ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ದೇವರಿಗೆ ಕದಿರು ಅರ್ಪಣೆ, ಹೊಸ ಅಕ್ಕಿ ಊಟ

ಗೇರುಕಟ್ಟೆ: ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬಾಕಿಮಾರು ಗದ್ದೆಯಿಂದ ಮಂಗಲ ವಾದ್ಯದೊಂದಿಗೆ ಮೆರವಣಿಗೆಯ ಮೂಲಕ ತಂದು ದೇವರಿಗೆ ಕದಿರು ಸಮರ್ಪಿಸಿ, ದೇವರಿಗೆ ವಿಶೇಷ ಪೂಜೆ ನಡೆಯಿತು. ನಂತರ ಭಕ್ತಾದಿಗಳಿಗೆ ಕದಿರು ವಿತರಣೆ ಮಾಡಿದರು.


ದೇವರಿಗೆ ಮಹಾಪೂಜೆ, ದೈವಗಳಿಗೆ ಪರ್ವ ಹಾಗೂ ಹೊಸ ಅಕ್ಕಿ ಊಟದ (ನವಾನ್ನ ಭೋಜನ) ಸಮಾರಾಧನೆಯೊಂದಿಗೆ ಕೊಪ್ಪರಿಗೆ ಇಳಿಸುವ ಕಾರ್ಯಕ್ರಮ ನಡೆಯಿತು.


ಅನ್ನಸಂತರ್ಪಣೆ ಸೇವಾರ್ಥಿಗಳಾದ ಶ್ರೀಮತಿ ಮತ್ತು ಸತೀಶ್ ಭಟ್, ಕುಂಟಿನಿ, ಕೃಷ್ಣಪ್ಪ ಮಡಿವಾಳರ ಸ್ಮರಣಾರ್ಥ ಪತ್ನಿ ಹಾಗೂ ಮಕ್ಕಳು, ಪಡಂತ್ತೊಟ್ಟು ನಾಳ ನೆರವೇರಿಸಿದರು. ವ್ಯವಸ್ಥಾನ ಸಮಿತಿ,ಅಭಿವೃದ್ಧಿ ಸಮಿತಿ, ಶ್ರೀ ದುರ್ಗಾ ಮಾತೃಮಂಡಳಿ, ಭಜನಾ ಮಂಡಳಿ ಅಧ್ಯಕ್ಷರು, ಸದಸ್ಯರು, ಪದಾಧಿಕಾರಿಗಳು ಮತ್ತಿತರರಿದ್ದರು.

Related posts

ಪಾಲೇದು: ತಮ್ಮಯ್ಯ ಪೂಜಾರಿ ನಿಧನ

Suddi Udaya

ಉಜಿರೆ: ಸ್ನೇಹ ಕಿರಣ್ ಬೇಬಿ ಸಿಟ್ಟಿಂಗ್ ಗೆ ಮರ ಬಿದ್ದು ಹಾನಿ, ಅಪಾಯದಿಂದ ಪಾರಾದ ಮಕ್ಕಳು

Suddi Udaya

ಬೆಳಾಲು ಮುಖ್ಯರಸ್ತೆಯಲ್ಲಿ ಕಾಡಾನೆ ಪ್ರತ್ಯಕ್ಷ: ಅರಣ್ಯ ಇಲಾಖೆಯಿಂದ ಕಾರ್ಯಾಚರಣೆ

Suddi Udaya

ಕೊಕ್ಕಡ: EduNest ಅಕಾಡೆಮಿ ಕೋಚಿಂಗ್ ಕೇಂದ್ರ ಉದ್ಘಾಟನೆ

Suddi Udaya

ನಾವರ ರಾಜಪಾದೆ ನಿವಾಸಿ ಹಿಲಾರಿ ಡಿ.ಸೋಜ ನಿಧನ

Suddi Udaya

ಪೆರಿಂಜೆ ಎನ್ನೆನ್ನೆಸ್ ಶಿಬಿರಕ್ಕೆ ವಿಭಾಗಾಧಿಕಾರಿ ಭೇಟಿ

Suddi Udaya
error: Content is protected !!