24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಿಶ್ವ ಪ್ರಜಾಪ್ರಭುತ್ವ ದಿನ ಪ್ರಯುಕ್ತ ವಿಮ್ ಬೆಳ್ತಂಗಡಿ ವತಿಯಿಂದ ಸೆಮಿನಾರ್ ಕಾರ್ಯಕ್ರಮ

ಬೆಳ್ತಂಗಡಿ : ವಿಮೆನ್ ಇಂಡಿಯಾ ಮೂವ್ಮೆಂಟ್ – ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ “ವಿಶ್ವ ಪ್ರಜಾಪ್ರಭುತ್ವ ದಿನ” ಅಂಗವಾಗಿ ಬೆಳ್ತಂಗಡಿ ಪಕ್ಷದ ಕಛೇರಿಯಲ್ಲಿ ಸೆಮಿನಾರ್ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ವಿಮೆನ್ ಇಂಡಿಯಾ ಮೂವ್ಮೆಂಟ್ – ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿಯ ಅಧ್ಯಕ್ಷೆ ಶಮಾ ಉಜಿರೆ ಪ್ರಾಸ್ತಾವಿಕ ಮಾತುಗಳನ್ನಾಡಿದರು.

ಮುಖ್ಯ ಅತಿಥಿಯಾಗಿ ಆಗಮಿಸಿದ್ದ ನ್ಯಾಯವಾದಿ ಅಸ್ಮಾ ರಿಜ್ವಾನ್ ರಾಜಕೀಯದಲ್ಲಿ ಮಹಿಳೆಯರು ತಮ್ಮ ಪ್ರಾತಿನಿಧ್ಯದ ಅಗತ್ಯತೆಯನ್ನು ಮನಗಂಡು ಸಮಾಜಮುಖಿ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕೆಂದು ಅಭಿಪ್ರಾಯಪಟ್ಟರು. ಮಹಿಳೆಯರು ಕಾನೂನು ಅರಿವನ್ನು ಪಡೆದುಕೊಂಡು, ಸಬಲೀಕರಣಕ್ಕೆ ಆದ್ಯತೆ ನೀಡಬೇಕೆಂದು ಹೇಳಿದರು.

ಡಾಕ್ಟರ್ ಆಶಿಕಾ ಮಾತನಾಡಿ ನಮ್ಮ ನಡವಳಿಕೆಗಳಲ್ಲಿ ಸಹ ಪ್ರಜಾಪ್ರಭುತ್ವದ ಅಂಶಗಳನ್ನು ಅಳವಡಿಸಿಕೊಳ್ಳುವ ಪ್ರಯತ್ನ ಮಾಡಬೇಕು. ‌ಮುಖ್ಯವಾಗಿ ಅತ್ಯಂತ ಸರಳವಾದ ಕೆಲವು ಗುಣಗಳನ್ನು ಅನುಸರಿಸಬೇಕು. ಜನ, ದೇಶ ಮತ್ತು ಸಂವಿಧಾನ ಅತ್ಯಂತ ಮಹತ್ವದ್ದು. ಅದಕ್ಕೆ ಗೌರವ, ಪ್ರೀತಿ, ಮಾನ್ಯತೆ ಮತ್ತು ಮೊದಲ ಆದ್ಯತೆ ನೀಡಬೇಕೆಂದರು. ಸಂಯಮ, ಸಹಕಾರ, ಪ್ರೀತಿ, ಸಹಬಾಳ್ವೆ ಇವುಗಳು ದಿನನಿತ್ಯದ ಬದುಕಿನ ಚಟುವಟಿಕೆಗಳ ಭಾಗವಾಗಿರುವಂತೆ ನೋಡಿಕೊಳ್ಳಬೇಕೆಂದು ಅಭಿಪ್ರಾಯಪಟ್ಟರು.

ದಿಕ್ಸೂಚಿ ಭಾಷಣ ಮಾಡಿದ ಪತ್ರಕರ್ತೆ ಫಾತಿಮಾ ಉಸ್ಮಾನ್ ಅವರು ಜಗತ್ತಿನ ಅತೀದೊಡ್ಡ ಪ್ರಜಾಪ್ರಭುತ್ವ ದೇಶವಾದ ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕೊನೆಗೊಳಿಸಿ ನಿರಂಕುಶವಾದವನ್ನು ಹೇರಲು ಸಂವಿಧಾನ ವಿರೋಧಿಗಳು ಪಣತೊಟ್ಟಿರುವಾಗ ಪ್ರಜಾಪ್ರಭುತ್ವವನ್ನು ಈ ದೇಶದಲ್ಲಿ ಸಂರಕ್ಷಿಸುವ ಅಚಲ ನಿರ್ಧಾರವನ್ನು ನೈಜ ಭಾರತೀಯರಾದ ನಾವು ಕೈಗೊಳ್ಳಬೇಕು. ಈ ದೇಶದ ಸಾಂವಿಧಾನಿಕ ಮೌಲ್ಯಗಳನ್ನು ಪುನ‌ರ್ ಸ್ಥಾಪಿಸುವ ಗುರಿಯನ್ನು ಈಡೇರಿಸುವ ಕಠಿಣ ಹೋರಾಟಕ್ಕೆ ನಾವು ಬದ್ಧರಾಗಬೇಕು ಎಂದರು

ಕಾರ್ಯಕ್ರಮದಲ್ಲಿ ವಿಮೆನ್ ಇಂಡಿಯಾ ಮೂವ್ಮೆಂಟ್‌ನ ನಾಯಕಿಯರು, ಕಾರ್ಯಕರ್ತರು ಮತ್ತು ಪ್ರಜಾಪ್ರಭುತ್ವ ಪ್ರೇಮಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು .ವಿಮ್ ನಗರ ಸಮಿತಿ ಅಧ್ಯಕ್ಷೆಯಾದ ರುಬಿಯಾ ಸ್ವಾಗತಿಸಿ, ಸಮಿತಿ ಸದಸ್ಯೆ ರಫಾ ಕಾರ್ಯಕ್ರಮ ನಿರೂಪಿಸಿ, ರಮ್ಲತ್ ಧನ್ಯವಾದಗೈದರು.

Related posts

ಕಲ್ಮಂಜ ಗ್ರಾಮದ ಮಿಯ ನಿವಾಸಿ ಉಜಿರೆ ಅಡಿಕೆ ವ್ಯಾಪಾರಿ ಅಚ್ಚುತ ಭಟ್ ಮನೆಯಿಂದ ದರೋಡೆ ಪ್ರಕರಣ: ಮೂವರು ಆರೋಪಿಗಳ ಬಂಧನ: ರೂ.8.42 ಲಕ್ಷ ನಗದು ಸಹಿತ ಚಿನ್ನಾಭರಣ ವಶ: ನಾಲ್ಕು ವರ್ಷಗಳ ಹಿಂದೆ ಮನೆಯವರನ್ನು ಕಟ್ಟಿ ಹಾಕಿ ನಡೆದ ದರೋಡೆ

Suddi Udaya

ಸಿರಿ ಕೇಂದ್ರ ಕಛೇರಿಯಲ್ಲಿ ಸಿಬ್ಬಂದಿಗಳಿಗೆ ಧ್ಯಾನ ತರಬೇತಿ ಕಾರ್ಯಕ್ರಮ

Suddi Udaya

ಕೊಯ್ಯೂರು: ಆದೂರು ಪೇರಾಲಿನ ವಿಜಯ ಸ್ಟೋರ್ ಮಾಲಕ ಸಾದೂರು ಮುರಳೀಧರ ಭಟ್ ನಿಧನ

Suddi Udaya

ಎಲ್ ಸಿ ಆರ್ ಇಂಡಿಯನ್ ಪದವಿ ವಿಭಾಗದಲ್ಲಿ ವಾಣಿಜ್ಯ ಚಟುವಟಿಕೆ ಕಾರ್ಯಕ್ರಮ

Suddi Udaya

ತೆಕ್ಕಾರು ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಅನ್ನದಾನ ಸೇವೆಯ ಕರಪತ್ರ ಬಿಡುಗಡೆ

Suddi Udaya

ಗರ್ಡಾಡಿ: ಖಾಸಗಿ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಹಲ್ಲೆ-ವಕೀಲೆ ಸಮೇತ ಮೂವರ ವಿರುದ್ಧ ಪ್ರಕರಣ ದಾಖಲು

Suddi Udaya
error: Content is protected !!