23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ : ಮುಖ್ಯ ಪುಸ್ತಕ ಬರಹಗಾರರಿಗೆ ಪುಸ್ತಕ ನಿರ್ವಹಣೆ ಮತ್ತು ಜವಾಬ್ದಾರಿಗಳ ಕುರಿತು ತರಬೇತಿ

ಬೆಳ್ತಂಗಡಿ ಎನ್ ಆರ್ ಎಲ್ ಎಂ ತಾಲೂಕು ಅಭಿಯಾನ ನಿರ್ವಹಣಾ ಘಟಕ ವತಿಯಿಂದ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮುಖ್ಯ ಪುಸ್ತಕ ಬರಹಗಾರರ ತರಬೇತಿ ಕಾರ್ಯಕ್ರಮವನ್ನು ಬೆಳ್ತಂಗಡಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಸೆ.10 ರಿಂದ 12ರವರೆಗೆ ನಡೆಸಲಾಯಿತು.

ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಕಾರ್ಯಕ್ರಮವನ್ನು ಉದ್ಘಾಟಿಸಿ ತರಬೇತಿಯ ಒಕ್ಕೂಟಗಳ ಕಾರ್ಯನಿರ್ವಹಣೆ ಮತ್ತು ಎಂಬಿಕೆಯವರ ಪಾತ್ರ ಹಾಗೂ ಜವಾಬ್ದಾರಿಗಳ ಬಗ್ಗೆ ಮಾಹಿತಿ ನೀಡಿದರು. ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರು ಕಾರ್ಯಕ್ರಮದ ಉದ್ದೇಶದ ಕುರಿತಂತೆ ಪ್ರಾಸ್ತಾವಿಕವಾಗಿ ಮಾತನಾಡಿದರು.
ರಾಜ್ಯ ಸಂಪನ್ಮೂಲ ವ್ಯಕ್ತಿ ಲಕ್ಷ್ಮಣ್ ತರಬೇತಿಯನ್ನು ನೀಡಿದರು.

ಬೆಳ್ತಂಗಡಿ ತಾಲೂಕಿನ 48 ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟಗಳಿಂದ 48 ಜನ ಮತ್ತು ಬಂಟ್ವಾಳ ತಾಲೂಕಿನ 6 ಜನ ಮುಖ್ಯ ಪುಸ್ತಕ ಬರಹಗಾರರು ತರಬೇತಿಯಲ್ಲಿ ಭಾಗವಹಿಸಿದರು.

ತರಬೇತಿ ಕಾರ್ಯಕ್ರಮದಲ್ಲಿ ತಾಲೂಕು ವ್ಯವಸ್ಥಾಪಕರು, ವಲಯ ಮೇಲ್ವಿಚಾರಕರುಗಳು, ಬಿಆರ್ ಪಿ -ಪಿಆರ್ ಐ ಉಪಸ್ಥಿತರಿದ್ದು ತರಬೇತಿಯ ಯಶಸ್ಸಿಗೆ ಸಹಕರಿಸಿದರು.

Related posts

ಶ್ರೀ ಕ್ಷೇತ್ರ ಸೌತಡ್ಕಕ್ಕೆ ಮಂಡ್ಯ ಬಿಜೆಪಿ ಜಿಲ್ಲಾಧ್ಯಕ್ಷ ಡಾ. ಇಂದ್ರೇಶ್ ಎನ್.ಎಸ್ ಭೇಟಿ

Suddi Udaya

ನಿಟ್ಟಡೆ ಕುಂಭಶ್ರೀ ಆಂ.ಮಾ. ಶಾಲಾ ಕಾಲೇಜಿಗೆ ಫ್ಯಾನ್ ಕೊಡುಗೆ

Suddi Udaya

ಬೆಳ್ತಂಗಡಿಯಲ್ಲಿ ಮೊಟ್ಟ ಮೊದಲ ಭಾರಿ ಮೈಫ್ಸ್ (MIFSE) ಮತ್ತು ಅನುಗ್ರಹ ಟ್ರೈನಿಂಗ್ ಕಾಲೇಜು ಜಂಟಿ ಸಹಯೋಗದಲ್ಲಿ ಡಿಪ್ಲೋಮಾ, ಪಿ ಜಿ ಡಿಪ್ಲೋಮಾ ಹಾಗೂ ತಾಂತ್ರಿಕ , ವೃತ್ತಿಪರ ತರಬೇತಿ ಸಂಸ್ಥೆ ಶೀಘ್ರದಲ್ಲಿ ಆರಂಭ

Suddi Udaya

ನಡ ಸ.ಪ್ರೌ. ಶಾಲಾ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಕ್ರೀಡಾಪಟು ದಿನೇಶ್ ವೇಣೂರುರಿಂದ ಕ್ರೀಡಾ ಸ್ಪೈಕ್ ಶೂ ಕೊಡುಗೆ

Suddi Udaya

ಬೆಳ್ತಂಗಡಿ ಚರ್ಚ್ ಗಳಲ್ಲಿ ಗುಡ್ ಫ್ರೈಡೆ ಆಚರಣೆ

Suddi Udaya

ಬೆಳ್ತಂಗಡಿ : ಸಂತೆಕಟ್ಟೆ ಬಳಿ ಖಾಸಗಿ ಬಸ್ಸು ಹಾಗೂ ಟ್ಯಾಂಕರ್ ನಡುವೆ ಡಿಕ್ಕಿ: ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರು

Suddi Udaya
error: Content is protected !!