July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಿಜೆಪಿ ಹೊಸಂಗಡಿ ಮತ್ತು ಬಡಕೋಡಿ ಶಕ್ತಿಕೇಂದ್ರದ ಅಭ್ಯಾಸವರ್ಗ ಕಾರ್ಯಕ್ರಮ

ಹೊಸಂಗಡಿ :ಭಾರತೀಯ ಜನತಾ ಪಾರ್ಟಿ ದ.ಕ ಜಿಲ್ಲೆ ಮತ್ತು ಬೆಳ್ತಂಗಡಿ ಮಂಡಲದ ವತಿಯಿಂದ ಸೆ.14 ರಂದು ಪೆರಿಂಜೆ ಹಾಲು ಉತ್ಪಾದಕರ ಸಹಕಾರಿ ಸಂಘದ ಸಭಾಂಗಣದಲ್ಲಿ ಬಿಜೆಪಿ ಹೊಸಂಗಡಿ ಮತ್ತು ಬಡಕೋಡಿ ಶಕ್ತಿಕೇಂದ್ರದ ವಿಶೇಷ ಅಭ್ಯಾಸವರ್ಗವು ಯಶಸ್ವಿಯಾಗಿ ನಡೆಯಿತು.

ಬಿಜೆಪಿ ದ.ಕ ಮಹಿಳಾ ಮೋರ್ಚಾದ ಉಪಾಧ್ಯಕ್ಷೆ ಶ್ರೀಮತಿ ವಿಜಯಾ ರಮೇಶ್ ಆರಂಬೋಡಿ, ಹೊಸಂಗಡಿ-ಬಡಕೋಡಿ ಶಕ್ತಿ ಕೇಂದ್ರ ಅಭ್ಯಾಸವರ್ಗದ ಪ್ರಭಾರಿ ನಾರಾವಿ ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಅಭಿಜಿತ್ ಜೈನ್, ಹಿರಿಯ ಕಾರ್ಯಕರ್ತರಾದ ಆನಂದ ಕೋಟ್ಯಾನ್, ರಾಮಪ್ಪ ಪೂಜಾರಿ, ಕೃಷ್ಣಪ್ಪ, ದಿನಕರ ಎರ್ಮೋಡಿ ದೀಪ ಬೆಳಗಿಸಿ, ಭಾರತ ಮಾತೆಗೆ ಪುಷ್ಪಾರ್ಚನೆಗೈದು ಕಾರ್ಯಕ್ರಮ ಉದ್ಘಾಟಿಸಿದರು. ಅಭ್ಯಾಸವರ್ಗದ ಸಂಘಟನಾ ಅವಧಿಯ ಸಂಪನ್ಮೂಲ ವ್ಯಕ್ತಿಗಳಾಗಿ ರಾಜೇಶ್ ಪೆರ್ಮುಡ, ಗೋಪಾಲಕೃಷ್ಣ ಹೇರಳೆ, ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಸುಧಾಕರ್ ಬಿ.ಎಲ್ ಲಾಯಿಲ ಭಾಗವಹಿಸಿದ್ದರು.

ಅಭ್ಯಾಸವರ್ಗದ ಸಮಾರೋಪ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶ್ರಮಿಕ ಶಾಸಕ ಹರೀಶ್ ಪೂಂಜರವರು ಭಾಗವಹಿಸಿ ಕಾರ್ಯಕರ್ತ ಬಂಧುಗಳಿಗೆ ರಾಷ್ಟ್ರೀಯತೆ, ಹಿಂದುತ್ವ ಮತ್ತು ಪಕ್ಷ ಸಂಘಟನೆಯ ಬಗ್ಗೆ ವಿಶೇಷ ಮಾರ್ಗದರ್ಶನ ನೀಡಿದರು. ಈ ಸಂದರ್ಭ ವೇದಿಕೆಯಲ್ಲಿ ಹೊಸಂಗಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಗದೀಶ್ ಹೆಗ್ಡೆ,ಉಪಾಧ್ಯಕ್ಷೆ ಶ್ರೀಮತಿ ಶಾಂತಾ ಕೃಷ್ಣಪ್ಪ,ಬಿಜೆಪಿ ಬೆಳ್ತಂಗಡಿ ಮಂಡಲದ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ನಾರಾವಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ನೇಮಯ್ಯ ಕುಲಾಲ್, ಪ್ರಗತಿಪರ ಕೃಷಿಕರಾದ ಸುಧಾಕರ ಶೆಟ್ಟಿ ಅಂಕರೋಡಿ ಉಪಸ್ಥಿತರಿದ್ದರು.

ಅಭ್ಯಾಸವರ್ಗದಲ್ಲಿ ಹೊಸಂಗಡಿ ಮತ್ತು ಬಡಕೋಡಿ ಶಕ್ತಿಕೇಂದ್ರ ಪ್ರಮುಖರಾದ ಕರುಣಾಕರ ಪೂಜಾರಿ, ರೋಶನ್ ಬಡಕೋಡಿ, ಪೆರಿಂಜೆ ಹಾಲು ಉತ್ಪಾದಕರ ಸಂಘದ ನಿರ್ದೇಶಕರುಗಳು, ಹೊಸಂಗಡಿ ಗ್ರಾಮ ಪಂಚಾಯತ್ ಸದಸ್ಯರುಗಳು, ಬೂತ್ ಸಮಿತಿಯ ಪದಾಧಿಕಾರಿಗಳು, ಪ್ರಮುಖರು, ಹಿರಿಯರು ಮತ್ತು ಕಾರ್ಯಕರ್ತ ಬಂಧುಗಳು ಉಪಸ್ಥಿತರಿದ್ದರು. ಗ್ರಾಮ ಪಂಚಾಯತ್ ಸದಸ್ಯರಾದ ಪ್ರಕಾಶ್ ದೇವಾಡಿಗ ಬಿಜೆಪಿ ಗೀತೆ ಹಾಡಿದರು. ಕರುಣಾಕರ ಪೂಜಾರಿ ಸ್ವಾಗತಿಸಿದರು. ಸೌಮ್ಯ ಪ್ರಕಾಶ್ ದೇವಾಡಿಗ ಕಾರ್ಯಕ್ರಮ ನಿರೂಪಿಸಿದರು.

Related posts

ವಿಜಯರತ್ನ ಪ್ರಶಸ್ತಿ ಪುರಸ್ಕೃತ, ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರನ್ನು ಅಭಿನಂದಿಸಿದ ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಪದಾಧಿಕಾರಿಗಳು

Suddi Udaya

ವ್ಯವಹಾರ ಆಡಳಿತ ನಿರ್ವಹಣೆ ಯಲ್ಲಿ ಕೃತಕ ಬುದ್ಧಿಮತ್ತೆ ಮತ್ತು ವೈಜ್ಞಾನಿಕ ಆವಿಷ್ಕಾರಗಳು ಅವಕಾಶಗಳನ್ನೂ ಸೃಷ್ಟಿಸುತ್ತದೆ ” ಎನ್ನುವ ವಿಚಾರದ ಕುರಿತು ಉಪನ್ಯಾಸ ಕಾರ್ಯಕ್ರಮ

Suddi Udaya

ಹೊಸಂಗಡಿಯಲ್ಲಿ ಟಿಪ್ಪರ್‌ ಲಾರಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಮರಳು ವಶ

Suddi Udaya

ಕುತ್ಯಾರು ಸೋಮನಾಥೇಶ್ವರ ದೇವಸ್ಥಾನದ ಮಹಾ ರಥೋತ್ಸವ

Suddi Udaya

ಲೋಕಸಭೆ ಚುನಾವಣೆ: ಬಿಜೆಪಿ ಎರಡನೇ ಪಟ್ಟಿ ಪ್ರಕಟ: ದ.ಕ. ಜಿಲ್ಲೆಯಿಂದ ಕ್ಯಾಪ್ಟನ್ ಬ್ರಿಜೇಶ್ ಚೌಟ

Suddi Udaya

ಬಳಂಜ ಶಿವಾಜಿ ಫ್ರೆಂಡ್ಸ್ ಕ್ಲಬ್ ನ ನೂತನ ಅಧ್ಯಕ್ಷರಾಗಿ ಯುವ ಸಂಘಟಕ ರಾಕೇಶ್ ಹೆಗ್ಡೆ ಆಯ್ಕೆ

Suddi Udaya
error: Content is protected !!