July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತೆಕ್ಕಾರು ಇಬ್ಬನಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ಮಹಾಸಭೆ

ತೆಕ್ಕಾರು : ಇಬ್ಬನಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ತೆಕ್ಕಾರು ಇದರ ಮಹಾಸಭೆ ಸೆ. 15 ರಂದು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆಸಲಾಯಿತು.

ಮಹಾಸಭೆಯ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಹರಿಣಾಕ್ಷಿ ವಹಿಸಿದ್ದರು. ಒಕ್ಕೂಟದ ಅಧ್ಯಕ್ಷೆ ಹರಿಣಾಕ್ಷಿ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.ಎಮ್.ಬಿ.ಕೆ ಪವಿತ್ರ ಒಂದು ವರ್ಷದ ವರದಿ ಹಾಗೂ ಜಮಾ ಖರ್ಚಿನ ವರದಿಯನ್ನು ಮಂಡಿಸಿದರು. ಅದರ ಅನುಮೋದನೆ ಪಡೆಯಲಾಯಿತು.

ಕೃಷಿ ಪತ್ತಿನ ಅಧ್ಯಕ್ಷ ಅಬ್ದುಲ್ ರಜಾಕ್ ವಲಯ ಮೇಲ್ವಿಚಾರಕರು ಸ್ವಸ್ತಿಕ್ ಜೈನ್ ಉಪಸ್ಥಿತರಿದ್ದರು. ವಲಯ ಮೇಲ್ವಿಚಾರಕರು ಸಂಜೀವಿನಿ ಯೋಜನೆ ಬಗ್ಗೆ, ಅದರ ದೇಯೋದ್ದೇಶ ಬಗ್ಗೆ ಜೀವನೋಪಾಯ ಚಟುವಟಿಕೆ, ಒಕ್ಕೂಟದ ಬಗ್ಗೆ, ಬ್ಯಾಂಕ್ ಲೋನಿನ ಬಗ್ಗೆ, ಇತರ ಹಲವು ವಿಷಯದ ಬಗ್ಗೆ ಸವಿಸ್ತಾರವಾಗಿ ಮಾಹಿತಿ ನೀಡಿದರು ಹಾಗೂ ಮಾದಕ ಪದಾರ್ಥಗಳ ವ್ಯಸನ ಸಮಾಜದ ಮೇಲೆ ಆಗುತ್ತಿರುವ ದುಷ್ಪರಿಣಾಮದ ಕುರಿತು ಪ್ರತಿಜ್ಞೆಯನ್ನು ಮಾಡಿಸಿದರು. ಲಿಂಗತ್ವದ ದೌರ್ಜನ್ಯದ ಬಗ್ಗೆ ಮಾಹಿತಿ ನೀಡಿದರು.

ಸಹಕಾರಿ ಸಂಘದ ಅಧ್ಯಕ್ಷ ಅಬ್ದುಲ್ ರಜಾಕ್ ಸಂಜೀವಿನಿ ಸಂಘ ರಚನೆ ಮಾಡುವ ಹಾಗೂ ಸಹಕಾರಿ ಬ್ಯಾಂಕಿನಿಂದ ಸಿಗುವ ಸೌಲಭ್ಯದ ಬಗ್ಗೆ ಮಾಹಿತಿ ನೀಡಿದರು. ನೂತನ ಪದಾಧಿಕಾರಿಗಳ ಆಯ್ಕೆ ಮಾಡಿ ಅಧಿಕಾರ ಹಸ್ತಾಂತರ ಮಾಡಲಾಯಿತು. ನಿರ್ಗಮಿತ ಪದಾಧಿಕಾರಿಗಳಿಗೆ ಸ್ಮರಣೆಗೆ ನೀಡಿ ಗೌರವಿಸಲಾಯಿತು.

ಗುರು ಕೃಪಾ ಸಂಘದ ಸದಸ್ಯೆ ಮಮತಾ ಇವರ ಪ್ರಾರ್ಥಿಸಿ, ಕೃಷಿ ಸಖಿ ದಿವ್ಯ ಸ್ವಾಗತಿಸಿದರು. ಎಲ್ ಸಿ ಆರ್ ಪಿ ಉಷಾ ಮತ್ತು ಲೀಲಾವತಿ ಕಾರ್ಯಕ್ರಮ ನಿರೂಪಿಸಿದರು. ಪಶು ಸಖಿ ವಸಂತಿ ಬಿ ಧನ್ಯವಾದವಿತ್ತರು.

Related posts

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿಗಳ ಸಮ್ಮಿಲನ

Suddi Udaya

ನಿಡ್ಲೆ : ಚಾಲಕನ ನಿಯಂತ್ರಣ ತಪ್ಪಿ ಟಿಪ್ಪರ್ ಪಲ್ಟಿ

Suddi Udaya

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ಚುನಾವಣೆ; ಸತತ ಮೂರನೇ ಅವಧಿಗೆ ಅಧ್ಯಕ್ಷರಾಗಿ ಉದ್ಯಮಿ, ಸಂಘಟಕ ಸುಂದರ ಹೆಗ್ಡೆ ಹಾಗೂ ಉಪಾಧ್ಯಕ್ಷರಾಗಿ ರತ್ನಾಕರ ಪೂಜಾರಿ ಅವಿರೋಧ ಆಯ್ಕೆ

Suddi Udaya

ಶ್ರೀ. ಧ. ಮಂ. ಪ. ಪೂ.ಕಾಲೇಜಿನಲ್ಲಿ ವಾಣಿಜ್ಯ ಸಂಘ ಉದ್ಘಾಟನೆ

Suddi Udaya

ಮದ್ದಡ್ಕ ಎಸ್ ಡಿ ಪಿ ಐ ಸಂಸ್ಥಾಪನ ದಿನಾಚರಣೆ

Suddi Udaya

ಅರಸಿನಮಕ್ಕಿ: ಅರಿಕೆಗುಡ್ಡೆ ವನದುರ್ಗ ದೇವಿ ಕ್ಷೇತ್ರದಲ್ಲಿ ನವರಾತ್ರಿ ಪೂರ್ವಭಾವಿ ಸಭೆ

Suddi Udaya
error: Content is protected !!