24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ದೇವನಗುಲ್‌ ಚಾರ್ಮಾಡಿ ಅಡ್ಡ ರಸ್ತೆಗೆ ಗೇಟ್‌ – ಅಕ್ರಮ ಚಟುವಟಿಕೆಗಳಿಗೆ ಕಡಿವಾಣ

ಚಾರ್ಮಾಡಿ : ಚಾರ್ಮಾಡಿ ಘಾಟ್‌ ಮಾರ್ಗಕ್ಕೆ ಸಂಪರ್ಕ ಕಲ್ಪಿಸುವ ದೇವನಗುಲ್‌ ಗ್ರಾಮದ ಅಡ್ಡದಾರಿ ಇತ್ತೀಚೆಗೆ ಅಕ್ರಮ ಚಟುವಟಿಕೆಗಳ ತಾಣವಾಗಿ ಪರಿಣಮಿಸಿತ್ತು. ರಾತ್ರಿ ವೇಳೆ ಸಂಶಯಾಸ್ಪದ ಸಾರಿಗೆ, ಕಾನೂನು ಉಲ್ಲಂಘನೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಪೊಲೀಸರು ಸ್ಥಳೀಯರ ಸಹಕಾರದೊಂದಿಗೆ ಕಟ್ಟುನಿಟ್ಟಿನ ಹೆಜ್ಜೆ ಇಟ್ಟಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಂ ಅಮಟೆ ಅವರ ಮಾರ್ಗದರ್ಶನದಲ್ಲಿ, ಬಣಕಲ್ ಠಾಣಾ ಪಿಎಸ್‌ಐ ರೇಣುಕಾ ನೇತೃತ್ವದ ತಂಡ ಹಾಗೂ ಪೊಲೀಸರು ಗ್ರಾಮಸ್ಥರ ಸಮ್ಮುಖದಲ್ಲಿ 12 ಅಡಿ ಉದ್ದದ ಬಲಿಷ್ಠ ಗೇಟ್‌ ಅಳವಡಿಸಿದರು. ಸುರಕ್ಷತೆಗಾಗಿ ರಸ್ತೆ ಎರಡೂ ಬದಿಗಳಲ್ಲಿ ಗುಂಡಿ ತೋಡಲಾಗಿದ್ದು, ರಾತ್ರಿ ವೇಳೆ ನಿಗಾವಹಿಸುವ ವ್ಯವಸ್ಥೆಯನ್ನೂ ಬಲಪಡಿಸಲಾಗಿದೆ.

ಹೊಸ ನಿಯಮದಂತೆ ಪ್ರತಿದಿನ ರಾತ್ರಿ 10ರಿಂದ ಬೆಳಿಗ್ಗೆ 6ರವರೆಗೆ ಈ ಮಾರ್ಗ ಸಂಪೂರ್ಣ ಬಂದ್ ಆಗಲಿದೆ. ಗೇಟ್‌ನ ಕೀಲಿಯನ್ನು ಕೊಟ್ಟಿಗೆಹಾರ ಚೆಕ್‌ಪೋಸ್ಟ್ ಸಿಬ್ಬಂದಿ ವಶದಲ್ಲಿರಿಸಿಕೊಂಡು ನಿರ್ವಹಣೆ ಕೈಗೊಳ್ಳಲಾಗುತ್ತಿದೆ.

“ಚಾರ್ಮಾಡಿ ಅಡ್ಡದಾರಿಯಲ್ಲಿ ನಡೆಯುತ್ತಿದ್ದ ಅಕ್ರಮ ಚಟುವಟಿಕೆಗಳು ಈಗ ಇತಿಹಾಸ. ಗೇಟ್‌ ಅಳವಡಿಕೆ ಕೇವಲ ತಾತ್ಕಾಲಿಕ ಪರಿಹಾರವಲ್ಲ, ಜನರ ಸುರಕ್ಷತೆ ಹಾಗೂ ಶಾಂತಿಗಾಗಿ ದೀರ್ಘಕಾಲಿಕ ಹೆಜ್ಜೆ. ಗ್ರಾಮಸ್ಥರ ಸಹಕಾರವು ಈ ಕಾರ್ಯಕ್ಕೆ ಜೀವ ತುಂಬಿದೆ. ಪೊಲೀಸರು–ಜನತೆ ಕೈಜೋಡಿಸಿದರೆ ಯಾವುದೇ ಕಾನೂನು ಉಲ್ಲಂಘನೆಗೆ ಅವಕಾಶವಿಲ್ಲ,” ಎಂದು ಎಸ್‌.ಪಿ. ವಿಕ್ರಂ ಅಮಟೆ ಸ್ಪಷ್ಟಪಡಿಸಿದರು.

ಈ ಕ್ರಮದಿಂದ ಅಕ್ರಮ ಸಾರಿಗೆ ಹಾಗೂ ಶಂಕಾಸ್ಪದ ಚಟುವಟಿಕೆಗಳಿಗೆ ಕಡಿವಾಣ ಬೀಳಲಿದೆ ಎಂಬ ವಿಶ್ವಾಸವನ್ನು ಪೊಲೀಸರು ಮಾತ್ರವಲ್ಲ, ಗ್ರಾಮಸ್ಥರೂ ವ್ಯಕ್ತಪಡಿಸಿದ್ದಾರೆ. ಪೊಲೀಸರು–ಜನರ ಸಹಕಾರದ ಮಾದರಿ ಎಂಬ ಪ್ರಶಂಸೆ ಎಲ್ಲೆಡೆಯಿಂದ ಕೇಳಿಬರುತ್ತಿದೆ.

Related posts

ತೆಲುಗು ನಟ ಶ್ರೀಕಾಂತ್ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ಭೇಟಿ

Suddi Udaya

ಮಾಲಾಡಿ: ಶುದ್ಧ ಕುಡಿಯುವ ನೀರಿನ ಘಟಕ ಸರಿಯಾಗಿ ನಿರ್ವಹಣೆ ಮಾಡದೆ ಲಕ್ಷಾಂತರ ರೂ. ಬೆಲೆಬಾಳುವ ಮಿಷನರಿಗಳು ಕಳ್ಳರ ಪಾಲು : ಸಂಬಂಧಪಟ್ಟ ಇಲಾಖೆಯವರು ಗಮನಹರಿಸಿ ನೀರಿನ ಘಟಕವನ್ನು ಜನಸಾಮಾನ್ಯರಿಗೆ ಉಪಯೋಗ ಆಗುವ ರೀತಿಯಲ್ಲಿ ಮಾಡುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಹತ್ಯಡ್ಕ: ಕೊಡಂಗೆ ನಿವಾಸಿ ಹರಿಹರ ಹೆಬ್ಬಾರ್ ಗೋಖಲೆ ನಿಧನ

Suddi Udaya

ಶಿರ್ಲಾಲು: ಬಿಲ್ಲವ ಸಂಘದ ಮಾಜಿ ಅಧ್ಯಕ್ಷ ಅಶೋಧರ ಸಾಲಿಯಾನ್ ನಿಧನ

Suddi Udaya

ಮಂಜೊಟ್ಟಿ ಸ್ಟಾರ್ ಲೈನ್ ಆಂ.ಮಾ. ಶಾಲೆ ರಝಾ ಗಾರ್ಡನ್ ನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಕಕ್ಕಿಂಜೆ: ರವಿ ಗುರುಸ್ವಾಮಿ ಅಸೌಖ್ಯದಿಂದ ನಿಧನ

Suddi Udaya
error: Content is protected !!