ತೆಕ್ಕಾರು : ಇಬ್ಬನಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ತೆಕ್ಕಾರು ಇದರ ಮಹಾಸಭೆ ಸೆ. 15 ರಂದು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆಸಲಾಯಿತು.
ಮಹಾಸಭೆಯ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಹರಿಣಾಕ್ಷಿ ವಹಿಸಿದ್ದರು. ಒಕ್ಕೂಟದ ಅಧ್ಯಕ್ಷೆ ಹರಿಣಾಕ್ಷಿ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.ಎಮ್.ಬಿ.ಕೆ ಪವಿತ್ರ ಒಂದು ವರ್ಷದ ವರದಿ ಹಾಗೂ ಜಮಾ ಖರ್ಚಿನ ವರದಿಯನ್ನು ಮಂಡಿಸಿದರು. ಅದರ ಅನುಮೋದನೆ ಪಡೆಯಲಾಯಿತು.
ಕೃಷಿ ಪತ್ತಿನ ಅಧ್ಯಕ್ಷ ಅಬ್ದುಲ್ ರಜಾಕ್ ವಲಯ ಮೇಲ್ವಿಚಾರಕರು ಸ್ವಸ್ತಿಕ್ ಜೈನ್ ಉಪಸ್ಥಿತರಿದ್ದರು. ವಲಯ ಮೇಲ್ವಿಚಾರಕರು ಸಂಜೀವಿನಿ ಯೋಜನೆ ಬಗ್ಗೆ, ಅದರ ದೇಯೋದ್ದೇಶ ಬಗ್ಗೆ ಜೀವನೋಪಾಯ ಚಟುವಟಿಕೆ, ಒಕ್ಕೂಟದ ಬಗ್ಗೆ, ಬ್ಯಾಂಕ್ ಲೋನಿನ ಬಗ್ಗೆ, ಇತರ ಹಲವು ವಿಷಯದ ಬಗ್ಗೆ ಸವಿಸ್ತಾರವಾಗಿ ಮಾಹಿತಿ ನೀಡಿದರು ಹಾಗೂ ಮಾದಕ ಪದಾರ್ಥಗಳ ವ್ಯಸನ ಸಮಾಜದ ಮೇಲೆ ಆಗುತ್ತಿರುವ ದುಷ್ಪರಿಣಾಮದ ಕುರಿತು ಪ್ರತಿಜ್ಞೆಯನ್ನು ಮಾಡಿಸಿದರು. ಲಿಂಗತ್ವದ ದೌರ್ಜನ್ಯದ ಬಗ್ಗೆ ಮಾಹಿತಿ ನೀಡಿದರು.
ಸಹಕಾರಿ ಸಂಘದ ಅಧ್ಯಕ್ಷ ಅಬ್ದುಲ್ ರಜಾಕ್ ಸಂಜೀವಿನಿ ಸಂಘ ರಚನೆ ಮಾಡುವ ಹಾಗೂ ಸಹಕಾರಿ ಬ್ಯಾಂಕಿನಿಂದ ಸಿಗುವ ಸೌಲಭ್ಯದ ಬಗ್ಗೆ ಮಾಹಿತಿ ನೀಡಿದರು. ನೂತನ ಪದಾಧಿಕಾರಿಗಳ ಆಯ್ಕೆ ಮಾಡಿ ಅಧಿಕಾರ ಹಸ್ತಾಂತರ ಮಾಡಲಾಯಿತು. ನಿರ್ಗಮಿತ ಪದಾಧಿಕಾರಿಗಳಿಗೆ ಸ್ಮರಣೆಗೆ ನೀಡಿ ಗೌರವಿಸಲಾಯಿತು.
ಗುರು ಕೃಪಾ ಸಂಘದ ಸದಸ್ಯೆ ಮಮತಾ ಇವರ ಪ್ರಾರ್ಥಿಸಿ, ಕೃಷಿ ಸಖಿ ದಿವ್ಯ ಸ್ವಾಗತಿಸಿದರು. ಎಲ್ ಸಿ ಆರ್ ಪಿ ಉಷಾ ಮತ್ತು ಲೀಲಾವತಿ ಕಾರ್ಯಕ್ರಮ ನಿರೂಪಿಸಿದರು. ಪಶು ಸಖಿ ವಸಂತಿ ಬಿ ಧನ್ಯವಾದವಿತ್ತರು.











