25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್ ಡಿ ಎಂ ಪಾಲಿಟೆಕ್ನಿಕ್ ನಲ್ಲಿ ಇಂಟರ್ ಪಾಲಿಟೆಕ್ನಿಕ್ ಟೆಕ್ನಿಕಲ್ ಸ್ಪರ್ಧೆ

ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ನಲ್ಲಿ ಇಂಜಿನಿಯರ್ಸ್ ದಿನಾಚರಣೆಯ ಪ್ರಯುಕ್ತ ಟೆಕ್ ಟ್ರಿಕ್ಸ್ 2025 ಜಿಲ್ಲಾ ಮಟ್ಟದ ಇಂಟರ್ ಪಾಲಿಟೆಕ್ನಿಕ್ ಟೆಕ್ನಿಕಲ್ ಸ್ಪರ್ಧೆಯು ಸೆ. 15 ರಂದು ನಡೆಯಿತು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಕುಕ್ಕೆ ಸುಬ್ರಹ್ಮಣ್ಯದ ಸ್ಪೆಷಲ್ ಸಬ್ ಡಿವಿಜನ್ ಅಸಿಸ್ಟೆಂಟ್ ಇಂಜಿನಿಯರ್ ಪ್ರಮೋದ್ ಕುಮಾರ್ ಕೆ. ಕೆ. ಉದ್ಘಾಟಿಸಿ ಮಾತನಾಡಿ ಇಂಜಿನಿಯರ್ ಕ್ಷೇತ್ರ ದಲ್ಲಿ ಸರ್ ಎಂ ವಿಶ್ವೇಶ್ವರಯ್ಯ ರವರ ಸಾಧನೆ ಅಮೋಘ ಅದಕ್ಕಾಗಿ ಅವರ ಜನ್ಮ ದಿನವನ್ನು ಭಾರತ ದೇಶದಲ್ಲಿ ಮಾತ್ರ ಅಲ್ಲದೆ ಇತರ ಎರಡು ದೇಶದಲ್ಲಿ ಇಂಜಿನಿಯರ್ಸ್ ದಿನವಾಗಿ ಆಚರಣೆ ಮಾಡಲಾಗುತ್ತಿದೆ. ಅವರ ಸಾಧನೆ ಹಿಂದೆ ತತ್ವಗಳು ಸೇವಾ ರೀತಿಯಲ್ಲಿ ಮುಂದುವರಿದಿದೆ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಅವಕಾಶ ಸಿಕ್ಕಿದಾಗ ಯಾವುದೇ ಸ್ಪರ್ಧೆಗಳಲ್ಲಿ ಭಾಗವಹಿಸುವುದರಿಂದ ನಮ್ಮ ಬದುಕಿಗೆ ಪ್ರಯೋಜನ ಆಗುತ್ತದೆ. ಸಮಾಜದಲ್ಲಿ ಇಂಜಿನಿಯರ್ ಗಳ ಕೊಡುಗೆ ಅಪಾರ ಈಗಿನ ಸಂದರ್ಭಕ್ಕೆ ತಕ್ಕಂತೆ ಹೊಂದಿಕೊಂಡು ಟೆಕ್ನಿಕಲ್ ಸೇವೆ ಮಾಡಿದರೆ ಯಶಸ್ವಿ ಸಾಧಿಸಲು ಅವಕಾಶ ಇದೆ. ಇದನ್ನು ವಿದ್ಯಾರ್ಥಿ ಜೀವನದಲ್ಲಿಯೇ ಅಳವಡಿಸಿ ಕೊಳ್ಳಬೇಕು ಎಂದರು.


ಪ್ರಾಂಶುಪಾಲರಾದ ಸಂತೋಷ್ ಅಧ್ಯಕ್ಷತೆ ವಹಿಸಿ ಮಾತನಾಡಿ ಸರ್ ಎಂ ವಿಶ್ವೇಶ್ವರಯ್ಯ ರವರ ಜನ್ಮ ದಿನವನ್ನು ಪ್ರತಿ ವರ್ಷ ಸೆ. 15 ರಂದು ಇಂಜಿನಿಯರ್ಸ್ ದಿನವಾಗಿ ಆಚರಣೆ ಮಾಡುತ್ತಾ ಬರುತ್ತಿದ್ದು ಮಹಾನ್ ವ್ಯಕ್ತಿ ಯಾದ ಅವರ ಜೀವನ ಚರಿತ್ರೆ, ಅವರ ಆದರ್ಶಗಳನ್ನು ತಿಳಿದಾಗ ವಿದ್ಯಾರ್ಥಿಗಳಿಗೆ ಸ್ಫೂರ್ತಿ ಸಿಗುವುದು. ವಿವಿಧ ವಿಭಾಗದಲ್ಲಿ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು ಸ್ಪರ್ಧಾ ಮನೋಭಾವದೊಂದಿಗೆ ಭಾಗವಹಿಸಬೇಕು ಎಂದರು.
ಪಾಲಿಟೆಕ್ನಿಕ್ ವ್ಯವಸ್ಥಾಪಕರಾದ ಚಂದ್ರನಾಥ ಜೈನ್ ಮತ್ತು ವಿವಿಧ ವಿಭಾಗಗಳ ಮುಖ್ಯಸ್ಥರುಗಳಾದ ಮೇರಿ ಸ್ಮಿತಾ, ರಾಜೇಶ್ ಕೆ ಎ, ದಿನೇಶ್, ಶ್ರೇಯಾಂಕ್ ಜೈನ್, ತೃಪ್ತಿ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಇಂಗ್ಲೀಷ್ ಉಪನ್ಯಾಸಕರಾದ ಶಂಕರ್ ಭಟ್ ಸ್ವಾಗತಿಸಿದರು. ರೆನಿಟಾ ಫೆರ್ನಾಂಡೀಸ್ ವಂದಿಸಿದರು. ಸಂಪತ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.
ಕಾರ್ಯಕ್ರಮದಲ್ಲಿ ಸ್ಪರ್ಧಿ ವಿದ್ಯಾರ್ಥಿಗಳು, ಉಪನ್ಯಾಸಕರು, ಸಿಬ್ಬಂದಿ ವರ್ಗದವರು ಹಾಜರಿದ್ದರು.

Related posts

ಮರೋಡಿ: ಯುವಕನ ಧ್ವನಿ ಪೆಟ್ಟಿಗೆಯ ಶಸ್ತ್ರಚಿಕಿತ್ಸೆಗೆ ಯುವವಾಹಿನಿ ವೇಣೂರು ಘಟಕ ಹಾಗೂ ಯುವವಾಹಿನಿ ಮರೋಡಿ ಸಂಚಲನಾ ಸಮಿತಿ ಸದಸ್ಯರಿಂದ ಆರ್ಥಿಕ ನೆರವು

Suddi Udaya

ಧರ್ಮಸ್ಥಳ: ಯುಗಾದಿ ಬಳಗದ ಸ್ನೇಹ ಪರ್ವ-2 ಕಾರ್ಯಕ್ರಮ

Suddi Udaya

ಪಾಲಡ್ಕ ಯಕ್ಷಮಿತ್ರ ಯಕ್ಷಗಾನ ಬಯಲಾಟ ಸಮಿತಿಯಿಂದ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ

Suddi Udaya

ಮದ್ದಡ್ಕ ರಾಮನವಮಿ ಪ್ರಯುಕ್ತ ಭಜನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿಯ ಮಾಚಾರ್ ನ ಶಿವರಾಮ ಗೌಡ ಪಿ. ರವರಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದಲ್ಲಿ “ಹೆಜ್ಜೆಗುರುತು” ವಿಶೇಷ ಕಾರ್ಯಕ್ರಮ

Suddi Udaya
error: Content is protected !!