22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ರೂ. 341 ಕೋಟಿ ವ್ಯವಹಾರ, ರೂ. 1.53 ಕೋಟಿ ಲಾಭ, ಸದಸ್ಯರಿಗೆ ಶೇ. 13 ಡಿವಿಡೆಂಟ್

ಅರಸಿನಮಕ್ಕಿ : ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2024-25 ನೇ ಸಾಲಿನ ವಾರ್ಷಿಕ ಮಹಾಸಭೆಯ ಸೆ. 14 ರಂದು ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಅರಸಿನಮಕ್ಕಿಯಲ್ಲಿ ಜರುಗಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ರಾಘವೇಂದ್ರ ನಾಯಕ್ ವಹಿಸಿ ಮಾತನಾಡಿ ಸಂಘವು ವರದಿ ವರ್ಷದಲ್ಲಿ ಒಟ್ಟು ರೂ. 341 ಕೋಟಿ ವ್ಯವಹಾರ ನಡೆಸಿ, ರೂ. 1.53 ಕೋಟಿ ಲಾಭ ಗಳಿಸಿದೆ. ಸದಸ್ಯರಿಗೆ ಶೇ. 13 ರಷ್ಟು ಡಿವಿಡೆಂಟ್ ನೀಡುವುದಾಗಿ ತಿಳಿಸಿದರು.

ಈ ವೇಳೆ 2024-25 ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಅರಸಿನಮಕ್ಕಿ ಪ್ರೌಢ ಶಾಲೆ ಹಾಗೂ ನೇಲ್ಯಡ್ಕ ಪ್ರೌಢ ಶಾಲೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಹಾಗೂ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಸಂಘದ ಸದಸ್ಯರ ಮಕ್ಕಳಿಗೆ ಗೌರವಿಸಲಾಯಿತು. ಹಾಗೂ ಶ್ರೀ ಗೋಪಾಲಕೃಷ್ಣ ಅನುದಾನಿತ ಹಿ.ಪ್ರಾ. ಶಾಲಾ ನಿವೃತ್ತ ಶಿಕ್ಷಕ ಸೀತಾರಾಮ ರವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಉಪಾಧ್ಯಕ್ಷ ರಾಜು ಕೆ., ನಿರ್ದೇಶಕರಾದ ಕೊರಗಪ್ಪ ಗೌಡ, ರತೀಶ್ ಬಿ, ಧರ್ಮರಾಜ್ ಎ., ಗಂಗಾವತಿ, ಬೇಬಿ, ನಾಗೇಶ್ ಜಿ., ಬೇಬಿ ಕಿರಣ್, ಕೃಷ್ಣಪ್ಪ ಗೌಡ ಹಾಗೂ ಸಂಘದ ಸಿಬ್ಬಂದಿಗಳು ಉಪಸ್ಥಿತರಿದ್ದು, ಸಹಕರಿಸಿದರು.

ಸಂಘದ ನಿರ್ದೇಶಕ ವರದಶಂಕರ ದಾಮ್ಲೆ ಸ್ವಾಗತಿಸಿ, ಮುಖ್ಯಕಾರ್ಯನಿರ್ವಹಣಾಧಿಕಾರಿ ಟಿ. ರವಿಚಂದ್ರ ರಾವ್ ವಾರ್ಷಿಕ ವರದಿ ವಾಚಿಸಿದರು. ಶಾಖಾಧಿಕಾರಿ ಶ್ರೀಮತಿ ಜಯಂತಿ ಡಿ. ಸನ್ಮಾನಿತರ ಪರಿಚಯವನ್ನು ಮಾಡಿದರು. ಉಪಕಾರ್ಯದರ್ಶಿ ಶ್ರೀಮತಿ ಹರಿಣಾಕ್ಷಿ ಡಿ. ಕಾರ್ಯಕ್ರಮ ನಿರೂಪಿಸಿದರು. ನಿರ್ದೇಶಕ ರತೀಶ್ ಗೌಡ ಧನ್ಯವಾದವಿತ್ತರು. ಮೃತ ಪಟ್ಟ ಸಂಘದ ಸದಸ್ಯರಿಗೆ ಮೌನ ಪ್ರಾರ್ಥನೆಯನ್ನು ಸಲ್ಲಿಸಲಾಯಿತು. ಬೆಳಿಗ್ಗೆ ಬೃಹತ್ ರಕ್ತದಾನ ಶಿಬಿರ ಹಾಗೂ ಮಧ್ಯಾಹ್ನ ಯಕ್ಷಗಾನ ತಾಳಮದ್ದಳೆ ಶಲ್ಯ ಸಾರಥ್ಯ ನಡೆಯಿತು.

Related posts

ದೇಶದ ಪ್ರಧಾನಿ ನರೇಂದ್ರ ಮೋದಿಯವರಿಗೆ ಮದುವೆ ಆಮಂತ್ರಣ ಕಳುಹಿಸಿದ ವರ: ವೈವಾಹಿಕ ಬದುಕಿಗೆ ಕಾಲಿಟ್ಟ ಸುಬ್ರಹ್ಮಣ್ಯ ಆಚಾರ್ಯ – ಸವಿತಾ ದಂಪತಿಗೆ ಪ್ರಧಾನಿ ಕಾರ್ಯಲಯದಿಂದ ತಲುಪಿತು ಶುಭಾಶಯ ಪತ್ರ

Suddi Udaya

ಗುಂಡ್ಯ – ಉಪ್ಪಿನಂಗಡಿ ಮಾರ್ಗದಲ್ಲಿ ಶಾಲಾ – ಕಾಲೇಜು ವಿದ್ಯಾರ್ಥಿಗಳಿಗೆ ನಿರಂತರ ಕೆ.ಎಸ್.ಆರ್.ಟಿ.ಸಿ ಬಸ್ ಸಮಸ್ಯೆ: 2 ದಿನಗಳಲ್ಲಿ ಬಸ್ ಸಮಸ್ಯೆ ಸರಿಪಡಿಸದಿದ್ದಲ್ಲಿ ಎಂಜಿರದಲ್ಲಿ ಬೃಹತ್ ಪ್ರತಿಭಟನೆಯ ಎಚ್ಚರಿಕೆ

Suddi Udaya

ವಿಕಲಚೇತನರ ಆಧಾರ್ ಕಾಡಿನ ತಾಂತ್ರಿಕ ದೋಷವನ್ನು ಸರಿಪಡಿಸುವಂತೆ ಜಿಲ್ಲಾಧಿಕಾರಿಯವರಿಗೆ ಮನವಿ

Suddi Udaya

ಆಪರೇಷನ್ ಸಿಂಧೂರ: ಉಜಿರೆಯಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ

Suddi Udaya

ವೇಣೂರು ಗ್ರಾ.ಪಂ. ಮಾಜಿ ಅಧ್ಯಕ್ಷ ಕರುಣಾಕರ ಹೆಗ್ಡೆ ನಿಧನ

Suddi Udaya

ನಾಳ ಅಂಗನವಾಡಿ ಪೋಷನ್ ಮಾಸಾಚರಣೆ ಹಾಗೂ ಮೇಲ್ವಿಚಾರಕಿ ಸನ್ಮಾನ

Suddi Udaya
error: Content is protected !!