ಕೊಪ್ಪ: ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ಹಾಗೂ ಶ್ರೀ ಧ. ಗ್ರಾ.ಯೋಬಿ.ಸಿ ಟ್ರಸ್ಟ್ ಸಹಯೋಗದಲ್ಲಿ ಕೊಪ್ಪ ತಾಲೂಕಿನ 2000ಕ್ಕಿಂತಲೂ ಅಧಿಕ ಸಾರ್ವಜನಿಕರಿಗೆ ಯೋಗ ಹಾಗೂ ಧ್ಯಾನ ಶಿಬಿರ ಅ.3 ರಿಂದ 8 ರತನಕ ನಡೆಯಲಿದೆ.
ಕಾರ್ಯಕ್ರಮದ ಬಗ್ಗೆ ಪೂರ್ವಭಾವಿ ಸಭೆಯು ಗ್ರಾಮಾಭಿವೃದ್ಧಿ ಕಚೇರಿಯಲ್ಲಿ ನಡೆಯಿತು.
ಸಭೆಯಲ್ಲಿ ಜನಜಾಗೃತಿ ವೇದಿಕೆಯ ಉಪಾಧ್ಯಕ್ಷ ಬಾಲಕೃಷ್ಣ , ದೇವಪ್ಪ , ಯೋಜನಾಧಿಕಾರಿ ರಾಜೇಶ್ , ಯೋಗ ಸಂಘಟಕ ಶೇಖರ್, ನಿರ್ದೇಶಕರಾದ ಡಾ| ಶಶಿಕಾಂತ್ ಜೈನ್ ಉಪಸ್ಥಿತರಿದ್ದು ಶಿಬಿರದ ಮಾಹಿತಿ ಹಾಗೂ ಸಾರ್ವಜನಿಕರು ಇದರ ಪ್ರಯೋಜನ ಪಡೆಯಬೇಕು ಎಂದು ತಿಳಿಸಿದರು.











