25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ: ಬೆರ್ಕೆ ರಸ್ತೆಯಲ್ಲಿ ಕಸ ಎಸೆದವರಿಂದಲೇ ವಿಲೇವಾರಿ ಮಾಡಿ ದಂಡ ವಿಧಿಸಿದ ಲಾಯಿಲ ಗ್ರಾ.ಪಂ.

ಲಾಯಿಲ: ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆರ್ಕೆ ಕಾವಟೆಗೆ ಹೋಗುವ ರಸ್ತೆಯಲ್ಲಿ ಕಸವನ್ನು ಗಾಡಿಯಲ್ಲಿ ತಂದು ಹಾಕಿದ್ದು, ಈ ಬಗ್ಗೆ ಸ್ವಚ್ಛತಾ ಕಾರ್ಮಿಕರು ಹಾಗೂ ಗ್ರಾಮಸ್ಥರು ಗ್ರಾಮ ಪಂಚಾಯತ್ ಕಚೇರಿಗೆ ಬಂದು ಲೆಕ್ಕಸಹಾಯಕಿ ಸುಪ್ರಿತಾ ಶೆಟ್ಟಿ ಅವರ ಗಮನಕ್ಕೆ ತಂದಿದ್ದಾರೆ. ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ರಸ್ತೆ ಬದಿ ಬಿಸಾಡಿದ್ದ ಗೋಣಿಚೀಲಗಳನ್ನು ತೆರೆದಾಗ ಅದರಲ್ಲಿ ಕಸ ಹಾಕಿದವರ ಬಗ್ಗೆ ಮಾಹಿತಿ ದೊರಕಿದೆ.

ಕಸ ಹಾಕಿದವರನ್ನು ಕರೆಸಿ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ ಡಿ.ಪಿ. ಹಾಗೂ ಕಾರ್ಯದರ್ಶಿ ತಾರಾನಾಥ್ ನಾಯ್ಕ ಅವರು ದಂಡನೆ ಶುಲ್ಕ ವಿಧಿಸಿ ಕಸವನ್ನು ಕಸ ಹಾಕಿದವರಿಂದಲೇ ತೆರವುಗೊಳಿಸಿದ್ದಾರೆ.

Related posts

ಕೊಯ್ಯೂರು ಮೈಂದಕೋಡಿ ಮನೆಯಲ್ಲಿ ಭಜನಾ ಕಮ್ಮಟ ಹಾಗೂ ದೈವಗಳ ಗಗ್ಗರ ಸೇವೆ

Suddi Udaya

ಬೆಳ್ತಂಗಡಿ: ಸರ್ಕಾರಿ ಆಸ್ಪತ್ರೆಗೆ ಜಿಲ್ಲಾ ಆರೋಗ್ಯಾಧಿಕಾರಿ ಭೇಟಿ

Suddi Udaya

ರೀಜೆಂಟ್ ಮಳಿಗೆ ಅಳದಂಗಡಿಯಿಂದ- ಗರ್ಡಾಡಿ ಹೊನ್ನಕಟ್ಟೆಗೆ ಸ್ಥಳಾಂತರಗೊಂಡು ಶುಭಾರಂಭ

Suddi Udaya

ಬೆಳ್ತಂಗಡಿ ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆಯ ಉಪಾಧ್ಯಕ್ಷರಾಗಿ ಸುಮಾ ಉಜಿರೆ ಆಯ್ಕೆ

Suddi Udaya

ಶಿಬಾಜೆ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಅ.7: ವಾಣಿ ಶಿಕ್ಷಣ ಸಂಸ್ಥೆಯಲ್ಲಿ ವಾಣಿ ವಿದ್ಯಾ ಸಮ್ಮಾನ್, ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ

Suddi Udaya
error: Content is protected !!