32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆ ಬಡಗಕಾರಂದೂರು ಒಕ್ಕೂಟದ ತ್ರೈಮಾಸಿಕ ಸಭೆ

ಅಳದಂಗಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಡಗಕಾರಂದೂರು ಗ್ರಾಮ ಎ ಒಕ್ಕೂಟದ ತ್ರೈಮಾಸಿಕ ಸಭೆಯು ಹರೀಶ್ ಸಾಲಿಯನ್ ನಿನ್ನಿಕಲ್ಲು ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ ಯೋಜನೆಯ ಜಿಲ್ಲಾ ವಿಮಾ ಸಮನ್ವಯ ಅಧಿಕಾರಿ ಶ್ರೀಮತಿ ಹೇಮಲತಾ ಹೆಗ್ಡೆ ಇವರು ಪಿ ಆರ್ ಕೆ ಮತ್ತು ಸಂಪೂರ್ಣ ಸುರಕ್ಷಾದ ಬಗ್ಗೆ ಜನರಿಗೆ ಮನಮುಟ್ಟುವ ಹಾಗೆ ಮಾಹಿತಿ ನೀಡಿದರು. ಜನರ ಪ್ರಶ್ನೆಗಳಿಗೆ ಉತ್ತರವನ್ನು ನೀಡಿದರು.

ನಂತರ ಪ್ರಾಥಮಿಕ ಆರೋಗ್ಯ ಕೇಂದ್ರ ಅಳೆದಂಗಡಿಯ ಜಿಲ್ಲಾ ಸುರಕ್ಷಾಧಿಕಾರಿ ಶ್ರೀಮತಿ ತೃಪ್ತಿ ಆಚಾರ್ಯ ಇವರು ಆರೋಗ್ಯದಲ್ಲಿ ಆಗುವ ಏರುಪೇರುಗಳ ಬಗ್ಗೆ ಯಾವ ರೀತಿ ಜಾಗೃತರಾಗಿರಬೇಕು ಎಂಬ ಮಾಹಿತಿಯನ್ನು ನೀಡಿದರು. ಬಿಪಿ ಶುಗರ್ ತಪಾಸಣೆಯನ್ನು ಮಾಡಿದರು. ಆಶಾ ಕಾರ್ಯಕರ್ತೆ ಶ್ರೀಮತಿ ಶಾರದಾ ಶೆಟ್ಟಿ ಸಹಕಾರ ನೀಡಿದರು.

ವಲಯ ಮೇಲ್ವಿಚಾರಕರಾದ ಶ್ರೀಮತಿ ಯಶೋಧ ಎಂ ಮಾತನಾಡಿ ಸಂಘದ ನಿರ್ವಹಣೆ ಭಾಗವಹಿಸುವಿಕೆ. ಯೋಜನೆಗೆ ಸಂಬಂಧಪಟ್ಟ ಎಲ್ಲಾ ವಿಚಾರಗಳನ್ನು ತಿಳಿಸಿದರು. ಜನನಿ ತಂಡದಿಂದ ಸಲಹಾ ಪೆಟ್ಟಿಗೆಯನ್ನು ಒಕ್ಕೂಟಕ್ಕೆ ಹಸ್ತಾಂತರಿಸಿದರು. ವೇದಿಕೆಯಲ್ಲಿ ಸೇವಾ ಪ್ರತಿನಿಧಿ ಶ್ರೀಮತಿ ಶುಭ ಹರೀಶ್ ರೈ, ಪದಾಧಿಕಾರಿಗಳು ಉಪಸ್ಥಿತರಿದ್ದರು. ಜಗನ್ನಾಥ್ ಕುಲಾಲ್ ಸ್ವಾಗತಿಸಿ, , ಮನೋಹರ್ ಪ್ರಸಾದ್ ನಿರೂಪಿಸಿ, ಧನ್ಯವಾದವಿತ್ತರು.

Related posts

ನಿಡ್ಲೆ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಪಿಲಿಕಜೆಬೈಲ್ ವತಿಯಿಂದ ಶ್ರಮದಾನ

Suddi Udaya

ಶಿರ್ಲಾಲು ಸ್ವಾಮಿ ವಿವೇಕಾನಂದ ಯುವಕ ಮಂಡಲದ ಮುಂದಾಳತ್ವದಲ್ಲಿ ರಸ್ತೆ ಬದಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಉಜಿರೆ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಸರಕಾರಿ ಬಸ್ಸು

Suddi Udaya

ಉಜಿರೆ ಶ್ರೀ ಧ. ಮಂ. ಪ.ಪೂ. ಕಾಲೇಜಿನಲ್ಲಿ ಮಾದಕ ದ್ರವ್ಯಗಳ ದುಷ್ಪರಿಣಾಮದ ವಿಷಯದ ಕುರಿತು ಉಪನ್ಯಾಸ

Suddi Udaya

ನಾಲ್ಕೂರು: ಸಮಾಜ ಸೇವಕ ಹೆಚ್. ಧರ್ಣಪ್ಪ ಪೂಜಾರಿಯವರಿಗೆ ಯುವಶಕ್ತಿ ಫ್ರೆಂಡ್ಸ್ ನಿಂದ ಸನ್ಮಾನ

Suddi Udaya

ಡಿ.13-14: ಬಳಂಜ ಶಾಲೆಗೆ ಅಮೃತ ಮಹೋತ್ಸವ ಸಂಭ್ರಮ

Suddi Udaya
error: Content is protected !!