23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತೆಕ್ಕಾರು ಇಬ್ಬನಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ಮಹಾಸಭೆ

ತೆಕ್ಕಾರು : ಇಬ್ಬನಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ತೆಕ್ಕಾರು ಇದರ ಮಹಾಸಭೆ ಸೆ. 15 ರಂದು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆಸಲಾಯಿತು.

ಮಹಾಸಭೆಯ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಹರಿಣಾಕ್ಷಿ ವಹಿಸಿದ್ದರು. ಒಕ್ಕೂಟದ ಅಧ್ಯಕ್ಷೆ ಹರಿಣಾಕ್ಷಿ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.ಎಮ್.ಬಿ.ಕೆ ಪವಿತ್ರ ಒಂದು ವರ್ಷದ ವರದಿ ಹಾಗೂ ಜಮಾ ಖರ್ಚಿನ ವರದಿಯನ್ನು ಮಂಡಿಸಿದರು. ಅದರ ಅನುಮೋದನೆ ಪಡೆಯಲಾಯಿತು.

ಕೃಷಿ ಪತ್ತಿನ ಅಧ್ಯಕ್ಷ ಅಬ್ದುಲ್ ರಜಾಕ್ ವಲಯ ಮೇಲ್ವಿಚಾರಕರು ಸ್ವಸ್ತಿಕ್ ಜೈನ್ ಉಪಸ್ಥಿತರಿದ್ದರು. ವಲಯ ಮೇಲ್ವಿಚಾರಕರು ಸಂಜೀವಿನಿ ಯೋಜನೆ ಬಗ್ಗೆ, ಅದರ ದೇಯೋದ್ದೇಶ ಬಗ್ಗೆ ಜೀವನೋಪಾಯ ಚಟುವಟಿಕೆ, ಒಕ್ಕೂಟದ ಬಗ್ಗೆ, ಬ್ಯಾಂಕ್ ಲೋನಿನ ಬಗ್ಗೆ, ಇತರ ಹಲವು ವಿಷಯದ ಬಗ್ಗೆ ಸವಿಸ್ತಾರವಾಗಿ ಮಾಹಿತಿ ನೀಡಿದರು ಹಾಗೂ ಮಾದಕ ಪದಾರ್ಥಗಳ ವ್ಯಸನ ಸಮಾಜದ ಮೇಲೆ ಆಗುತ್ತಿರುವ ದುಷ್ಪರಿಣಾಮದ ಕುರಿತು ಪ್ರತಿಜ್ಞೆಯನ್ನು ಮಾಡಿಸಿದರು. ಲಿಂಗತ್ವದ ದೌರ್ಜನ್ಯದ ಬಗ್ಗೆ ಮಾಹಿತಿ ನೀಡಿದರು.

ಸಹಕಾರಿ ಸಂಘದ ಅಧ್ಯಕ್ಷ ಅಬ್ದುಲ್ ರಜಾಕ್ ಸಂಜೀವಿನಿ ಸಂಘ ರಚನೆ ಮಾಡುವ ಹಾಗೂ ಸಹಕಾರಿ ಬ್ಯಾಂಕಿನಿಂದ ಸಿಗುವ ಸೌಲಭ್ಯದ ಬಗ್ಗೆ ಮಾಹಿತಿ ನೀಡಿದರು. ನೂತನ ಪದಾಧಿಕಾರಿಗಳ ಆಯ್ಕೆ ಮಾಡಿ ಅಧಿಕಾರ ಹಸ್ತಾಂತರ ಮಾಡಲಾಯಿತು. ನಿರ್ಗಮಿತ ಪದಾಧಿಕಾರಿಗಳಿಗೆ ಸ್ಮರಣೆಗೆ ನೀಡಿ ಗೌರವಿಸಲಾಯಿತು.

ಗುರು ಕೃಪಾ ಸಂಘದ ಸದಸ್ಯೆ ಮಮತಾ ಇವರ ಪ್ರಾರ್ಥಿಸಿ, ಕೃಷಿ ಸಖಿ ದಿವ್ಯ ಸ್ವಾಗತಿಸಿದರು. ಎಲ್ ಸಿ ಆರ್ ಪಿ ಉಷಾ ಮತ್ತು ಲೀಲಾವತಿ ಕಾರ್ಯಕ್ರಮ ನಿರೂಪಿಸಿದರು. ಪಶು ಸಖಿ ವಸಂತಿ ಬಿ ಧನ್ಯವಾದವಿತ್ತರು.

Related posts

ಜು. 15: ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ಚಾರ್ಮಾಡಿ ಹಾಗೂ ಮಿತ್ತಬಾಗಿಲು ಗ್ರಾ.ಪಂ.ನಲ್ಲಿ ಜನಸ್ಪಂದನ ಕಾರ್ಯಕ್ರಮ

Suddi Udaya

ಗೇರುಕಟ್ಟೆ ಆಟೋ ರಿಕ್ಷಾ ಚಾಲಕ- ಮಾಲೀಕರ ಸಂಘದ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಗುರುವಾಯನಕೆರೆ: ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ವಾರ್ಷಿಕ ಜಾತ್ರೋತ್ಸವ ಆರಂಭ

Suddi Udaya

ಯಕ್ಷಭಾರತಿಯಿಂದ ಯಕ್ಷಗಾನ ಪ್ರದರ್ಶನ “ಇಂದ್ರಜಿತು ಕಾಳಗ”

Suddi Udaya

ಬೆಳಾಲು: ವ್ಯಕ್ತಿಯೋರ್ವರಿಗೆ ದ್ವಿಚಕ್ರ ವಾಹನ ಡಿಕ್ಕಿ

Suddi Udaya

ಕು| ಸೌಜನ್ಯ ಕೊಲೆ ಪ್ರಕರಣ: ಆ.27 ರಂದು ವಿಶ್ವ ಹಿಂದು ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡದ ವತಿಯಿಂದ ಬೃಹತ್ ಪಾದಯಾತ್ರೆ

Suddi Udaya
error: Content is protected !!