September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು ಗ್ರಾಮ ಪಂಚಾಯತ್ ಸ್ತ್ರೀಶಕ್ತಿ ಗೊಂಚಲಿನ ಸಭೆ

ಬೆಳಾಲು ಗ್ರಾಮ ಪಂಚಾಯತ್ ಸ್ತ್ರೀಶಕ್ತಿ ಗೊಂಚಲಿನ ಸರ್ವ ಸದಸ್ಯರ ಸಭೆಯನ್ನು ಗೊಂಚಲಿನ ಅಧ್ಯಕ್ಷೆ ಆಶಾ ಭಟ್ ಇವರ ಉಪಸ್ಥಿತಿಯಲ್ಲಿ ನಡೆಯಿತು.

ವೇದಿಕೆಯಲ್ಲಿ ಪಂಚಾಯತ್ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಗೌಡ, ಗೊಂಚಲಿನ ಕಾರ್ಯದರ್ಶಿ ಹರಿಣಾಕ್ಷಿ, ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಶಾರದಾ, ಗೊಂಚಲಿನ ಕೋಶಾಧಿಕಾರಿ ವಸಂತಿ ಉಪಸ್ಥಿತರಿದ್ದರು.

. ಪಂಚಾಯತ್ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಇವರು ನಾವೆಲ್ಲ ಸಮವಸ್ತ್ರ ಧರಿಸಿ ಒಟ್ಟಿಗೆ ಇದ್ದಾಗ ನಾವೆಲ್ಲ ಒಂದೇ ಎಂಬ ಭಾವನೆ ಬರುತ್ತದೆ. ಎಲ್ಲರೂ ಒಗ್ಗಟ್ಟಾಗಿರಲು ಸಾಧ್ಯ, ನಮಗೆ ತಿಳಿದಿರುವುದನ್ನು ಇನ್ನೊಬ್ಬರಿಗೆ ತಿಳಿಸಿ ಅವರನ್ನು ಮೇಲೆ ತರಬೇಕು ಎಂದು ಹಿತನುಡಿದರು.

ನಂತರ ಪದಾಧಿಕಾರಿಗಳ ಆಯ್ಕೆಮಾಡಲಾಯಿತು. ಅಧ್ಯಕ್ಷರಾಗಿ ಕಮಲ, ಉಪಾಧ್ಯಕ್ಷರಾಗಿ ಭಾರತಿ, ಕಾರ್ಯದರ್ಶಿಯಾಗಿ ಲಲಿತ, ಜೊತೆ ಕಾರ್ಯದರ್ಶಿಯಾಗಿ ಸುಮತಿ, ಕೋಶಾಧಿಕಾರಿಯಾಗಿ ಚಿತ್ರ ಇವರನ್ನು ಆಯ್ಕೆ ಮಾಡಿ ನಿರ್ಣಯ ಪುಸ್ತಕ ನೀಡುವುದರ ಮೂಲಕ ಅಧಿಕಾರ ಹಸ್ತಾಂತರಿಸಲಾಯಿತು. ಲತಾ ಇವರು ಕಪಿಲ ವಿವಿದೋದ್ಧೇಶ ಸಹಕಾರ ಸಂಘ ದಿಂದ ಸಿಗುವ ಸಾಲ ಸೌಲಭ್ಯಗಳ ಬಗ್ಗೆ ತಿಳಿಸಿದರು.

ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಶಾರದಾ ಇವರು ಸ್ತ್ರೀಶಕ್ತಿ ಸಂಘದ ಸದಸ್ಯರು ತಮಗೆ ಸಿಕ್ಕಿರುವ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಯಾವುದೂ ಕೂಡ ಆಗುವುದಿಲ್ಲ ಅಂತ ಹಿಂದೆ ಸರಿಯಬಾರದು. ಎಲ್ಲದರಲ್ಲೂ ಮುಂದೆ ಬರಬೇಕು ಎಂದು ತಿಳಿಸಿದರು. ಆಶಾ ಸ್ವಾಗತಿಸಿದರು. ಲತಾ ಕಾರ್ಯಕ್ರಮವನ್ನು ನಿರೂಪಿಸಿ ವಾರ್ಷಿಕ ವರದಿಯನ್ನು ಮಂಡಿಸಿದರು. ಅಂಗನವಾಡಿ ಕಾರ್ಯಕರ್ತೆ ಭಾರತಿ ವಂದಿಸಿದರು.

Related posts

ಕಳೆಂಜ ಗ್ರಾ.ಪಂ.ನಲ್ಲಿ ಎಸ್.ಸಿ, ಎಸ್.ಟಿ ಫಲಾನುಭವಿಗಳಿಗೆ ನೀರಿನ ಟ್ಯಾಂಕ್ ಹಾಗೂ ವಿಕಲಚೇತನ ಫಲಾನುಭವಿಗಳಿಗೆ ಫ್ಯಾನ್ ವಿತರಣೆ

Suddi Udaya

ಪಡಂಗಡಿ ಗ್ರಾ.ಪಂ. ಗ್ರಂಥಾಲಯಕ್ಕೆ ಪ್ರವೀಣ್ ರೈ ರವರಿಂದ 54 ಪುಸ್ತಕಗಳ ಕೊಡುಗೆ

Suddi Udaya

ಬೆಳ್ತಂಗಡಿ: ಪಾರಸ್ ಪೃಥ್ವಿ ಜ್ಯುವೆಲ್ಸ್‌ನಲ್ಲಿ ಗೋಲ್ಡನ್ ಹಾರ್ವೆಸ್ಟ್ ಪ್ಲಾನ್ ಸ್ಕಿಮ್ ಉದ್ಘಾಟನೆ ಹಾಗೂ ಪೌರ ಕಾರ್ಮಿಕರಿಗೆ ಸನ್ಮಾನ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಕಜಕೆ ಶಾಲೆಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಕಳೆಂಜ: ಕಟ್ಟಿಗೆ ದಾಸ್ತಾನು ಕಟ್ಟಡಕ್ಕೆ ಉರುಳಿದ ಮರ: ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ತೆರವು

Suddi Udaya
error: Content is protected !!