25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಜ್ಞಾನ ನಿಧಿ ಸ್ಕಾಲರ್ ಶಿಪ್ ಮಂಜೂರಾತಿ ಪತ್ರ ವಿತರಣೆ

ಕೂತ್ಲೂರು ಕಾರ್ಯಕ್ಷೇತ್ರದ ಎ ಒಕ್ಕೂಟದ ಶಿವಶಕ್ತಿ ಗುಂಪಿನ ಸದಸ್ಯರಾದ ಕರಿಯ ಪೂಜಾರಿ ಇವರ ಪುತ್ರಿ ವೇದಾವತಿ ಇವರಿಗೆ ಸುಜ್ಞಾನ ನಿಧಿ ಮಂಜೂರಾತಿ ಪತ್ರವನ್ನು ವಲಯ ಸಂಚಾಲಕ ವಸಂತ್ ಭಟ್ ವಿತರಣೆ ಮಾಡಿದರು. ಇಲ್ಲಿಯವರೆಗೆ ನಾರಾವಿ ವಲಯದಲ್ಲಿ 40 ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು ಸುಜ್ಞಾನ ನಿಧಿ ಬರುತ್ತಿದ್ದು ಈ ವರ್ಷದಲ್ಲಿ 13 ಹೊಸ ವಿದ್ಯಾರ್ಥಿಗಳಿಗೆ ಮಂಜೂರಾತಿ ಆಗಿರುತ್ತದೆ.

ಕೂತ್ಲೂರು ಎ ಒಕ್ಕೂಟದ ಅಧ್ಯಕ್ಷ ಸಂತೋಷ್ ಪೂಜಾರಿ ಹಾಗೂ ಬಿ ಒಕ್ಕೂಟದ ಅಧ್ಯಕ್ಷ ಏಕನಾಥ ಪೂಜಾರಿ, ವಲಯ ಮೇಲ್ವಿಚಾರಕರು ವಿಶಾಲ ಕೆ, ಸೇವಾಪ್ರತಿನಿಧಿ ಉಷಾ ಸಂತೋಷ್, ಯೋಜನೆಯ ಹಿರಿಯ ಸದಸ್ಯರು ಡಾಕಯ್ಯ ಪೂಜಾರಿ, ಮಾಜಿ ಸೇವಾಪ್ರತಿನಿಧಿ ಕೇಶವ, ಬಿ ಒಕ್ಕೂಟದ ಪದಾಧಿಕಾರಿಗಳಾದ ಸುಧಾಕರ, ಕುಶಾಲ, ನವೀನ್, ಯೋಗೀಶ್, ಸುರೇಂದ್ರ ಎ ಒಕ್ಕೂಟದ ಪದಾಧಿಕಾರಿ ಅರುಣಾ, ನಿಕಟ ಪೂರ್ವ ಅಧ್ಯಕ್ಷ ಕರಿಯ ಪೂಜಾರಿ, ಉಪಾಧ್ಯಕ್ಷೆ ಜಯಂತಿ ಬಿ, ಒಕ್ಕೂಟದ ತ್ರೈಮಾಸಿಕ ಸಭೆಗೆ ಆಗಮಿಸಿದ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

Related posts

ಹತ್ಯಡ್ಕ ಪ್ರಾ.ಕೃ.ಪ. ಸಹಕಾರಿ ಸಂಘದ ಸಿಬ್ಬಂದಿವರ್ಗದವರಿಂದ ನಿವೃತ್ತ ಮುಖ್ಯಕಾರ್ಯನಿರ್ವಹಣಾಧಿಕಾರಿ ಪಿ. ತ್ಯಾಂಪಣ್ಣ ಶೆಟ್ಟಿಗಾರ್ ರವರಿಗೆ ಗೌರವಾರ್ಪಣೆ

Suddi Udaya

ಪಿಲ್ಯ ಗೋಳಿಕಟ್ಟೆಯಲ್ಲಿ ಕಾರು ಅಪಘಾತ

Suddi Udaya

ಚಾರ್ಮಾಡಿಯಲ್ಲಿ ಬಿರುಸಿನ ಮತದಾನ

Suddi Udaya

ಅಡಿಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನದ ಸಭೆ: ಅಡಕೆ ನಿಷೇಧದ ಆತಂಕ ನಿವಾರಣೆಗೆ ಪ್ರಯತ್ನ

Suddi Udaya

ಪ್ರಕೃತಿಯ ವಿಸ್ಮಯ: ತೊತಪುರಿ ಮಾವಿನ ಕಾಯಿಯಂತೆ ಕಂಡು ಬಂದ ಪಪ್ಪಾಯಿ ಹಣ್ಣು

Suddi Udaya

ಬೆಳ್ತಂಗಡಿ ಭೂ ನ್ಯಾಯಮಂಡಳಿಗೆ ನಾಲ್ವರು ಸದಸ್ಯರ ನಾಮನಿರ್ದೇಶನ

Suddi Udaya
error: Content is protected !!