September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ದೇವನಗುಲ್‌ ಚಾರ್ಮಾಡಿ ಅಡ್ಡ ರಸ್ತೆಗೆ ಗೇಟ್‌ – ಅಕ್ರಮ ಚಟುವಟಿಕೆಗಳಿಗೆ ಕಡಿವಾಣ

ಚಾರ್ಮಾಡಿ : ಚಾರ್ಮಾಡಿ ಘಾಟ್‌ ಮಾರ್ಗಕ್ಕೆ ಸಂಪರ್ಕ ಕಲ್ಪಿಸುವ ದೇವನಗುಲ್‌ ಗ್ರಾಮದ ಅಡ್ಡದಾರಿ ಇತ್ತೀಚೆಗೆ ಅಕ್ರಮ ಚಟುವಟಿಕೆಗಳ ತಾಣವಾಗಿ ಪರಿಣಮಿಸಿತ್ತು. ರಾತ್ರಿ ವೇಳೆ ಸಂಶಯಾಸ್ಪದ ಸಾರಿಗೆ, ಕಾನೂನು ಉಲ್ಲಂಘನೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಪೊಲೀಸರು ಸ್ಥಳೀಯರ ಸಹಕಾರದೊಂದಿಗೆ ಕಟ್ಟುನಿಟ್ಟಿನ ಹೆಜ್ಜೆ ಇಟ್ಟಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಂ ಅಮಟೆ ಅವರ ಮಾರ್ಗದರ್ಶನದಲ್ಲಿ, ಬಣಕಲ್ ಠಾಣಾ ಪಿಎಸ್‌ಐ ರೇಣುಕಾ ನೇತೃತ್ವದ ತಂಡ ಹಾಗೂ ಪೊಲೀಸರು ಗ್ರಾಮಸ್ಥರ ಸಮ್ಮುಖದಲ್ಲಿ 12 ಅಡಿ ಉದ್ದದ ಬಲಿಷ್ಠ ಗೇಟ್‌ ಅಳವಡಿಸಿದರು. ಸುರಕ್ಷತೆಗಾಗಿ ರಸ್ತೆ ಎರಡೂ ಬದಿಗಳಲ್ಲಿ ಗುಂಡಿ ತೋಡಲಾಗಿದ್ದು, ರಾತ್ರಿ ವೇಳೆ ನಿಗಾವಹಿಸುವ ವ್ಯವಸ್ಥೆಯನ್ನೂ ಬಲಪಡಿಸಲಾಗಿದೆ.

ಹೊಸ ನಿಯಮದಂತೆ ಪ್ರತಿದಿನ ರಾತ್ರಿ 10ರಿಂದ ಬೆಳಿಗ್ಗೆ 6ರವರೆಗೆ ಈ ಮಾರ್ಗ ಸಂಪೂರ್ಣ ಬಂದ್ ಆಗಲಿದೆ. ಗೇಟ್‌ನ ಕೀಲಿಯನ್ನು ಕೊಟ್ಟಿಗೆಹಾರ ಚೆಕ್‌ಪೋಸ್ಟ್ ಸಿಬ್ಬಂದಿ ವಶದಲ್ಲಿರಿಸಿಕೊಂಡು ನಿರ್ವಹಣೆ ಕೈಗೊಳ್ಳಲಾಗುತ್ತಿದೆ.

“ಚಾರ್ಮಾಡಿ ಅಡ್ಡದಾರಿಯಲ್ಲಿ ನಡೆಯುತ್ತಿದ್ದ ಅಕ್ರಮ ಚಟುವಟಿಕೆಗಳು ಈಗ ಇತಿಹಾಸ. ಗೇಟ್‌ ಅಳವಡಿಕೆ ಕೇವಲ ತಾತ್ಕಾಲಿಕ ಪರಿಹಾರವಲ್ಲ, ಜನರ ಸುರಕ್ಷತೆ ಹಾಗೂ ಶಾಂತಿಗಾಗಿ ದೀರ್ಘಕಾಲಿಕ ಹೆಜ್ಜೆ. ಗ್ರಾಮಸ್ಥರ ಸಹಕಾರವು ಈ ಕಾರ್ಯಕ್ಕೆ ಜೀವ ತುಂಬಿದೆ. ಪೊಲೀಸರು–ಜನತೆ ಕೈಜೋಡಿಸಿದರೆ ಯಾವುದೇ ಕಾನೂನು ಉಲ್ಲಂಘನೆಗೆ ಅವಕಾಶವಿಲ್ಲ,” ಎಂದು ಎಸ್‌.ಪಿ. ವಿಕ್ರಂ ಅಮಟೆ ಸ್ಪಷ್ಟಪಡಿಸಿದರು.

ಈ ಕ್ರಮದಿಂದ ಅಕ್ರಮ ಸಾರಿಗೆ ಹಾಗೂ ಶಂಕಾಸ್ಪದ ಚಟುವಟಿಕೆಗಳಿಗೆ ಕಡಿವಾಣ ಬೀಳಲಿದೆ ಎಂಬ ವಿಶ್ವಾಸವನ್ನು ಪೊಲೀಸರು ಮಾತ್ರವಲ್ಲ, ಗ್ರಾಮಸ್ಥರೂ ವ್ಯಕ್ತಪಡಿಸಿದ್ದಾರೆ. ಪೊಲೀಸರು–ಜನರ ಸಹಕಾರದ ಮಾದರಿ ಎಂಬ ಪ್ರಶಂಸೆ ಎಲ್ಲೆಡೆಯಿಂದ ಕೇಳಿಬರುತ್ತಿದೆ.

Related posts

ನಾವೂರು ಗೋಪಾಲಕೃಷ್ಣ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya

5, 8, 9 ಮತ್ತು 11ನೇ ತರಗತಿಗಳ ಬೋರ್ಡ್ ಮಟ್ಟದ ಮೌಲ್ಯಾಂಕನ ಪರೀಕ್ಷೆ ನಡೆಸಲು ಹೈಕೋರ್ಟ್ ಆದೇಶ

Suddi Udaya

ಎಲ್.ಸಿ. ಆರ್. ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ ಮಹಿಳಾ ಶಕ್ತಿ ಸಂಘ ರಚನೆ

Suddi Udaya

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರ ಹುಟ್ಟುಹಬ್ಬದ ಸಲುವಾಗಿ ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ ತಂಡದ ಸಹಕಾರದಲ್ಲಿ ಸುಲ್ಕೇರಿ ಶ್ರೀರಾಮ ಶಾಲೆಗೆ ಧನಸಹಾಯ ಹಸ್ತಾoತರ

Suddi Udaya

ಅ.11: ಬೆಳ್ತಂಗಡಿಯಲ್ಲಿ ಇಂದಿರಾ ಕ್ಯಾಂಟೀನ್‌ ಉದ್ಘಾಟನೆ: ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರಿಂದ ಚಾಲನೆ

Suddi Udaya

ಡೆಂಗ್ಯೂ ವಿರೋಧ ಮಾಸಾಚಾರಣೆ ಅಂಗವಾಗಿ ಬೆಳ್ತಂಗಡಿ ಪ.ಪಂ. ವ್ಯಾಪ್ತಿಯಲ್ಲಿ ಮನೆ ಮನೆಗೆ ಭೇಟಿ ನೀಡಿ ಮುಂಜಾಗೃತ ಮಾಹಿತಿ

Suddi Udaya
error: Content is protected !!