September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತೆಕ್ಕಾರು ಇಬ್ಬನಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ಮಹಾಸಭೆ

ತೆಕ್ಕಾರು : ಇಬ್ಬನಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ತೆಕ್ಕಾರು ಇದರ ಮಹಾಸಭೆ ಸೆ. 15 ರಂದು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆಸಲಾಯಿತು.

ಮಹಾಸಭೆಯ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಹರಿಣಾಕ್ಷಿ ವಹಿಸಿದ್ದರು. ಒಕ್ಕೂಟದ ಅಧ್ಯಕ್ಷೆ ಹರಿಣಾಕ್ಷಿ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.ಎಮ್.ಬಿ.ಕೆ ಪವಿತ್ರ ಒಂದು ವರ್ಷದ ವರದಿ ಹಾಗೂ ಜಮಾ ಖರ್ಚಿನ ವರದಿಯನ್ನು ಮಂಡಿಸಿದರು. ಅದರ ಅನುಮೋದನೆ ಪಡೆಯಲಾಯಿತು.

ಕೃಷಿ ಪತ್ತಿನ ಅಧ್ಯಕ್ಷ ಅಬ್ದುಲ್ ರಜಾಕ್ ವಲಯ ಮೇಲ್ವಿಚಾರಕರು ಸ್ವಸ್ತಿಕ್ ಜೈನ್ ಉಪಸ್ಥಿತರಿದ್ದರು. ವಲಯ ಮೇಲ್ವಿಚಾರಕರು ಸಂಜೀವಿನಿ ಯೋಜನೆ ಬಗ್ಗೆ, ಅದರ ದೇಯೋದ್ದೇಶ ಬಗ್ಗೆ ಜೀವನೋಪಾಯ ಚಟುವಟಿಕೆ, ಒಕ್ಕೂಟದ ಬಗ್ಗೆ, ಬ್ಯಾಂಕ್ ಲೋನಿನ ಬಗ್ಗೆ, ಇತರ ಹಲವು ವಿಷಯದ ಬಗ್ಗೆ ಸವಿಸ್ತಾರವಾಗಿ ಮಾಹಿತಿ ನೀಡಿದರು ಹಾಗೂ ಮಾದಕ ಪದಾರ್ಥಗಳ ವ್ಯಸನ ಸಮಾಜದ ಮೇಲೆ ಆಗುತ್ತಿರುವ ದುಷ್ಪರಿಣಾಮದ ಕುರಿತು ಪ್ರತಿಜ್ಞೆಯನ್ನು ಮಾಡಿಸಿದರು. ಲಿಂಗತ್ವದ ದೌರ್ಜನ್ಯದ ಬಗ್ಗೆ ಮಾಹಿತಿ ನೀಡಿದರು.

ಸಹಕಾರಿ ಸಂಘದ ಅಧ್ಯಕ್ಷ ಅಬ್ದುಲ್ ರಜಾಕ್ ಸಂಜೀವಿನಿ ಸಂಘ ರಚನೆ ಮಾಡುವ ಹಾಗೂ ಸಹಕಾರಿ ಬ್ಯಾಂಕಿನಿಂದ ಸಿಗುವ ಸೌಲಭ್ಯದ ಬಗ್ಗೆ ಮಾಹಿತಿ ನೀಡಿದರು. ನೂತನ ಪದಾಧಿಕಾರಿಗಳ ಆಯ್ಕೆ ಮಾಡಿ ಅಧಿಕಾರ ಹಸ್ತಾಂತರ ಮಾಡಲಾಯಿತು. ನಿರ್ಗಮಿತ ಪದಾಧಿಕಾರಿಗಳಿಗೆ ಸ್ಮರಣೆಗೆ ನೀಡಿ ಗೌರವಿಸಲಾಯಿತು.

ಗುರು ಕೃಪಾ ಸಂಘದ ಸದಸ್ಯೆ ಮಮತಾ ಇವರ ಪ್ರಾರ್ಥಿಸಿ, ಕೃಷಿ ಸಖಿ ದಿವ್ಯ ಸ್ವಾಗತಿಸಿದರು. ಎಲ್ ಸಿ ಆರ್ ಪಿ ಉಷಾ ಮತ್ತು ಲೀಲಾವತಿ ಕಾರ್ಯಕ್ರಮ ನಿರೂಪಿಸಿದರು. ಪಶು ಸಖಿ ವಸಂತಿ ಬಿ ಧನ್ಯವಾದವಿತ್ತರು.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಛದ್ಮವೇಶ ಸ್ಪರ್ಧೆ

Suddi Udaya

ಶಿಶಿಲ ಜಯರಾಮ ನೆಲ್ಲಿತ್ತಾಯರಿಗೆ ” ಭಜನಾ ಭಾಸ್ಕರ ” ಪ್ರಶಸ್ತಿ :

Suddi Udaya

ಧರ್ಮಸ್ಥಳ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಮಹಾವೀರ ಜಯಂತಿ ಆಚರಣೆ

Suddi Udaya

ಹೇರಾಜೆ ಶ್ರೀ ವಿಘ್ನೇಶ್ವರ ಭಜನಾ ಮಂಡಳಿ ವಾರ್ಷಿಕೋತ್ಸವದಲ್ಲಿ ಪದ್ಮರಾಜ್ ಆರ್. ಪೂಜಾರಿ ಭಾಗಿ

Suddi Udaya

ಬೆಸ್ಟ್ ಫೌಂಡೇಶನ್ ವತಿಯಿಂದ ಪೆರೋಡಿತ್ತಾಯಕಟ್ಟೆ ಸ.ಹಿ.ಪ್ರಾ. ಶಾಲಾ ಮಕ್ಕಳಿಗೆ ಉಚಿತ ನೋಟ್‌ ಪುಸ್ತಕ ವಿತರಣೆ

Suddi Udaya

ಪುತ್ತೂರಿನಲ್ಲಿ ಅನಾವರಣಗೊಳ್ಳಲಿರುವ ‘ಲಕ್ಷ್ಯ ಡೇ ಕೇರ್ ಸೆಂಟರ್’ ಹಾಗೂ ‘ಲಕ್ಷ್ಯ ಕೌನ್ಸಲಿಂಗ್ ಸೆಂಟರ್’ಗೆ ಖ್ಯಾತ ಚಲನಚಿತ್ರ ನಟ ರಮೇಶ್ ಅರವಿಂದ್ ಹಾಗೂ ಸಾಹಿತಿ ಯೋಗರಾಜ್ ಭಟ್ ಅವರಿಂದ ಶ್ಲಾಘನೆ

Suddi Udaya
error: Content is protected !!