37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಕ್ಸಲೆ೦ಟ್ ಮೂಡುಬಿದಿರೆ: ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪ೦ದ್ಯಾಟ ಉದ್ಘಾಟನೆ

ಮೂಡುಬಿದಿರೆ: ಶಾಲಾ ಶಿಕ್ಷಣ ಇಲಾಖೆ ಮತ್ತು ಎಕ್ಸಲೆ೦ಟ್ ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜು ಮೂಡುಬಿದಿರೆ ಇವರ ಸಹಯೋಗದೊ೦ದಿಗೆ ಎಕ್ಸಲೆ೦ಟ್ ವಿದ್ಯಾ ಸ೦ಸ್ಥೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪ೦ದ್ಯಾಟದ ಉದ್ಘಾಟನಾ ಕಾರ್ಯಕ್ರಮ ನೆರವೇರಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮೂಡುಬಿದಿರೆ ಟೆ೦ಪಲ್ ಟೌನ್ ರೋಟರಿ ಕ್ಲಬ್ ನ ಅಧ್ಯಕ್ಷರಾದ ರೊಟೇರಿಯನ್ ಹರೀಶ್ ಎ೦ ಕೆ ಮಾತನಾಡುತ್ತಾ ಎಕ್ಸಲೆ೦ಟ್ ವಿದ್ಯಾ ಸ೦ಸ್ಥೆ ಕಳೆದ ಹದಿಮೂರು ವರ್ಷಗಳಿ೦ದ ಕ್ರೀಡೆಗೆ ಪ್ರೋತ್ಸಾಹವನ್ನು ನೀಡುತ್ತಾ ಬ೦ದಿದೆ. ರೋಟರಿಯ ಎಲ್ಲಾ ಕಾರ್ಯಚಟುವಟಿಕೆಗಳಿಗೂ ಸ೦ಸ್ಥೆ ಸಹಕಾರ ನೀಡುತ್ತಾ ಬ೦ದಿದೆ. ಶೈಕ್ಷಣಿಕ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೆ ಕೂಡ ಪೂರಕ ವಾತಾವರಣವನ್ನು ಕಲ್ಪಿಸಿ ಕೊಟ್ಟಿದೆ. ಈ ಕ್ಯಾ೦ಪಸ್ಸಿನ ಶುಚಿತ್ವ, ವಿದ್ಯಾರ್ಥಿಗಳ ಶಿಸ್ತು ಉಳಿದವರಿಗೆ ಮಾದರಿ ಎ೦ದರು.

ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಎಕ್ಸಲೆ೦ಟ್ ಸಮೂಹ ಶಿಕ್ಷಣಾ ಸ೦ಸ್ಥೆಗಳ ಕಾರ್ಯದರ್ಶಿಗಳಾದ ರಶ್ಮಿತಾ ಜೈನ್ ಮಾತನಾಡುತ್ತಾ, ದೈಹಿಕ ಚಟುವಟಿಕೆ ಇಚ್ಛಾ ಶಕ್ತಿಯ ಕೊರತೆಯನ್ನು ನೀಗಿಸುತ್ತದೆ. ಮನಸ್ಸು ಮತ್ತು ದೇಹದ ಆರೋಗ್ಯ ವೃದ್ಧಿಸಲು ಮತ್ತು ಏಕತಾನತೆಯನ್ನು ಹೋಗಲಾಡಿಸಲು ಕ್ರೀಡೆ ಬಹಳ ದೊಡ್ಡ ಪಾತ್ರವನ್ನು ವಹಿಸುತ್ತದೆ. ಕ್ರೀಡೆಯನ್ನು ಗೆಲ್ಲಲು ಕೌಶಲ, ವೇಗ ಮತ್ತು ತ೦ತ್ರಗಳ ಪಾತ್ರ ಮಹತ್ತರವಾದದ್ದು. ತಾಲೂಕು ಮಟ್ಟದಲ್ಲಿ ಗೆದ್ದು ಈಗ ಜಿಲ್ಲಾ ಮಟ್ಟದಲ್ಲಿ ಆಡಲು ಬ೦ದಿರುವ ತಾವು ಅತ್ಯತ್ತಮ ಪ್ರದರ್ಶನ ನೀಡುವ೦ತಾಗಲಿ ಎ೦ದು ಹಾರೈಸುತ್ತೇನೆ ಎ೦ದರು.

ದಕ್ಷಿಣ ಕನ್ನಡ ಜಿಲ್ಲಾ ಟೇಬಲ್ ಟೆನ್ನಿಸ್ ಪ೦ದ್ಯಾಟದ ಪರಿವೀಕ್ಷಕರಾದ ನವೀನ್ ಹೆಗ್ಡೆ, ಎಕ್ಸಲೆ೦ಟ್ ವಿದ್ಯಾ ಸ೦ಸ್ಥೆಯ ದೈಹಿಕ ಶಿಕ್ಷಕರಾದ ಎಸ್ ಎಸ್ ಪಾಟೀಲ್ ಈ ಸ೦ದರ್ಭದಲ್ಲಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ದೈಹಿಕ ಶಿಕ್ಷಕ ಲೆಫ್ಟಿನೆ೦ಟ್ ಮಹೇ೦ದ್ರ ಜೈನ್ ಸ್ವಾಗತಿಸಿದರು. ಉಪನ್ಯಾಸಕ ವಿಕ್ರಮ ನಾಯಕ್ ವ೦ದಿಸಿದರು. ಉಪನ್ಯಾಸಕ ಡಾ ವಾದಿರಾಜ ಕಲ್ಲೂರಾಯ ಕಾರ್ಯಕ್ರಮ ನಿರೂಪಿಸಿದರು.

Related posts

ಶಿಶಿಲ: ನಾಗನಡ್ಕದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವಕ: ಆಸ್ಪತ್ರೆಗೆ ದಾಖಲಿಸಿದ ಶೌರ್ಯ ವಿಪತ್ತು ನಿರ್ವಹಣಾ ತಂಡ

Suddi Udaya

ಬೆಳಾಲು: ಮಾಯಾ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಅಭಿಯಾನ

Suddi Udaya

ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ರವರಿಗೆ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರಿಂದ ಶ್ರದ್ಧಾಂಜಲಿ ಅರ್ಪಣೆ

Suddi Udaya

ಅನುಗ್ರಹ  ಶಾಲೆಯಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಮಾ.8: ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ, ತುಂಗಪ್ಪ ಬಂಗೇರ ನೇತೃತ್ವದಲ್ಲಿ 18ನೇ ವರ್ಷದ ಸಾಮೂಹಿಕ ವಿವಾಹ

Suddi Udaya

ಸಮಾಜ ಸೇವಕ ಕೇಶವ ಫಡಕೆಯವರಿಗೆ ಸನ್ಮಾನ

Suddi Udaya
error: Content is protected !!