22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೊಗ್ರು ಸ.ಕಿ.ಪ್ರಾ. ಶಾಲೆಯಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆ

ಮೊಗ್ರು: ಶಿಕ್ಷಣ ಇಲಾಖೆಯ ವತಿಯಿಂದ ನಡೆಯುತ್ತಿರುವ ಯೋಗಾಸನ ಸ್ಪರ್ಧೆಯ ಆಸನಗಳ ಆಯ್ಕೆ ಹಾಗೂ ತೀರ್ಪುಗಾರಿಕೆಗೆ ಯೋಗ ಶಿಕ್ಷಕರಿಗೆ ಹಾಗೂ ತೀರ್ಪುಗಾರರಿಗೆ ಪ್ರತಿವರ್ಷ ಕಾರ್ಯಾಗಾರ ನಡೆಸುವುದು ಅಗತ್ಯ ಎಂದು ರಾಜ್ಯ ಯೋಗ ತೀರ್ಪುಗಾರರು, ಅಜಿತ್ ಕುಮಾರ್ ಕೊಕ್ರಾಡಿ ಅಭಿಪ್ರಾಯ ಪಟ್ಟರು.

ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೆಳ್ತಂಗಡಿ, ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮೊಗ್ರುನಲ್ಲಿ ಮುಗೇರಡ್ಕ ಸರಕಾರಿ ಶಾಲಾ ಸೇವಾ ಟ್ರಸ್ಟ್ ಮುಗೇರಡ್ಕ ಮೊಗ್ರು ಇದರ ಪ್ರಾಯೋಜಕತ್ವದಲ್ಲಿ ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಪ್ರಸ್ತಾವಿಕವಾಗಿ ಮಾತನಾಡಿದರು. ಮುಗೇರಡ್ಕ ಸರಕಾರಿ ಶಾಲಾ ಸೇವಾ ಟ್ರಸ್ಟ್ ಮೊಗ್ರು ಇದರ ಸ್ಥಾಪಕಧ್ಯಕ್ಷ, ಯೋಗ ಗುರು ಕುಶಾಲಪ್ಪ ಗೌಡ ನೆಕ್ಕರಾಜೆ ಮಾತನಾಡಿ ಋಷಿ ಪರಂಪರೆಯ ಯೋಗ ವಿದ್ಯೆ ಮಹರ್ಷಿ ಪತಂಜಲಿ ಸೂತ್ರದಂತೆ ನಿತ್ಯ ಜೀವನವು ಯೋಗದ ಜೀವನ ಶೈಲಿಯಾಗಬೇಕು, ಆ ಮೂಲಕ ಸ್ಥಿತ ಪ್ರಜ್ಞೆ ಸಾಧಿಸಿದಾಗ ಜೀವನ ಸಾಧನೆಗೆ ಯೋಗಾಭ್ಯಾಸ ಸಹಕಾರಿಯಾಗುತ್ತದೆ ಎಂದರು.

ಬೆಳ್ತಂಗಡಿ ತಾಲೂಕು ಶಿಕ್ಷಣ ಇಲಾಖೆಯ ದೈಹಿಕ ಶಿಕ್ಷಣ ಪರಿವೀಕ್ಷಕಿ ಶ್ರೀಮತಿ ಸುಜಯಾ ಮಾತನಾಡಿ ಮಕ್ಕಳ ಪ್ರತಿಭೆ ಅನಾವರಣಕ್ಕೆ ಸ್ಪರ್ಧೆಗಳು ಅಗತ್ಯ. ಯೋಗಾಭ್ಯಾಸ ಸ್ಪರ್ಧೆಗೆ ಸೀಮಿತವಾಗಿರದೆ ನಿತ್ಯ ಜೀವನದಲ್ಲಿ ಆರೋಗ್ಯ ಪಡೆಯಲು ಸಹಕಾರಿ ಎಂದರು. ಮುಗೇರಡ್ಕ ಸರಕಾರಿ ಶಾಲಾ ಸೇವಾ ಟ್ರಸ್ಟ್(ರಿ) ಮೊಗ್ರು ಟ್ರಸ್ಟಿಗಳಾದ ನಿವೃತ್ತ ಪೊಲೀಸ್ ಅಧಿಕಾರಿ ಬಾಬುಗೌಡ ಸಂಪತ್ತು ನಿಲಯ ಹಾಗೂ ನಾಟಿ ವೈದ್ಯ ಕೃಷ್ಣಪ್ಪ ಗೌಡ ಮನ್ನುಡೆ ದೀಪ ಬೆಳಗಿಸಿ ಉದ್ಘಾಟಿಸಿದರು. ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ಗೌಡ ಖಂಡಿಗ ಅಧ್ಯಕ್ಷತೆ ವಹಿಸಿದರು. ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷೆ ಶ್ರೀಮತಿ ಪ್ರಜ್ಞಾ, ಪಂಚಾಯತ್ ಸದಸ್ಯರಾದ ಬಾಲಕೃಷ್ಣ ಗೌಡ ಮುಗೇರಡ್ಕ, ಗಂಗಾಧರ ಪೂಜಾರಿ, ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷ ಜಯರಾಮ್, ಮೊಗ್ರು ಶಾಲೆಯ ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಜಗದೀಶ ಅರ್ಬಿ, ಶ್ರೀಕ್ಷೇತ್ರ ಮುಗೇರಡ್ಕ ದ ಮೊಕೇಸರ ಚಂದ್ರಹಾಸ ದೇವಸ್ಯ, ಟ್ರಸ್ಟಿನ ಕೋಶಾಧಿಕಾರಿ ಪುರಂದರ ಗೌಡ ನ್ಯಾಮಾರು ಉಪಸ್ಥಿತರಿದ್ದರು.

ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮೊಗ್ರು ಮುಖ್ಯೋಪಾಧ್ಯಾಯ (ಪ್ರಭಾರ) ಮಾಧವ ಗೌಡ ಸ್ವಾಗತಿಸಿದರು. ಶಿಕ್ಷಕಿ ಶ್ರೀಮತಿ ದಿವ್ಯ ಧನ್ಯವಾದಗೈದರು. ಶಿಕ್ಷಕಿ ಕುಮಾರಿ ಕೀರ್ತಿ ನಿರೂಪಿಸಿದರು.

Related posts

ರೆಖ್ಯ: ಮನೆಗೆ ಸಿಡಿಲು ಬಡಿದು ಅಪಾರ ಹಾನಿ: ಸಿಡಿಲ ಆಘಾತಕ್ಕೆ ದನ ಹಾಗು ನಾಯಿ ಸಾವು

Suddi Udaya

ಬೆಳ್ತಂಗಡಿ: ರೆಂಕೆದಗುತ್ತು ನಿವಾಸಿ ಪಟ್ಟಣ ಪಂಚಾಯಿತ್ ನಾಮನಿರ್ದೇಶನ ಸದಸ್ಯರ ಅಬ್ದುಲ್ ಬಶೀರ್ ಆತ್ಮಹತ್ಯೆ

Suddi Udaya

ಬಂಗಾಡಿ ಪರಿಸರದಲ್ಲಿ ನೆಟ್‌ವರ್ಕ್ ಸಮಸ್ಯೆ: ಬ್ಯಾಂಕ್ ವ್ಯವಹಾರಕ್ಕಾಗಿ ಗ್ರಾಹಕರ ಪರದಾಟ

Suddi Udaya

ಕಿರಿಯ ವಯಸ್ಸಿನಲ್ಲಿಯೇ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾದ ಬೆಳ್ತಂಗಡಿಯ ಯುವಕ ಮಂಜುನಾಥ್ ಶಿವಲಿಂಗಪ್ಪ ಜಿ.

Suddi Udaya

ಚುನಾವಣಾ ಕಾನೂನು ಸುವ್ಯವಸ್ಥೆ, ಕಾಪಾಡುವ ಹಿತದೃಷ್ಟಿಯಿಂದ : ಎ.17 ಸೋಮವಾರ ಬೆಳ್ತಂಗಡಿ ಸಂತೆಕಟ್ಟೆ‌ಯಿಂದ ಬಸ್ ನಿಲ್ದಾಣದವರೆಗೆ ರಾಷ್ಟ್ರೀಯ ಹೆದ್ದಾರಿಯ ಇಕ್ಕೆಲಗಳಲ್ಲಿ ವ್ಯಾಪಾರ ನಿಷೇಧ

Suddi Udaya

22 ವರ್ಷ ಭಾರತಮಾತೆಯ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಲಾಯಿಲದ ಅಶೋಕ್ ಕುಮಾರ್ ರವರಿಗೆ ಬೆಳ್ತಂಗಡಿಯಲ್ಲಿ ಭವ್ಯ ಸ್ವಾಗತ

Suddi Udaya
error: Content is protected !!