23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಾಂತಿವನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯಲ್ಲಿ ಆಹಾರ ಮತ್ತು ಪೌಷ್ಠಿಕತೆಯ ಬಗ್ಗೆ ಜಾಗೃತಿ ಕಾರ್ಯಕ್ರಮ

ಉಜಿರೆ: ರಾಷ್ಟ್ರೀಯ ಪೌಷ್ಠಿಕಾಂಶ ಸಪ್ತಾಯ ಪ್ರಯುಕ್ತ ಶಾಂತಿವನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯಲ್ಲಿ ಸೆ.15 ರಂದು ಆಹಾರ ಮತ್ತು ಪೌಷ್ಠಿಕತೆಯ ಬಗ್ಗೆ ಸಾಧಕರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಆಳ್ವಾಸ್ ಕಾಲೇಜಿನ ಪದವಿ ಹಾಗೂ ಸ್ನಾತಕೋತ್ತರ ಪದವಿಯ ಆಹಾರ ಮತ್ತು ಪೋಷಣಾ ವಿಭಾಗದ ಮುಖ್ಯಸ್ಥ ಡಾ॥ ಅರ್ಚನಾ ಪ್ರಭಾತ್ ಸಾಧಕರಿಗೆ ಆಹಾರದ ಮಹತ್ವ ಮತ್ತು ಸಮಯ ಪಾಲನೆಯನ್ನು ನವ ಸಂಶೋಧನೆಗಳ ಉದಾಹರಣೆಯೊಂದಿಗೆ ತಿಳಿ ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಂತಿವನ ಟ್ರಸ್ಟ್‌ನ ಕಾರ್ಯದರ್ಶಿ ಬಿ. ಸೀತಾರಾಮ ತೋಳ್ಳಡಿತ್ತಾಯ ವಹಿಸಿ ಉಪವಾಸದ ಮಹತ್ವವನ್ನು ಪಸರಿಸಿದರು. ಕಾರ್ಯಕ್ರಮದಲ್ಲಿ ಆಸ್ಪತ್ರೆಯ ಮುಖ್ಯವೈದ್ಯಾಧಿಕಾರಿಗಳು ಹಾಗೂ ಯೋಗ ವಿಭಾಗದ ಡೀನ್ ಡಾ| ಶಿವಪ್ರಸಾದ್ ಶೆಟ್ಟಿ ಮತ್ತು ಶ್ರೀ ಧ. ಪ್ರ. ಚಿ. ಮಹಾವಿದ್ಯಾಲಯದ ಉಪಪ್ರಾಂಶುಪಾಲರು ಹಾಗೂ ಪ್ರಕೃತಿ ಚಿಕಿತ್ಸಾ ವಿಭಾಗದ ಡೀನ್ ಡಾ| ಸುಜಾತ ಅವರು ಉಪಸ್ಥಿತರನ್ನು ಉದ್ದೇಶಿಸಿ ಮಾತನಾಡಿದರು.

ಪೌಷ್ಠಿಕಾಂಶ ವಿಭಾಗದ ಡೀನ್ ಡಾ. ಗೀತಾ ಬಿ. ಶೆಟ್ಟಿ ಸ್ವಾಗತಿಸಿದರು ಹಾಗೂ ಸ್ಥಾನಿಕ ವೈದ್ಯಾಧಿಕಾರಿಗಳಾದ ಡಾ॥ ಬಿಂದು ವಂದಿಸಿದರು. ಸಭೆಯಲ್ಲಿ ಡಾ|| ಶಶಿಕಾಂತ್ ಜೈನ್ ನಿರ್ದೇಶಕರು, ವೈದ್ಯಾಧಿಕಾರಿಗಳು, ಸ್ನಾತಕೋತ್ತರ ವೈದ್ಯರು, ಕಲಿಕಾ ವೈದ್ಯರು, 200 ಕ್ಕೂ ಹೆಚ್ಚು ಸಾಧಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಸಂಜಯ್ ಗ್ಲೋಬಲ್ ಫೌಂಡೇಶನ್ ವತಿಯಿಂದ ರಕ್ತದಾನ ಶಿಬಿರ

Suddi Udaya

ಕೇಂದ್ರ ಸರ್ಕಾರ ನೇಮಿಸಿರುವ ಜಗದಾಂಬಿಕ ಪಾಲ್ ಅಧ್ಯಕ್ಷತೆಯ ಜಂಟಿ ಸದನ ಸಮಿತಿಗೆ ರಾಜ್ಯದ ರೈತರು ಹಾಗೂ ಹಿಂದೂಗಳು ಅನುಭವಿಸುತ್ತಿರುವ ಸಮಸ್ಯೆಗಳ ಕುರಿತಾದ ವಿಸ್ತೃತ ವರದಿ ಸಲ್ಲಿಸಿಕೆ

Suddi Udaya

ಕುವೆಟ್ಟು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ‘ಆಟಿಡೊಂಜಿ ಕೂಟ’ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಾಳೆ(ಜೂ.23): ಬೆಳ್ತಂಗಡಿ ಲಯನ್ಸ್ ಕ್ಲಬ್ ಸುವರ್ಣ ಸಂಭ್ರಮ: ಸಂಸದ ಬ್ರಿಜೇಶ್ ಚೌಟ ಭಾಗಿ

Suddi Udaya

ಕುವೆಟ್ಟು: ಎರಂಗಲ್ಲು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ನಿಡ್ಲೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!