23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಉಜಿರೆ ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರ ಸಂಘ ಆಡಳಿತ ಮಂಡಳಿಯ 15 ನಿರ್ದೇಶಕರುಗಳ ಸ್ಥಾನಕ್ಕೆ ಅವಿರೋಧ ಆಯ್ಕೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರ ಸಂಘು ಉಜಿರೆ ಇದರ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಯ 15 ನಿರ್ದೇಶಕರುಗಳ ಸ್ಥಾನಕ್ಕೆ ಸೆ.21 ರಂದು ನಿಗದಿಯಾಗಿದ್ದ ಚುನಾವಣೆಯಲ್ಲಿ ಎಲ್ಲಾ ಸ್ಥಾನಗಳಿಗೆ ನಿರ್ದೇಶಕರುಗಳು ಆವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸಹಕಾರಿ ಸಂಘ- ಸಂಸ್ಥೆಗಳು ಸ್ಥಾನದಿಂದ ಹಾಲಿ ಅಧ್ಯಕ್ಷ ಶ್ರೀಧರ ಜಿ. ಭಿಡೆ, ಸಾಮಾನ್ಯ ಸ್ಥಾನ ಬೆಳ್ತಂಗಡಿ ಫಿರ್ಕಾದಿಂದ ಹಾಲಿ ಉಪಾಧ್ಯಕ್ಷ ಅನಂತ ಭಟ್ ಮಚ್ಚಿಮಲೆ, ಹಿಂದುಳಿದ ವರ್ಗ ಎ ಮೀಸಲು ಸ್ಥಾನ ಬೆಳ್ತಂಗಡಿ ಫಿರ್ಕಾದಿಂದ ಸೋಮನಾಥ ಬಂಗೇರ ವರ್ಪಾಳೆ ಅಳದಂಗಡಿ, ಹಿಂದುಳಿದ ವರ್ಗ ಬಿ ಮೀಸಲು ಸ್ಥಾನ ಕೊಕ್ಕಡ ಫಿರ್ಕಾದಿಂದ ಹೆಚ್. ಪದ್ಮಗೌಡ ಬೆಳಾಲು , ಗ್ರೇಸಿಯನ್ ವೇಗಸ್ ಕನ್ಯಾಡಿ-|| ಕಲ್ಮಂಜ, ಮತ್ತು ಬಾಲಕೃಷ್ಣ ಗೌಡ ಕೇರಿಮಾರ್, ಸಾಮಾನ್ಯ ಸ್ಥಾನ ವೇಣೂರು ಫಿರ್ಕಾದಿಂದ ಡಾ. ಶಶಿಧರ ಡೋಂಗ್ರೆ ಶೇಣೆರೆಬೈಲ್ ಅಳದಂಗಡಿ, ಸಾಮಾನ್ಯ ಸ್ಥಾನ ಕೊಕ್ಕಡ ಫಿರ್ಕಾದಿಂದ ಶಾಜಿ ಪಿ.ಎ ಶಿಬಾಜೆ, ಕೆ.ಜೆ ಆಗಸ್ಟೀನ್ ಪೆರ್ಮಾಣು ನಡ, ಭರತ್ ಕುಮಾರ್ ಹೆಚ್. ಇಂದಬೆಟ್ಟು ಬಂಗಾಡಿ, ತಿಮ್ಮಪ್ಪ ಗೌಡ ಪಿ. ಬನ್ನಂದೂರು ಬೆಳಾಲು, ಮಹಿಳಾ ಮೀಸಲು ಸ್ಥಾನದಿಂದ ಸುಭಾಷಿಣಿ ಆರ್. ಮಠದಬೈಲು ಬೆಳ್ತಂಗಡಿ, ಜಯಶ್ರೀ ಡಿ.ಎಂ. ಉಜಿರೆ, ಪರಿಶಿಷ್ಟ ಜಾತಿ ಮೀಸಲು ಸ್ಥಾನದಿಂದ ಬೈರಪ್ಪ ಕಲ್ಲಗುಡ್ಡೆ ಕಳೆಂಜ, ಪರಿಶಿಷ್ಟ ಪಂಗಡ ಮೀಸಲು ಸ್ಥಾನದಿಂದ ಕೆ. ರಾಮನಾಯ್ಕ ಕಾಯರ್ತಡ್ಕ ಕಳೆಂಜ ಇವರು ಆವಿರೋಧವಾಗಿ ಆಯ್ಕೆಯಾದವರು.


ಚುನಾವಣಾಧಿಕಾರಿಯಾಗಿ ಸಹಕಾರ ಸಂಘಗಳ ಪುತ್ತೂರು ಉಪ ಸಹಾಯಕ ನಿಬಂಧಕರಾದ ಎಂ. ರಘು ಕಾರ್ಯನಿರ್ವಹಿಸಿದ್ದರು. ಉಜಿರೆ ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರ ಸಂಘುದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರಾಜು ಶೆಟ್ಟಿ ಸಹಕರಿಸಿದರು.

Related posts

ಸಾವ್ಯ ಬೆಸ್ಟ್ ಫೌಂಡೇಶನ್ ವತಿಯಿಂದ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ

Suddi Udaya

ಉಜಿರೆ ಎಸ್.ಡಿ.ಎಂ. ಪದವಿ ಕಾಲೇಜಿನ ವಿವಿಧ ವಿಭಾಗದಲ್ಲಿ 38 ವರ್ಷಗಳ ಕಾಲ ಸೇವೆ ಸಲ್ಲಿಸಿದ ಸದಾನಂದ ಬಿ ಮುಂಡಾಜೆ ರವರಿಗೆ ಗ್ರಂಥಾಲಯ ವಿಭಾಗದಿಂದ ಬೀಳ್ಕೊಡುಗೆ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಪೋಷಕರಿಂದ ಶ್ರಮದಾನ

Suddi Udaya

ಕುತ್ಲೂರು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ತ್ರೈಮಾಸಿಕ ಸಭೆ ಹಾಗೂ ಮಂಜೂರಾತಿ ಪತ್ರ ವಿತರಣೆ

Suddi Udaya

INICET ಪ್ರವೇಶ ಪರೀಕ್ಷೆ: ಉಜಿರೆಯ ಡಾ|ಶಿವಾನಿಗೆ ದೇಶದಲ್ಲೇ 191ನೇ ರ್ಯಾಂಕ್

Suddi Udaya

ದಿ| ವಸಂತ ಬಂಗೇರರ ಮನೆಗೆ ರಾಜ್ಯದ ಮಾಜಿ ಸಚಿವ ಪಿ.ಜಿ. ಆರ್ ಸಿಂಧ್ಯ ಭೇಟಿ

Suddi Udaya
error: Content is protected !!