22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಾಂತಿವನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯಲ್ಲಿ ಆಹಾರ ಮತ್ತು ಪೌಷ್ಠಿಕತೆಯ ಬಗ್ಗೆ ಜಾಗೃತಿ ಕಾರ್ಯಕ್ರಮ

ಉಜಿರೆ: ರಾಷ್ಟ್ರೀಯ ಪೌಷ್ಠಿಕಾಂಶ ಸಪ್ತಾಯ ಪ್ರಯುಕ್ತ ಶಾಂತಿವನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯಲ್ಲಿ ಸೆ.15 ರಂದು ಆಹಾರ ಮತ್ತು ಪೌಷ್ಠಿಕತೆಯ ಬಗ್ಗೆ ಸಾಧಕರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಆಳ್ವಾಸ್ ಕಾಲೇಜಿನ ಪದವಿ ಹಾಗೂ ಸ್ನಾತಕೋತ್ತರ ಪದವಿಯ ಆಹಾರ ಮತ್ತು ಪೋಷಣಾ ವಿಭಾಗದ ಮುಖ್ಯಸ್ಥ ಡಾ॥ ಅರ್ಚನಾ ಪ್ರಭಾತ್ ಸಾಧಕರಿಗೆ ಆಹಾರದ ಮಹತ್ವ ಮತ್ತು ಸಮಯ ಪಾಲನೆಯನ್ನು ನವ ಸಂಶೋಧನೆಗಳ ಉದಾಹರಣೆಯೊಂದಿಗೆ ತಿಳಿ ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಂತಿವನ ಟ್ರಸ್ಟ್‌ನ ಕಾರ್ಯದರ್ಶಿ ಬಿ. ಸೀತಾರಾಮ ತೋಳ್ಳಡಿತ್ತಾಯ ವಹಿಸಿ ಉಪವಾಸದ ಮಹತ್ವವನ್ನು ಪಸರಿಸಿದರು. ಕಾರ್ಯಕ್ರಮದಲ್ಲಿ ಆಸ್ಪತ್ರೆಯ ಮುಖ್ಯವೈದ್ಯಾಧಿಕಾರಿಗಳು ಹಾಗೂ ಯೋಗ ವಿಭಾಗದ ಡೀನ್ ಡಾ| ಶಿವಪ್ರಸಾದ್ ಶೆಟ್ಟಿ ಮತ್ತು ಶ್ರೀ ಧ. ಪ್ರ. ಚಿ. ಮಹಾವಿದ್ಯಾಲಯದ ಉಪಪ್ರಾಂಶುಪಾಲರು ಹಾಗೂ ಪ್ರಕೃತಿ ಚಿಕಿತ್ಸಾ ವಿಭಾಗದ ಡೀನ್ ಡಾ| ಸುಜಾತ ಅವರು ಉಪಸ್ಥಿತರನ್ನು ಉದ್ದೇಶಿಸಿ ಮಾತನಾಡಿದರು.

ಪೌಷ್ಠಿಕಾಂಶ ವಿಭಾಗದ ಡೀನ್ ಡಾ. ಗೀತಾ ಬಿ. ಶೆಟ್ಟಿ ಸ್ವಾಗತಿಸಿದರು ಹಾಗೂ ಸ್ಥಾನಿಕ ವೈದ್ಯಾಧಿಕಾರಿಗಳಾದ ಡಾ॥ ಬಿಂದು ವಂದಿಸಿದರು. ಸಭೆಯಲ್ಲಿ ಡಾ|| ಶಶಿಕಾಂತ್ ಜೈನ್ ನಿರ್ದೇಶಕರು, ವೈದ್ಯಾಧಿಕಾರಿಗಳು, ಸ್ನಾತಕೋತ್ತರ ವೈದ್ಯರು, ಕಲಿಕಾ ವೈದ್ಯರು, 200 ಕ್ಕೂ ಹೆಚ್ಚು ಸಾಧಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಪೆರಿಯಡ್ಕ ಸ.ಕಿ. ಪ್ರಾ. ಶಾಲಾ ರಜತ ಮಹೋತ್ಸವ ಸಮಿತಿಯಿಂದ ಉಜಿರೆ ಲಕ್ಷ್ಮಿ ಗ್ರೂಪ್ಸ್ ಮಾಲಕ ಮೋಹನ್ ಕುಮಾರ್ ರಿಗೆ ಸನ್ಮಾನ

Suddi Udaya

ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದಿದ್ದ ಮಹಿಳೆಯ ಬ್ಯಾಗಿನಲ್ಲಿದ್ದ ಪರ್ಸಿನಿಂದ ರೂ 2.16ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ರೂ. 5 ಸಾವಿರ ನಗದು ಕಳವು

Suddi Udaya

ಧರ್ಮಸ್ಥಳ: ನೇತ್ರಾವತಿ ನದಿಗೆ ಹಾರಿ ದಂಪತಿಗಳು ಆತ್ಮಹತ್ಯೆ: ದೊಂಡೋಲೆ ಪವರ್ ಪ್ರಾಜೆಕ್ಟ್ ಬಳಿ ಮೃತದೇಹ ಪತ್ತೆ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿನ ವಿದ್ಯಾರ್ಥಿ ಅನುಕ್ಷಾ ರಾಷ್ಟ್ರೀಯ ಭಾವೈಕ್ಯತಾ ಶಿಬಿರಕ್ಕೆ ಆಯ್ಕೆ

Suddi Udaya

ಉಡುಪಿಯಲ್ಲಿ ಲಕ್ಷಕಂಠ ಗೀತಾ ಭಜನೋತ್ಸವಕ್ಕೆ ಬೆಳ್ತಂಗಡಿ ತಾಲ್ಲೂಕಿನ ಭಜನಾಪಟುಗಳು

Suddi Udaya

ತೋಟತ್ತಾಡಿ ನಿವಾಸಿ ಜಯರಾಮ ರವರ ಚಿಕಿತ್ಸೆಗೆ ನೆರವಾಗಿ

Suddi Udaya
error: Content is protected !!