ಸ್ವಚ್ಛತಾ ನೌಕರರ ಕುಟುಂಬದ ಆರೋಗ್ಯ ತಪಾಸಣೆ, ಸನ್ಮಾನ ಹಾಗೂ ವಸ್ತ್ರ ವಿತರಣೆ

Suddi Udaya

ಕನ್ಯಾಡಿ ಸೇವಾನಿಕೇತನಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಇಂದಬೆಟ್ಟು: ಸ. ಹಿ. ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಗುಂಡೂರಿ: ಮಂಜಪ್ಪ ದೇವಾಡಿಗರಿಗೆ ನುಡಿನಮನ ಕಾರ್ಯಕ್ರಮ

Suddi Udaya

ನಡ ಸರಕಾರಿ ಪ್ರೌಢ ಶಾಲೆಯಲ್ಲಿ ‘ಗಣಿತ ಸಂಘದ ಉದ್ಘಾಟನೆ’

Suddi Udaya

ಹೊಸಂಗಡಿ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!