ಧರ್ಮಸ್ಥಳ: ಇಲ್ಲಿಯ ನೇರ್ತನೆ ರಸ್ತೆ ಸಂಪೂರ್ಣವಾಗಿ ಹದಗೆಟ್ಟು ಹೋಗಿದ್ದು ವಾಹನ ಸಂಚಾರ ಕಷ್ಟಕರವಾಗಿದ್ದ ಹಿನ್ನಲೆಯಲ್ಲಿ ಸೆ.14 ರಂದು ಸ್ಥಳೀಯ ನಿವಾಸಿಗಳು ಶ್ರಮದಾನದ ಮೂಲಕ ಈ ರಸ್ತೆ ದುರಸ್ತಿಯ ಕಾರ್ಯ ನಡೆಸಿದರು.

ಮಳೆಗಾಲದಲ್ಲಿ ರಸ್ತೆ ಸಂಪೂರ್ಣವಾಗಿ ಹದಗೆಟ್ಟು ಹೋಗಿದ್ದು ಅಲ್ಲಲ್ಲಿ ದೊಡ್ಡ ಹೊಂಡಗಳು ನಿರ್ಮಾಣವಾಗಿತ್ತು ವಾಹನ ಸಂಚಾರ ಅತ್ಯಂತ ಕಷ್ಟಕರವಾಗಿತ್ತು ಈ ಬಗ್ಗೆ ಗ್ರಾಮಸ್ಥರು ಗ್ರಾಮಪಂಚಾಯತಿನ ಗಮನ ಸೆಳೆದಿದ್ದರೂ ಯಾವುದೇ ಕ್ರಮ ಕೈಗೊಳ್ಳದ ಹಿನ್ನಲೆಯಲ್ಲಿ ಸ್ಥಳೀಯರು ಶ್ರಮದಾನ ನಡೆಸಿ ರಸ್ತೆಯನ್ನು ಸಂಚಾರಕ್ಕೆ ಯೋಗ್ಯವಾಗಿಸುವ ಪ್ರಯತ್ನ ನಡೆಸಿದ್ದಾರೆ.











