July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಲಾಯಿಲ: ಶ್ರೀ ವಿಶ್ವಕರ್ಮ ಯಜ್ಞ ಮತ್ತು ಪೂಜೆ, ಧಾರ್ಮಿಕ ಸಭಾ ಕಾರ್ಯಕ್ರಮ

ಬೆಳ್ತಂಗಡಿ: ವಿಶ್ವಕರ್ಮಾಭ್ಯುದಯ ಸಭಾ ಲಾಯಿಲ ಮತ್ತು ಶ್ರೀ ಗಾಯತ್ರಿ ವಿಶ್ವಕರ್ಮ ಮಹಿಳಾ ಸಂಘ ಲಾಯಿಲ ಇದರ ವತಿಯಿಂದ ಶ್ರೀ ವಿಶ್ವಕರ್ಮ ಯಜ್ಞ ಮತ್ತು ಪೂಜೆಯು ಶಿವಪ್ರಸಾದ್ ಪುರೋಹಿತ್ ಸವಣಾಲು ಇವರ ಪೌರೋಹಿತ್ಯದಲ್ಲಿ ಸೆ.16ರಂದು ಲಾಯಿಲ ವಿಶ್ವಕರ್ಮ ಸಭಾಭವನದಲ್ಲಿ ವಿವಿಧ ವೈದಿಕ ವಿಧಿ ವಿಧಾನಗಳೊಂದಿಗೆ ಜರಗಿತು.

ಧಾರ್ಮಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಶ್ವಕರ್ಮಾಭ್ಯುದಯ ಸಭಾ ಲಾಯಿಲ ಇದರ ಅಧ್ಯಕ್ಷ ಗಣೇಶ್ ಆಚಾರ್ಯ ಬಲ್ಯಾಯಕೋಡಿ ವಹಿಸಿದ್ದರು. ಉಡುಪಿ & ದ.ಕ. ಜಿಲ್ಲಾ ವಿಶ್ವಕರ್ಮ ಒಕ್ಕೂಟದ ಇಂಜಿನಿಯರಿಂಗ್ ಕ್ಷೇತ್ರದ ಪ್ರತಿನಿಧಿ ಹರ್ಷ ವರ್ಧನ್ ನಿಟ್ಟೆ ಧಾರ್ಮಿಕ ಉಪನ್ಯಾಸವನ್ನು ನೆರವೇರಿಸಿದರು.

ಮುಖ್ಯ ಅತಿಥಿಗಳಾಗಿ ಉದ್ಯಮಿ, ಚಲನಚಿತ್ರ ನಟ, ಕಾರುಣ್ಯ ಸೇತು ಟ್ರಸ್ಟ್ ಸಂಸ್ಥಾಪಕ ಸ್ವಸ್ತಿಕ್ ಆರ್ಯ, ಗುರುವಾಯನಕೆರೆ ಶ್ರೀಕೃಷ್ಣ ಎಂಟರ್‌ಪ್ರೈಸಸ್ ನ ವಾಮನ ಆಚಾರ್ಯ, ಶ್ರೀಮತಿ ಸರಸ್ವತಿ ನಿರಂಜನ್ ಆಚಾರ್ಯ ಕೈಪ್ಲೋಡಿ ನಿವೃತ್ತ ಸರಕಾರಿ ನೌಕರರು, ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪ ವಿಭಾಗ, ಬೆಳ್ತಂಗಡಿ, ಎ ಬಾಲಕೃಷ್ಣ ಆಚಾರ್ಯ ಅಧ್ಯಕ್ಷರು ವಿಶ್ವಕರ್ಮ ಮಿತ್ರರು, ಎಂ. ಆರ್. ಪಿ. ಎಲ್. ಮಂಗಳೂರು, ಸುರೇಂದ್ರ ಆಚಾರ್ಯ ಕನ್ನಾಜೆ ಯುವ ಉದ್ಯಮಿಗಳು, ಸಿಲಿಕಾನ್ ಮೋಟಾರ್ಸ್, ಬೆಂಗಳೂರು, ಭಾಗವಹಿಸಿದರು.

ಪಿ.ಎನ್. ರಮೇಶ್ ಆಚಾರ್ಯ, ಮದ್ದಡ್ಕ ಗೌರವ ಸಲಹೆಗಾರರು, ವಿಶ್ವಕರ್ಮ ಕಮ್ಮಾರರ ಗುಡಿ ಕೈಗಾರಿಕಾ ಸಂಘ, ಬೆಳ್ತಂಗಡಿ, ಪುಷ್ಪ ಗಣೇಶ್ ಆಚಾರ್ಯ ಬಲ್ಯಾಯಕೋಡಿ ಗೌರವ ಉಪಸ್ಥಿತರಿದ್ದರು.

ಸಂಗೀತ ಶಿಕ್ಷಕಿ ಗಾಯತ್ರಿ ಪ್ರಾರ್ಥಿಸಿದರು. ವಿಶ್ವಕರ್ಮಾಭ್ಯುದಯ ಸಭಾ ಲಾಯಿಲ ಇದರ ಕಾರ್ಯದರ್ಶಿ ರಾಮ್ ಪ್ರಸಾದ್ ಎನ್.ಎಸ್ ರವರು ಸ್ವಾಗತಿಸಿದರು. ರುಕ್ಮಯ ಆಚಾರ್ಯ ಕನ್ನಾಜೆ & ರಾಜೇಶ್ ಆಚಾರ್ಯ ನಿರೂಪಿಸಿದರು.

ಮಧ್ಯಾಹ್ನ “ವಿ.ಎಸ್.ಡಿ ಶೋ ಮಾಸ್ಟರ್ಸ್ ಉಜಿರೆ” ಮತ್ತು “ಸ್ವರ ಮಾಧುರ್ಯ ಬೆಳ್ತಂಗಡಿ” ತಂಡದವರಿಂದ ಸಾಂಸ್ಕೃತಿಕ ಕಾರ್ಯಕ್ರಮ, ವಿಶ್ವಕರ್ಮ ಯುವ ಕಲಾವಿದರ ಕೂಡುವಳಿಕೆಯಲ್ಲಿ “ಪಾಂಡವಾಶ್ವಮೇಧಾ” ಯಕ್ಷಗಾನ ಕಾರ್ಯಕ್ರಮ ನಡೆಯಿತು.

Related posts

ಜೆಇಇ ಫಲಿತಾಂಶ : ಶ್ರೀ ಧ.ಮಂ. ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

Suddi Udaya

ಮಿತ್ತಬಾಗಿಲು ಹಾಲು ಉತ್ಪಾದಕರ ಸಹಕಾರಿ ಸಂಘದ ಉಪಾಧ್ಯಕ್ಷರಿಗೆ ಸನ್ಮಾನ

Suddi Udaya

ಕೊಲ್ಲಿ: ಶ್ರೀ ದುರ್ಗಾ ಕಾಂಪ್ಲೆಕ್ಸ್ ಉದ್ಘಾಟನೆ ಹಾಗೂ ಶ್ರೀ ದುರ್ಗಾ ಜನರಲ್ ಸ್ಟೋರ್ ಶುಭಾರಂಭ

Suddi Udaya

ಉಪ್ಪಿನಂಗಡಿ: ನೇತ್ರಾವತಿ ಮತ್ತು ಕುಮಾರಧಾರ ನದಿಯಲ್ಲಿ ಉಕ್ಕಿ ಹರಿಯುತ್ತಿರುವ ಪ್ರವಾಹ

Suddi Udaya

ನಿಡಿಗಲ್ ಲೋಕನಾಡು ಶ್ರೀ ಲೋಕನಾಥೇಶ್ವರ ದೇವರ ವರ್ಷಾವಧಿ ಜಾತ್ರೆ-ನಡ್ವಾಲ್ ಸಿರಿಜಾತ್ರೆ: ಆಶ್ಲೇಷಾ ಬಲಿ-ಶ್ರೀ ನಾಗದರ್ಶನ ಸೇವೆ, ಶ್ರೀ ನಾಗದೇವರ ಮತ್ತು ಶ್ರೀ ಲೋಕನಾಥೇಶ್ವರ ದೇವರ ಭೇಟಿ,

Suddi Udaya

ನೆರಿಯ: ಗಂಡಿಬಾಗಿಲು ನಿವಾಸಿ ಜೋಸೆಫ್ ವಿಷ ಸೇವಿಸಿ ಆತ್ಮಹತ್ಯೆ

Suddi Udaya
error: Content is protected !!