July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಾಂತಿವನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯಲ್ಲಿ ಆಹಾರ ಮತ್ತು ಪೌಷ್ಠಿಕತೆಯ ಬಗ್ಗೆ ಜಾಗೃತಿ ಕಾರ್ಯಕ್ರಮ

ಉಜಿರೆ: ರಾಷ್ಟ್ರೀಯ ಪೌಷ್ಠಿಕಾಂಶ ಸಪ್ತಾಯ ಪ್ರಯುಕ್ತ ಶಾಂತಿವನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯಲ್ಲಿ ಸೆ.15 ರಂದು ಆಹಾರ ಮತ್ತು ಪೌಷ್ಠಿಕತೆಯ ಬಗ್ಗೆ ಸಾಧಕರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಆಳ್ವಾಸ್ ಕಾಲೇಜಿನ ಪದವಿ ಹಾಗೂ ಸ್ನಾತಕೋತ್ತರ ಪದವಿಯ ಆಹಾರ ಮತ್ತು ಪೋಷಣಾ ವಿಭಾಗದ ಮುಖ್ಯಸ್ಥ ಡಾ॥ ಅರ್ಚನಾ ಪ್ರಭಾತ್ ಸಾಧಕರಿಗೆ ಆಹಾರದ ಮಹತ್ವ ಮತ್ತು ಸಮಯ ಪಾಲನೆಯನ್ನು ನವ ಸಂಶೋಧನೆಗಳ ಉದಾಹರಣೆಯೊಂದಿಗೆ ತಿಳಿ ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಂತಿವನ ಟ್ರಸ್ಟ್‌ನ ಕಾರ್ಯದರ್ಶಿ ಬಿ. ಸೀತಾರಾಮ ತೋಳ್ಳಡಿತ್ತಾಯ ವಹಿಸಿ ಉಪವಾಸದ ಮಹತ್ವವನ್ನು ಪಸರಿಸಿದರು. ಕಾರ್ಯಕ್ರಮದಲ್ಲಿ ಆಸ್ಪತ್ರೆಯ ಮುಖ್ಯವೈದ್ಯಾಧಿಕಾರಿಗಳು ಹಾಗೂ ಯೋಗ ವಿಭಾಗದ ಡೀನ್ ಡಾ| ಶಿವಪ್ರಸಾದ್ ಶೆಟ್ಟಿ ಮತ್ತು ಶ್ರೀ ಧ. ಪ್ರ. ಚಿ. ಮಹಾವಿದ್ಯಾಲಯದ ಉಪಪ್ರಾಂಶುಪಾಲರು ಹಾಗೂ ಪ್ರಕೃತಿ ಚಿಕಿತ್ಸಾ ವಿಭಾಗದ ಡೀನ್ ಡಾ| ಸುಜಾತ ಅವರು ಉಪಸ್ಥಿತರನ್ನು ಉದ್ದೇಶಿಸಿ ಮಾತನಾಡಿದರು.

ಪೌಷ್ಠಿಕಾಂಶ ವಿಭಾಗದ ಡೀನ್ ಡಾ. ಗೀತಾ ಬಿ. ಶೆಟ್ಟಿ ಸ್ವಾಗತಿಸಿದರು ಹಾಗೂ ಸ್ಥಾನಿಕ ವೈದ್ಯಾಧಿಕಾರಿಗಳಾದ ಡಾ॥ ಬಿಂದು ವಂದಿಸಿದರು. ಸಭೆಯಲ್ಲಿ ಡಾ|| ಶಶಿಕಾಂತ್ ಜೈನ್ ನಿರ್ದೇಶಕರು, ವೈದ್ಯಾಧಿಕಾರಿಗಳು, ಸ್ನಾತಕೋತ್ತರ ವೈದ್ಯರು, ಕಲಿಕಾ ವೈದ್ಯರು, 200 ಕ್ಕೂ ಹೆಚ್ಚು ಸಾಧಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಕಳೆಂಜ ಕ್ರಿಶ್ಚಿಯನ್ ಬ್ರದರ್‍ಸ್ ವತಿಯಿಂದ ಕಾಯರ್ತ್ತಡ್ಕ – ಶಿಬರಾಜೆ ರಸ್ತೆಯ ಶ್ರಮದಾನ

Suddi Udaya

ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆ, ಪುಷ್ಪರಥೋತ್ಸವ: ಅಭಿನಂದನೆ ಕಾರ್ಯಕ್ರಮ

Suddi Udaya

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದ ಅರ್ಚಕ ಚಂದ್ರಶೇಖರ್ ಭಟ್ ನಿಧನ

Suddi Udaya

ವೇಣೂರು ಸಿಎ ಬ್ಯಾಂಕ್ ಮತ್ತೊಮ್ಮೆ ಬಿಜೆಪಿ ಗದ್ದುಗೆಗೆ: ಆಡಳಿತ ಮಂಡಳಿಯನ್ನು ಅಭಿನಂದಿಸಿದ ಬಿಜೆಪಿ ಕಾರ್ಯಕರ್ತರು

Suddi Udaya

ಉಜಿರೆ: ಹಳೇಪೇಟೆ ಮುಹಿಯುದ್ದೀನ್ ಜುಮಾ ಮಸ್ಜಿದ್‌ನಲ್ಲಿ ವಿಜೃಂಭಣೆಯ ಸ್ವಾತಂತ್ರ್ಯ ದಿನಾಚರಣೆ

Suddi Udaya

ರೆಂಕೆದಗುತ್ತು: ವಿಪರೀತ ಮಳೆಯಿಂದ ಮನೆಗೆ ಹಾನಿ: ಸ್ಥಳಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ, ಪರಿಶೀಲನೆ

Suddi Udaya
error: Content is protected !!