23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪಡ್ಡಂದಡ್ಕ ನೂರುಲ್ ಹುಧಾ ಜುಮ್ಮಾ ಮಸೀದಿಯಲ್ಲಿ ಮೂಲಭೂತ ಸೌಕರ್ಯಗಳ ಲೋಕಾರ್ಪಣೆ

ವೇಣೂರು: ಪಡ್ಡoದಡ್ಕದ ಕೇಂದ್ರ ಮಸೀದಿಯಲ್ಲಿ ವಿವಿಧ ಮೂಲಭೂತ ಸೌವಲತ್ತುಗಳನ್ನು ಸೆ.12 ರಂದು ಮಸೀದಿ ಆಡಳಿತ ಸಮಿತಿ ಅಧ್ಯಕ್ಷ ಇಸ್ಮಾಯಿಲ್ ಕೆ ಪೆರಿಂಜೆ ಯವರ ಅಧ್ಯಕ್ಷತೆಯಲ್ಲಿ ಲೋಕಾರ್ಪಣೆ ಮಾಡಲಾಯಿತು.

ಸುಸಜ್ಜಿತವಾದ ನವೀಕೃತ ಹೌಲ್ (ವಝು ಖಾನ)ನ್ನು ತ್ವಯಿಬಾ ಎಜುಕೇಷನಲ್ ಸೆಂಟರ್ ( ಪಟ್ಟಾಡಿ ) ಮೂಡಬಿದ್ರಿ ಚೇರ್ಮೆನ್ ಸಯ್ಯದ್ ಅಬ್ದುಲ್ ರಹಿಮಾನ್ ಸಾದಾತ್ ತಂಗಳ್ ಬಾಲರವಿ ನೆರವೇರಿಸಿದರು .ನವೀಕೃತ ಮದರಸವನ್ನು ಪ್ರಿನ್ಸಿಪಾಲ್ ದಾರುಸ್ಸಲಾಮ್ ದಾವ ಕಾಲೇಜು ಬೆಳ್ತಂಗಡಿಯ ತ್ವಾಹ ತಂಗಳ್ ನೆರವೇರಿಸಿದರು. ಮಸೀದಿ ಕಚೇರಿಯನ್ನು ಮುಂಬೈನ( ಎಂಪೈರ್ ವಿಸ್ತ ಇನ್ಫ್ರಾ )ಉದ್ಯಮಿ ಮೊಹಮ್ಮದ್ ಮುಸ್ತಫಾ ನೆರವೇರಿಸಿದರು. ಮಸೀದಿ ಖತೀಬ್ ಕಲಂದರ್ ಶಾಫಿ ಬಾಖವಿ ಖಾಮಿಲ್ ಅಲ್ ಮನ್ನಾನಿ ಕರಾಯ ಕಾರ್ಯಕ್ರಮ ಉದ್ಘಾಟಿಸಿದರು.

ಮುಖ್ಯ ಅಥಿತಿಗಳಾಗಿ ಉದ್ಯಮಿ ಹಾಗೂ ಡಿಡಿ ಸಮೂಹ ಸಂಸ್ಥೆಗಳ ಚೇರ್ಮನ್ ಅಬ್ದುಲ್ ರಝಾಕ್ ಕನ್ನಡಿಕಟ್ಟೆ, ಮಸೀದಿ ಮಾಜಿ ಅಧ್ಯಕ್ಷ ಹಾಗೂ ಉದ್ಯಮಿ ಯು.ಕೆ ಮೊಹಮ್ಮದ್ ಹಾಜಿ ,ಮೂಡಬಿದ್ರಿ ಅಲ್ ಮಫಾಝ ಕಾಲೇಜಿನ ಪ್ರಿನ್ಸಿಪಾಲ್ ಪಿಪಿ ಅಹ್ಮದ್ ಸಖಾಫಿ ,ಬೆಳ್ತಂಗಡಿ ಕೇಂದ್ರ ಲ್ ಮಸೀದಿ ಆಡಳಿತ ಸಮಿತಿ ಅಧ್ಯಕ್ಷ ಅಕ್ಬರ್ ಬೆಳ್ತಂಗಡಿ,ಪತ್ರಕರ್ತ ಜನಾಬ್ ಎಚ್ ಮಹಮ್ಮದ್ ವೇಣೂರು ಶುಭ ಹಾರೈಸಿದರು. ಪ್ರಮುಖರಾದ ಉಪಾಧ್ಯಕ್ಷ ಅಬ್ದುಲ್ ರಹಿಮಾನ್ ಕಟ್ಟೆ,ಕೋಶಾಧಿಕಾರಿ ಪಿಜೆ ಮಹಮೂದ್ ಲೆಕ್ಕ ಪರಿಶೋಧಕ ಇದ್ರೀಸ್ ಪುಲಾಬೆ, ಜೊತೆ ಕಾರ್ಯದರ್ಶಿ ಅಬ್ದು ಸಲಾಂ ಕೇಶವ ನಗರ, ಸದಸ್ಯರಾದ ಅಶ್ರಫ್ ಗಾಂಧಿ ನಗರ ,ಅಶ್ರಫ್ ಕಿರೋಡಿ ,ಯುಕೆ ಇರ್ಫಾನ್ ಪೆರಿಂಜೆ & ಶಾಂತಿ ನಗರ ಮದರಸ ಅಧ್ಯಕ್ಷ ಅಶ್ರಫ್ ಉಪಸ್ಥಿತರಿದ್ದರು.


ಪ್ರಮುಖ ದಾನಿಗಳಾದ ಸಾರ ಇಬ್ರಾಹಿಂ ಟ್ರಸ್ಟ್ ನ ಪರವಾಗಿ ಅಕ್ಬರ್ ಪೆರಿಂಜೆ ,ಯುಕೆ ಮೊಹಮ್ಮದ್ ಹಾಜಿ ಹಾಗು ಮೊಹಮ್ಮದ್ ಮುಸ್ತಫಾ ರವರನ್ನು ಶಾಲು ಹೊದಿಸಿ ಗೌರವಿಸಲಾಯಿತು. ಮೊಹಮ್ಮದ್ ಶಾಫಿ ಸ್ವಾಗತಿಸಿದರು. ಆಡಳಿತ ಸಮಿತಿ ಪ್ರಧಾನ ಕಾರ್ಯದರ್ಶಿ ರಫೀಕ್ ಪಡ್ಡ ವಂದಿಸಿದರು.

Related posts

ಸ್ಟಾರ್ ಲೈನ್ ಆಂ.ಮಾ. ಶಾಲೆ ರಝ ಗಾರ್ಡನ್ ಮಂಜೊಟ್ಟಿಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಬೆಳ್ತಂಗಡಿ :ಭತ್ತ ಬೆಳೆಯುವ ಕೃಷಿಕರಿಗೆ ರಿಯಾಯಿತಿ ದರದಲ್ಲಿ ಭತ್ತದ ಬಿತ್ತನೆ ಬೀಜ ದಾಸ್ತಾನು ಲಭ್ಯ

Suddi Udaya

ಗುರುವಾಯನಕೆರೆ ಶ್ರೀ ಶಾರದಾಂಭ ಭಜನಾ ಮಂಡಳಿಯ ವತಿಯಿಂದ ಶ್ರೀ ವರಮಹಾಲಕ್ಷ್ಮಿ ಪೂಜೆ ಹಾಗೂ ರಕ್ಷಾ ಬಂಧನ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢ ಶಾಲೆಯಲ್ಲಿ ನಿವೃತ್ತ ಮುಖ್ಯೋಪಾಧ್ಯಾಯ ದಿ| ಕಾಶ್ಮೀರಿ ಮೆನೇಜಸ್‌ ರವರಿಗೆ ಶ್ರದ್ಧಾಂಜಲಿ ಸಭೆ

Suddi Udaya

ಹತ್ಯಡ್ಕ: ದರ್ಬೆತಡ್ಕ ಶ್ರೀಕಾಲ ಪರಶುರಾಮ ದೇವಸ್ಥಾನದ ಮಾಜಿ ಮೊಕ್ತೇಸರ ಕೃಷ್ಣಾನಂದ ಹೆಬ್ಬಾರ್ ನಿಧನ

Suddi Udaya

ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ: ಉಜಿರೆ ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!