23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು ಗ್ರಾಮ ಪಂಚಾಯತ್ ಸ್ತ್ರೀಶಕ್ತಿ ಗೊಂಚಲಿನ ಸಭೆ

ಬೆಳಾಲು ಗ್ರಾಮ ಪಂಚಾಯತ್ ಸ್ತ್ರೀಶಕ್ತಿ ಗೊಂಚಲಿನ ಸರ್ವ ಸದಸ್ಯರ ಸಭೆಯನ್ನು ಗೊಂಚಲಿನ ಅಧ್ಯಕ್ಷೆ ಆಶಾ ಭಟ್ ಇವರ ಉಪಸ್ಥಿತಿಯಲ್ಲಿ ನಡೆಯಿತು.

ವೇದಿಕೆಯಲ್ಲಿ ಪಂಚಾಯತ್ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಗೌಡ, ಗೊಂಚಲಿನ ಕಾರ್ಯದರ್ಶಿ ಹರಿಣಾಕ್ಷಿ, ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಶಾರದಾ, ಗೊಂಚಲಿನ ಕೋಶಾಧಿಕಾರಿ ವಸಂತಿ ಉಪಸ್ಥಿತರಿದ್ದರು.

. ಪಂಚಾಯತ್ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಇವರು ನಾವೆಲ್ಲ ಸಮವಸ್ತ್ರ ಧರಿಸಿ ಒಟ್ಟಿಗೆ ಇದ್ದಾಗ ನಾವೆಲ್ಲ ಒಂದೇ ಎಂಬ ಭಾವನೆ ಬರುತ್ತದೆ. ಎಲ್ಲರೂ ಒಗ್ಗಟ್ಟಾಗಿರಲು ಸಾಧ್ಯ, ನಮಗೆ ತಿಳಿದಿರುವುದನ್ನು ಇನ್ನೊಬ್ಬರಿಗೆ ತಿಳಿಸಿ ಅವರನ್ನು ಮೇಲೆ ತರಬೇಕು ಎಂದು ಹಿತನುಡಿದರು.

ನಂತರ ಪದಾಧಿಕಾರಿಗಳ ಆಯ್ಕೆಮಾಡಲಾಯಿತು. ಅಧ್ಯಕ್ಷರಾಗಿ ಕಮಲ, ಉಪಾಧ್ಯಕ್ಷರಾಗಿ ಭಾರತಿ, ಕಾರ್ಯದರ್ಶಿಯಾಗಿ ಲಲಿತ, ಜೊತೆ ಕಾರ್ಯದರ್ಶಿಯಾಗಿ ಸುಮತಿ, ಕೋಶಾಧಿಕಾರಿಯಾಗಿ ಚಿತ್ರ ಇವರನ್ನು ಆಯ್ಕೆ ಮಾಡಿ ನಿರ್ಣಯ ಪುಸ್ತಕ ನೀಡುವುದರ ಮೂಲಕ ಅಧಿಕಾರ ಹಸ್ತಾಂತರಿಸಲಾಯಿತು. ಲತಾ ಇವರು ಕಪಿಲ ವಿವಿದೋದ್ಧೇಶ ಸಹಕಾರ ಸಂಘ ದಿಂದ ಸಿಗುವ ಸಾಲ ಸೌಲಭ್ಯಗಳ ಬಗ್ಗೆ ತಿಳಿಸಿದರು.

ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಶಾರದಾ ಇವರು ಸ್ತ್ರೀಶಕ್ತಿ ಸಂಘದ ಸದಸ್ಯರು ತಮಗೆ ಸಿಕ್ಕಿರುವ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಯಾವುದೂ ಕೂಡ ಆಗುವುದಿಲ್ಲ ಅಂತ ಹಿಂದೆ ಸರಿಯಬಾರದು. ಎಲ್ಲದರಲ್ಲೂ ಮುಂದೆ ಬರಬೇಕು ಎಂದು ತಿಳಿಸಿದರು. ಆಶಾ ಸ್ವಾಗತಿಸಿದರು. ಲತಾ ಕಾರ್ಯಕ್ರಮವನ್ನು ನಿರೂಪಿಸಿ ವಾರ್ಷಿಕ ವರದಿಯನ್ನು ಮಂಡಿಸಿದರು. ಅಂಗನವಾಡಿ ಕಾರ್ಯಕರ್ತೆ ಭಾರತಿ ವಂದಿಸಿದರು.

Related posts

ಉರುವಾಲು: ಶ್ರೀ ಭಾರತೀ ವಿದ್ಯಾಸಂಸ್ಥೆಯಲ್ಲಿ ವನಮಹೋತ್ಸವ ಮತ್ತು ಸಸಿ ವಿತರಣಾ ಕಾರ್ಯಕ್ರಮ

Suddi Udaya

ವಿಟ್ಲ ಸಾಲೆತ್ತೂರಿನ ಹರೀಶ್ ಪೂಂಜ ಅಭಿಮಾನಿಗಳಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರೆ

Suddi Udaya

ಮಡಂತ್ಯಾರು: ಹಿಂದೂ ಸಂಗಮ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ವೇಣೂರು ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ವಿದ್ಯಾರ್ಥಿ ಪರಿಷತ್ತು ಮತ್ತು ಶೈಕ್ಷಣಿಕ ಸಂಘಗಳ ಉದ್ಘಾಟನೆ

Suddi Udaya

ಬಿಜೆಪಿ ಪಕ್ಷದ ಹಿರಿಯ ಕಾರ್ಯಕರ್ತ ನಿಡ್ಲೆ ಕೃಷ್ಣಪ್ಪ ಎಂ. ಕೆ ಅವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ, ವೈಯಕ್ತಿಕ ಧನಸಹಾಯ

Suddi Udaya

ಉಜಿರೆ: ಶ್ರೀ ಧ.ಮಂ.ಮಹಿಳಾ ಐಟಿಐಯಲ್ಲಿ ಪ್ರಾಂಶುಪಾಲರು, ಬೋಧಕ ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿನಿಯರಿಂದ ದಿ| ಎಂ.ವೈ ಹರೀಶ್ ರವರ ಭಾವಚಿತ್ರಕ್ಕೆ ಪುಷ್ಪ ನಮನ

Suddi Udaya
error: Content is protected !!