30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಗ್ರಾ.ಪಂ.ನಲ್ಲಿ ಇಂಧನ ಘನತ್ಯಾಜ್ಯ ನಿರ್ವಹಣೆ ಹಾಗೂ ಮಳೆ ನೀರು ಕೊಯ್ಲು ಬಗ್ಗೆ ಅರಿವು ಕಾರ್ಯಕ್ರಮ

ಉಜಿರೆ: ಮಹಾತ್ಮ ಗಾಂಧಿ ಗ್ರಾಮೀಣ ಇಂಧನ ಮತ್ತು ಅಭಿವೃದ್ಧಿ ಸಂಸ್ಥೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಗ್ರಾಮ ಪಂಚಾಯತ್ ಉಜಿರೆ, ಪ್ರೇರಣ ಸಂಜೀವಿನಿ ಒಕ್ಕೂಟ ಉಜಿರೆ ಹಾಗೂ ಶ್ರೀ ಅನ್ನಪೂರ್ಣೇಶ್ವರಿ ಚಾರಿಟಿ ಫೌಂಡೇಶನ್ ಚಿಕ್ಕಮಗಳೂರು ಇವರ ಸಹಭಾಗಿತ್ವದಲ್ಲಿ ಉಜಿರೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನವೀಕರಿಸಬಹುದಾದ ಇಂಧನ ಘನತ್ಯಾಜ್ಯ ನಿರ್ವಹಣೆ ಹಾಗೂ ಮಳೆ ನೀರು ಕೊಯ್ಲು ವಿಷಯದಲ್ಲಿ ಅರಿವು ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮವನ್ನು ಗಿಡ ನೀಡುವ ಮೂಲಕ ಗ್ರಾಮ ಪಂಚಾಯಿತಿನ ಅಧ್ಯಕ್ಷೆ ಶ್ರೀಮತಿ ಉಷಾಕಿರಣ ಉದ್ಘಾಟಿಸಿ ಶುಭ ಹಾರೈಸಿದರು. ಗ್ರಾಮ ಪಂಚಾಯತ್ ನ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ನೊಚ್ಚ ಇವರು ಘನತ್ಯಾಜ್ಯ ನಿರ್ವಹಣೆಯನ್ನು ನಿರ್ವಹಿಸಲು ಸಾರ್ವಜನಿಕರ ಸಹಕಾರ ಅಗತ್ಯ ಎಂದು ತಿಳಿಸಿದರು. ವಿಷಯ ತಜ್ಞರಾದ ವಿಕ್ರಂ ಬೆಂಗಳೂರು ವಿನಾಯಕ ಹಾಗೂ ಅನ್ನಪೂರ್ಣೇಶ್ವರಿ ಫೌಂಡೇಶನ್ ನ ಅಧ್ಯಕ್ಷೆ ಸೌಮ್ಯ ಜೆ. ಜೆ ಮಾಹಿತಿ ನೀಡಿದರು.

ಪ್ರೇರಣ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ವಿನುತಾ ರಜತ್ ಗೌಡ ಅಧ್ಯಕ್ಷತೆ ವಹಿಸಿ ಸ್ವಾಗತಿಸಿದರು. ಗ್ರಾಮ ಪಂಚಾಯತ್ ನ ಉಪಾಧ್ಯಕ್ಷ ರವಿ ಕುಮಾರ್ ಬರಮೇಲು, ಮಾಜಿ ಅಧ್ಯಕ್ಷೆ ಪುಷ್ಪಾವತಿ ಆರ್ ಶೆಟ್ಟಿ, ಗ್ರಾಮ ಪಂಚಾಯಿತಿ ಸದಸ್ಯರುಗಳು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಅನ್ನಪೂರ್ಣೇಶ್ವರಿ ಫೌಂಡೇಶನ್ ವಿನಾಯಕ ನಿರೂಪಿಸಿ ಧನ್ಯವಾದ ಸಮರ್ಪಿಸಿದರು.

Related posts

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ವತಿಯಿಂದ ಲಿಂಗ ಸಮಾನತಾ ಪ್ರೇರಣಾ ತಂಡದ ಸದಸ್ಯರಿಗೆ ಸಾಮರ್ಥ್ಯ ವರ್ಧನಾ ತರಬೇತಿ

Suddi Udaya

ಮಲವಂತಿಗೆ : ಕೃಷಿಕನನ್ನು ಒಕ್ಕೆಲಬ್ಬಿಸಿ ಕೃಷಿಯನ್ನು ಸಂಪೂರ್ಣ ನಾಶ ಪಡಿಸಿದ ಅರಣ್ಯ ಇಲಾಖೆ

Suddi Udaya

ಅಪರ ಜಿಲ್ಲಾಧಿಕಾರಿಯಾಗಿ ಡಾ. ಸಂತೋಷ್ ಕುಮಾರ್ ಅಧಿಕಾರ ಸ್ವೀಕಾರ

Suddi Udaya

ಗುರುವಂದನೆ- ಶಿಕ್ಷಕರ ದಿನಾಚರಣೆಗೆ ಮುಳಿಯ ಜ್ಯುವೆಲ್ಸ್‌ನಿಂದ ವಿಶೇಷ ಕೊಡುಗೆ

Suddi Udaya

ಮುಂಡಾಜೆ ವಲಯದ ಕಾನರ್ಪ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya

ಭಾರತೀಯ ಭೂಸೇನೆಯಲ್ಲಿ 20 ವರ್ಷಗಳ ಕಾಲಸೇವೆಯನ್ನು ಸಲ್ಲಿಸಿ ನಿವೃತ್ತಿಗೊಂಡು ತವರಿಗೆ ಆಗಮಿಸಿದ ಯೋಧ ವಿಕ್ರಮ್ ಜೆ.ಎನ್ ರವರನ್ನು ಸ್ವಾಗತಿಸಿದ ಶಾಸಕ ಹರೀಶ್ ಪೂಂಜ

Suddi Udaya
error: Content is protected !!