July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೊಗ್ರು ಸ.ಕಿ.ಪ್ರಾ. ಶಾಲೆಯಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆ

ಮೊಗ್ರು: ಶಿಕ್ಷಣ ಇಲಾಖೆಯ ವತಿಯಿಂದ ನಡೆಯುತ್ತಿರುವ ಯೋಗಾಸನ ಸ್ಪರ್ಧೆಯ ಆಸನಗಳ ಆಯ್ಕೆ ಹಾಗೂ ತೀರ್ಪುಗಾರಿಕೆಗೆ ಯೋಗ ಶಿಕ್ಷಕರಿಗೆ ಹಾಗೂ ತೀರ್ಪುಗಾರರಿಗೆ ಪ್ರತಿವರ್ಷ ಕಾರ್ಯಾಗಾರ ನಡೆಸುವುದು ಅಗತ್ಯ ಎಂದು ರಾಜ್ಯ ಯೋಗ ತೀರ್ಪುಗಾರರು, ಅಜಿತ್ ಕುಮಾರ್ ಕೊಕ್ರಾಡಿ ಅಭಿಪ್ರಾಯ ಪಟ್ಟರು.

ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೆಳ್ತಂಗಡಿ, ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮೊಗ್ರುನಲ್ಲಿ ಮುಗೇರಡ್ಕ ಸರಕಾರಿ ಶಾಲಾ ಸೇವಾ ಟ್ರಸ್ಟ್ ಮುಗೇರಡ್ಕ ಮೊಗ್ರು ಇದರ ಪ್ರಾಯೋಜಕತ್ವದಲ್ಲಿ ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಪ್ರಸ್ತಾವಿಕವಾಗಿ ಮಾತನಾಡಿದರು. ಮುಗೇರಡ್ಕ ಸರಕಾರಿ ಶಾಲಾ ಸೇವಾ ಟ್ರಸ್ಟ್ ಮೊಗ್ರು ಇದರ ಸ್ಥಾಪಕಧ್ಯಕ್ಷ, ಯೋಗ ಗುರು ಕುಶಾಲಪ್ಪ ಗೌಡ ನೆಕ್ಕರಾಜೆ ಮಾತನಾಡಿ ಋಷಿ ಪರಂಪರೆಯ ಯೋಗ ವಿದ್ಯೆ ಮಹರ್ಷಿ ಪತಂಜಲಿ ಸೂತ್ರದಂತೆ ನಿತ್ಯ ಜೀವನವು ಯೋಗದ ಜೀವನ ಶೈಲಿಯಾಗಬೇಕು, ಆ ಮೂಲಕ ಸ್ಥಿತ ಪ್ರಜ್ಞೆ ಸಾಧಿಸಿದಾಗ ಜೀವನ ಸಾಧನೆಗೆ ಯೋಗಾಭ್ಯಾಸ ಸಹಕಾರಿಯಾಗುತ್ತದೆ ಎಂದರು.

ಬೆಳ್ತಂಗಡಿ ತಾಲೂಕು ಶಿಕ್ಷಣ ಇಲಾಖೆಯ ದೈಹಿಕ ಶಿಕ್ಷಣ ಪರಿವೀಕ್ಷಕಿ ಶ್ರೀಮತಿ ಸುಜಯಾ ಮಾತನಾಡಿ ಮಕ್ಕಳ ಪ್ರತಿಭೆ ಅನಾವರಣಕ್ಕೆ ಸ್ಪರ್ಧೆಗಳು ಅಗತ್ಯ. ಯೋಗಾಭ್ಯಾಸ ಸ್ಪರ್ಧೆಗೆ ಸೀಮಿತವಾಗಿರದೆ ನಿತ್ಯ ಜೀವನದಲ್ಲಿ ಆರೋಗ್ಯ ಪಡೆಯಲು ಸಹಕಾರಿ ಎಂದರು. ಮುಗೇರಡ್ಕ ಸರಕಾರಿ ಶಾಲಾ ಸೇವಾ ಟ್ರಸ್ಟ್(ರಿ) ಮೊಗ್ರು ಟ್ರಸ್ಟಿಗಳಾದ ನಿವೃತ್ತ ಪೊಲೀಸ್ ಅಧಿಕಾರಿ ಬಾಬುಗೌಡ ಸಂಪತ್ತು ನಿಲಯ ಹಾಗೂ ನಾಟಿ ವೈದ್ಯ ಕೃಷ್ಣಪ್ಪ ಗೌಡ ಮನ್ನುಡೆ ದೀಪ ಬೆಳಗಿಸಿ ಉದ್ಘಾಟಿಸಿದರು. ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ಗೌಡ ಖಂಡಿಗ ಅಧ್ಯಕ್ಷತೆ ವಹಿಸಿದರು. ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷೆ ಶ್ರೀಮತಿ ಪ್ರಜ್ಞಾ, ಪಂಚಾಯತ್ ಸದಸ್ಯರಾದ ಬಾಲಕೃಷ್ಣ ಗೌಡ ಮುಗೇರಡ್ಕ, ಗಂಗಾಧರ ಪೂಜಾರಿ, ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷ ಜಯರಾಮ್, ಮೊಗ್ರು ಶಾಲೆಯ ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಜಗದೀಶ ಅರ್ಬಿ, ಶ್ರೀಕ್ಷೇತ್ರ ಮುಗೇರಡ್ಕ ದ ಮೊಕೇಸರ ಚಂದ್ರಹಾಸ ದೇವಸ್ಯ, ಟ್ರಸ್ಟಿನ ಕೋಶಾಧಿಕಾರಿ ಪುರಂದರ ಗೌಡ ನ್ಯಾಮಾರು ಉಪಸ್ಥಿತರಿದ್ದರು.

ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮೊಗ್ರು ಮುಖ್ಯೋಪಾಧ್ಯಾಯ (ಪ್ರಭಾರ) ಮಾಧವ ಗೌಡ ಸ್ವಾಗತಿಸಿದರು. ಶಿಕ್ಷಕಿ ಶ್ರೀಮತಿ ದಿವ್ಯ ಧನ್ಯವಾದಗೈದರು. ಶಿಕ್ಷಕಿ ಕುಮಾರಿ ಕೀರ್ತಿ ನಿರೂಪಿಸಿದರು.

Related posts

ಕನ್ಯಾಡಿಯಲ್ಲಿ ಶ್ರೀ ಮಹಾಭಾರತ ಸರಣಿ ತಾಳಮದ್ದಳೆಯ ಉದ್ಘಾಟನೆ ಮತ್ತು ನುಡಿ ನಮನ ಕಾರ್ಯಕ್ರಮ

Suddi Udaya

ಉಜಿರೆ ಮಹಿಳಾ ವಿವಿದ್ದೋದೇಶ ಸಹಕಾರ ಸಂಘದ ಅಧ್ಯಕ್ಷರಾಗಿ ಶಶಿಕಲಾ ಡಿ ಗೌಡ , ಉಪಾಧ್ಯಕ್ಷರಾಗಿ ಪ್ರಮೀಳಾ

Suddi Udaya

ಬೆಳ್ತಂಗಡಿ ಬಿಷಪ್ ರಿಗೆ ಲಯನ್ಸ್ ಕ್ಲಬ್ ನಿಂದ ಬೆಳ್ಳಿಹಬ್ಬ ವರ್ಷದ “ಗೌರವಾಭಿನಂದನೆ”

Suddi Udaya

ಆಪರೇಷನ್ ಸಿಂದೂರ: ಪೆರಾಲ್ದರಕಟ್ಟೆ ಮಸೀದಿಯಲ್ಲಿ ವಿಶೇಷ ಪ್ರಾರ್ಥನೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya

ಕೋರಂ ಕೊರತೆ ಹಾಗೂ ಇಲಾಖಾಧಿಕಾರಿಗಳ ಗೈರುಹಾಜರಿಯಲ್ಲಿ ರದ್ದುಗೊಂಡ ಮಡಂತ್ಯಾರು ಗ್ರಾಮಸಭೆ

Suddi Udaya
error: Content is protected !!