30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಗ್ರಾ.ಪಂ.ನಲ್ಲಿ ಇಂಧನ ಘನತ್ಯಾಜ್ಯ ನಿರ್ವಹಣೆ ಹಾಗೂ ಮಳೆ ನೀರು ಕೊಯ್ಲು ಬಗ್ಗೆ ಅರಿವು ಕಾರ್ಯಕ್ರಮ

ಉಜಿರೆ: ಮಹಾತ್ಮ ಗಾಂಧಿ ಗ್ರಾಮೀಣ ಇಂಧನ ಮತ್ತು ಅಭಿವೃದ್ಧಿ ಸಂಸ್ಥೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಗ್ರಾಮ ಪಂಚಾಯತ್ ಉಜಿರೆ, ಪ್ರೇರಣ ಸಂಜೀವಿನಿ ಒಕ್ಕೂಟ ಉಜಿರೆ ಹಾಗೂ ಶ್ರೀ ಅನ್ನಪೂರ್ಣೇಶ್ವರಿ ಚಾರಿಟಿ ಫೌಂಡೇಶನ್ ಚಿಕ್ಕಮಗಳೂರು ಇವರ ಸಹಭಾಗಿತ್ವದಲ್ಲಿ ಉಜಿರೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನವೀಕರಿಸಬಹುದಾದ ಇಂಧನ ಘನತ್ಯಾಜ್ಯ ನಿರ್ವಹಣೆ ಹಾಗೂ ಮಳೆ ನೀರು ಕೊಯ್ಲು ವಿಷಯದಲ್ಲಿ ಅರಿವು ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮವನ್ನು ಗಿಡ ನೀಡುವ ಮೂಲಕ ಗ್ರಾಮ ಪಂಚಾಯಿತಿನ ಅಧ್ಯಕ್ಷೆ ಶ್ರೀಮತಿ ಉಷಾಕಿರಣ ಉದ್ಘಾಟಿಸಿ ಶುಭ ಹಾರೈಸಿದರು. ಗ್ರಾಮ ಪಂಚಾಯತ್ ನ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ನೊಚ್ಚ ಇವರು ಘನತ್ಯಾಜ್ಯ ನಿರ್ವಹಣೆಯನ್ನು ನಿರ್ವಹಿಸಲು ಸಾರ್ವಜನಿಕರ ಸಹಕಾರ ಅಗತ್ಯ ಎಂದು ತಿಳಿಸಿದರು. ವಿಷಯ ತಜ್ಞರಾದ ವಿಕ್ರಂ ಬೆಂಗಳೂರು ವಿನಾಯಕ ಹಾಗೂ ಅನ್ನಪೂರ್ಣೇಶ್ವರಿ ಫೌಂಡೇಶನ್ ನ ಅಧ್ಯಕ್ಷೆ ಸೌಮ್ಯ ಜೆ. ಜೆ ಮಾಹಿತಿ ನೀಡಿದರು.

ಪ್ರೇರಣ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ವಿನುತಾ ರಜತ್ ಗೌಡ ಅಧ್ಯಕ್ಷತೆ ವಹಿಸಿ ಸ್ವಾಗತಿಸಿದರು. ಗ್ರಾಮ ಪಂಚಾಯತ್ ನ ಉಪಾಧ್ಯಕ್ಷ ರವಿ ಕುಮಾರ್ ಬರಮೇಲು, ಮಾಜಿ ಅಧ್ಯಕ್ಷೆ ಪುಷ್ಪಾವತಿ ಆರ್ ಶೆಟ್ಟಿ, ಗ್ರಾಮ ಪಂಚಾಯಿತಿ ಸದಸ್ಯರುಗಳು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಅನ್ನಪೂರ್ಣೇಶ್ವರಿ ಫೌಂಡೇಶನ್ ವಿನಾಯಕ ನಿರೂಪಿಸಿ ಧನ್ಯವಾದ ಸಮರ್ಪಿಸಿದರು.

Related posts

ಅನಧಿಕೃತವಾಗಿ ಕಟ್ಟಡ ನಿರ್ಮಿಸುತ್ತಿದ್ದು ಸ್ಥಳ ಪರಿಶೀಲನೆ ವೇಳೆ ಗ್ರಾಮ ಆಡಳಿತ ಅಧಿಕಾರಿಯ ಮೇಲೆ ಹಲ್ಲೆ ಆರೋಪ: ಹಲ್ಲೆ ಮಾಡಿರುವ ಆರೋಪಿತರ ಮೇಲೆ ಶಿಸ್ತು ಕ್ರಮ ಕೈಗೊಳ್ಳುವಂತೆ ಪೊಲೀಸ್ ಉಪನಿರೀಕ್ಷಕರಿಗೆ ಸೂಕ್ತ ನಿರ್ದೇಶನ ನೀಡಲು ಜಿಲ್ಲಾಧಿಕಾರಿಗಳಿಗೆ ಪತ್ರ

Suddi Udaya

ತುಮಕೂರಿನಲ್ಲಿ ಎಸ್.ಡಿ.ಎಂ ಕಾಲೇಜಿನ ಕಲಾಕೇಂದ್ರ ವಿದ್ಯಾರ್ಥಿಗಳಿಂದ ‘ ಎಸ್.ಡಿ.ಎಂ ಕಲಾ ವೈಭವ’ ಪ್ರದರ್ಶನ

Suddi Udaya

ಟೀಮ್ ನವ ಭಾರತ್ ಬೆಳ್ತಂಗಡಿ ಆಶ್ರಯದಲ್ಲಿ ದಿವಂಗತ ತುಷಾರ್ ಕೆ ಇವರ ಸ್ಮರಣಾರ್ಥ ತಾಲೂಕು ಮಟ್ಟದ ಹೊನಲ ಬೆಳಕಿನ ವಾಲಿಬಾಲ್ ಪಂದ್ಯಾಟ

Suddi Udaya

ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವರಿಗೆ ಶ್ರೀಮತಿ ಸುಕನ್ಯಾ ಮತ್ತು ಡಿ. ಜಯರಾಮ ರಾವ್ ಮತ್ತು ಮಕ್ಕಳು ಸತ್ಯನಪಲ್ಕೆ ಕಲ್ಮಂಜ ಇವರಿಂದ ನೂತನ ಪುಷ್ಪರಥ ಸಮರ್ಪಣೆ ; ಉಜಿರೆ ಶ್ರೀ ಜನಾರ್ಧನ ದೇವಸ್ಥಾನದ ರಥಬೀದಿಯಿಂದ ಶ್ರೀ ಕ್ಷೇತ್ರ ಪಜಿರಡ್ಕಕ್ಕೆ ಭವ್ಯ ಶೋಭಾಯಾತ್ರೆ,

Suddi Udaya

ಸುಲ್ಕೇರಿ ಅ.ಹಿ. ಪ್ರಾ. ಶಾಲೆ, ಶ್ರೀರಾಮ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿಗಳ ಪ್ರವೇಶೋತ್ಸವ ಕಾರ್ಯಕ್ರಮ

Suddi Udaya

ಓಡಿಲ್ನಾಳ ಆಕಸ್ಮಿಕ ಬೆಂಕಿ

Suddi Udaya
error: Content is protected !!