25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ, ಹೊಸ ಉತ್ಪನ್ನಗಳ ಪರಿಚಯದ ಸ್ಪರ್ಧಾ ಕಾರ್ಯಕ್ರಮ

ಕಕ್ಯಪದವು : ಪಾದೆಗುತ್ತು ಲಿಂಗಪ್ಪ ಮಾಸ್ತರ್ ಮೆಮೋರಿಯಲ್ ಎಜುಕೇಷನಲ್ ಟ್ರಸ್ಟ್ (ರಿ) ನಿಂದ ನಡೆಸಲ್ಪಡುವ ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ ಪದವಿ ಹಾಗೂ ಪದವಿಪೂರ್ವ ವಿಭಾಗದ ವಿದ್ಯಾರ್ಥಿಗಳಿಗೆ ಹೊಸ ಉತ್ಪನ್ನಗಳ ಪರಿಚಯದ ಸ್ಪರ್ಧಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ವಿಭಿನ್ನ ರೀತಿಯ ಉತ್ಪನ್ನಗಳನ್ನು ಪರಿಚಯಿಸಿ, ಅವುಗಳ ವೈಶಿಷ್ಟ್ಯಗಳು, ಉಪಯೋಗಗಳು ಹಾಗೂ ಮಾರ್ಕೆಟಿಂಗ್ ತಂತ್ರಗಳನ್ನು ಸೃಜನಾತ್ಮಕವಾಗಿ ಪ್ರದರ್ಶಿಸಿದರು. ಪ್ರತಿಯೊಂದು ತಂಡವು ತನ್ನ ಉತ್ಪನ್ನವನ್ನು ನವೀನ ರೀತಿಯಲ್ಲಿ ಪ್ರಸ್ತುತಪಡಿಸಿ, ಮಾರಾಟ ತಂತ್ರಗಳು, ಗ್ರಾಹಕರ ಆಕರ್ಷಣೆ ಮತ್ತು ಜಾಹೀರಾತಿನ ಮಹತ್ವವನ್ನು ಮನೋಜ್ಞವಾಗಿ ವಿವರಿಸಿದರು.

ಈ ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ವ್ಯವಹಾರಿಕ ಚಿಂತನೆ, ಸೃಜನಶೀಲತೆ ಹಾಗೂ ತಂಡದ ಮನೋಭಾವವನ್ನು ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸಿತು. ಕಾರ್ಯಕ್ರಮದಲ್ಲಿ
ಸಂಸ್ಥೆಯ ಸಂಯೋಜಕರಾದ ಯಶವಂತ ಜಿ ನಾಯಕ್, ವಾಣಿಜ್ಯ ವಿಭಾಗದ ಉಪನ್ಯಾಸಕರಾದ ದೀಕ್ಷಿತಾ, ಹಾಗೂ ದೀಕ್ಷಿತಾ. ಎ ಇವರು ತೀರ್ಪುಗಾರರಾಗಿ ಭಾಗವಹಿಸಿದರು. ಸಂಸ್ಥೆಯ ಪ್ರಾಂಶುಪಾಲರಾದ ಜೋಸ್ಟನ್ ಲೋಬೊ, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಮಚ್ಚಿನ ಸ.ಉ. ಹಿ.ಪ್ರಾ. ಶಾಲೆಗೆ ಯುವ ಬೆಂಗಳೂರು ಟ್ರಸ್ಟ್ ವತಿಯಿಂದ ಸ್ಮಾರ್ಟ್ ಬೋರ್ಡ್ ಕೊಡುಗೆ

Suddi Udaya

ಬೆಂಗಳೂರಿನ ಸಪ್ನ ಪುಸ್ತಕ ಮಳಿಗೆಯಲ್ಲಿ ಪದ್ಮಲತಾ ಮೋಹನ್ ನಿಡ್ಲೆ ಅವರ ಕಾದಂಬರಿ ‘ಮೃತ್ಯು ಚುಂಬನ’ ಕೃತಿ ಬಿಡುಗಡೆ

Suddi Udaya

ಮುಂಡಾಜೆ: ರಾಷ್ಟ್ರೀಯ ಮತದಾರರ ದಿನಾಚರಣೆ

Suddi Udaya

ಆನ್ ಲೈನ್ ಜಾಬ್ ಆಫರ್ ನೀಡಿ ಮಹಿಳೆಗೆ ರೂ. 4.25 ಲಕ್ಷ ವಂಚನೆ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕೊಕ್ಕಡ: ಹೊಲಿಗೆ ತರಬೇತಿ ಕೇಂದ್ರದ ಸಮಾರೋಪ ಸಮಾರಂಭ

Suddi Udaya

ಕುವೆಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ ಬೇಸಿಗೆ ಶಿಬಿರ

Suddi Udaya
error: Content is protected !!