22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು ಗ್ರಾಮ ಪಂಚಾಯತ್ ಸ್ತ್ರೀಶಕ್ತಿ ಗೊಂಚಲಿನ ಸಭೆ

ಬೆಳಾಲು ಗ್ರಾಮ ಪಂಚಾಯತ್ ಸ್ತ್ರೀಶಕ್ತಿ ಗೊಂಚಲಿನ ಸರ್ವ ಸದಸ್ಯರ ಸಭೆಯನ್ನು ಗೊಂಚಲಿನ ಅಧ್ಯಕ್ಷೆ ಆಶಾ ಭಟ್ ಇವರ ಉಪಸ್ಥಿತಿಯಲ್ಲಿ ನಡೆಯಿತು.

ವೇದಿಕೆಯಲ್ಲಿ ಪಂಚಾಯತ್ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಗೌಡ, ಗೊಂಚಲಿನ ಕಾರ್ಯದರ್ಶಿ ಹರಿಣಾಕ್ಷಿ, ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಶಾರದಾ, ಗೊಂಚಲಿನ ಕೋಶಾಧಿಕಾರಿ ವಸಂತಿ ಉಪಸ್ಥಿತರಿದ್ದರು.

. ಪಂಚಾಯತ್ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಇವರು ನಾವೆಲ್ಲ ಸಮವಸ್ತ್ರ ಧರಿಸಿ ಒಟ್ಟಿಗೆ ಇದ್ದಾಗ ನಾವೆಲ್ಲ ಒಂದೇ ಎಂಬ ಭಾವನೆ ಬರುತ್ತದೆ. ಎಲ್ಲರೂ ಒಗ್ಗಟ್ಟಾಗಿರಲು ಸಾಧ್ಯ, ನಮಗೆ ತಿಳಿದಿರುವುದನ್ನು ಇನ್ನೊಬ್ಬರಿಗೆ ತಿಳಿಸಿ ಅವರನ್ನು ಮೇಲೆ ತರಬೇಕು ಎಂದು ಹಿತನುಡಿದರು.

ನಂತರ ಪದಾಧಿಕಾರಿಗಳ ಆಯ್ಕೆಮಾಡಲಾಯಿತು. ಅಧ್ಯಕ್ಷರಾಗಿ ಕಮಲ, ಉಪಾಧ್ಯಕ್ಷರಾಗಿ ಭಾರತಿ, ಕಾರ್ಯದರ್ಶಿಯಾಗಿ ಲಲಿತ, ಜೊತೆ ಕಾರ್ಯದರ್ಶಿಯಾಗಿ ಸುಮತಿ, ಕೋಶಾಧಿಕಾರಿಯಾಗಿ ಚಿತ್ರ ಇವರನ್ನು ಆಯ್ಕೆ ಮಾಡಿ ನಿರ್ಣಯ ಪುಸ್ತಕ ನೀಡುವುದರ ಮೂಲಕ ಅಧಿಕಾರ ಹಸ್ತಾಂತರಿಸಲಾಯಿತು. ಲತಾ ಇವರು ಕಪಿಲ ವಿವಿದೋದ್ಧೇಶ ಸಹಕಾರ ಸಂಘ ದಿಂದ ಸಿಗುವ ಸಾಲ ಸೌಲಭ್ಯಗಳ ಬಗ್ಗೆ ತಿಳಿಸಿದರು.

ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಶಾರದಾ ಇವರು ಸ್ತ್ರೀಶಕ್ತಿ ಸಂಘದ ಸದಸ್ಯರು ತಮಗೆ ಸಿಕ್ಕಿರುವ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಯಾವುದೂ ಕೂಡ ಆಗುವುದಿಲ್ಲ ಅಂತ ಹಿಂದೆ ಸರಿಯಬಾರದು. ಎಲ್ಲದರಲ್ಲೂ ಮುಂದೆ ಬರಬೇಕು ಎಂದು ತಿಳಿಸಿದರು. ಆಶಾ ಸ್ವಾಗತಿಸಿದರು. ಲತಾ ಕಾರ್ಯಕ್ರಮವನ್ನು ನಿರೂಪಿಸಿ ವಾರ್ಷಿಕ ವರದಿಯನ್ನು ಮಂಡಿಸಿದರು. ಅಂಗನವಾಡಿ ಕಾರ್ಯಕರ್ತೆ ಭಾರತಿ ವಂದಿಸಿದರು.

Related posts

ಅಳದಂಗಡಿ ಆಮಂತ್ರಣ ಪ್ರತಿಷ್ಠಾನ ಹಾಗೂ ಲಯನ್ಸ್ ಕ್ಲಬ್ ಬೆಳ್ತಂಗಡಿ ಸಹಯೋಗದೊಂದಿಗೆ ತುಳು ಸಿಂಗಾರ ಚೆನ್ನೆಮಣೆ ಸ್ಪರ್ಧೆ

Suddi Udaya

ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ ಕೆ‌.ವಸಂತ ಸಾಲಿಯಾನ್ ನಿವಾಸಕ್ಕೆ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

Suddi Udaya

ನಿರಂಜನ್ ಬಾವಂತಬೆಟ್ಟು ರವರ ನಿಧನಕ್ಕೆ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಬಳಂಜ ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿಯಿಂದ ಹಾವೇರಿ ರಾಣಿ ಬೆನ್ನೂರಿನಲ್ಲಿ ಕಾರ್ಯಕ್ರಮ

Suddi Udaya

ಉಜಿರೆ ಶಾರದಾ ಮಂಟಪದಲ್ಲಿ ನಡೆದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನ ಗ್ರಂಥಾಲಯ ವಿಭಾಗದ ವತಿಯಿಂದ ಓದುವ ಸಪ್ತಾಹ

Suddi Udaya
error: Content is protected !!