25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ: ‘ ದಾನ ಪುರುಷಾರ್ಥ ‘ ಭಿತ್ತಿಪತ್ರಿಕೆ ಅನಾವರಣ

ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಡಾ. ವೀರೇಂದ್ರ ಹೆಗ್ಗಡೆಯವರ ಚತುರ್ದಾನಗಳ ಕುರಿತು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿದ್ಯಾರ್ಥಿಗಳಿಂದ ರಚಿಸಲ್ಪಟ್ಟ ‘ ದಾನ ಪುರುಷಾರ್ಥ ‘ ನಾಮಾಂಕಿತ ಭಿತ್ತಿಪತ್ರಿಕೆಯನ್ನು ಧರ್ಮಸ್ಥಳ ಕ್ಷೇತ್ರದಲ್ಲಿ ಶ್ರೀಮತಿ ಹೇಮಾವತಿ ವಿ ಹೆಗ್ಗಡೆಯವರು ಅನಾವರಣಗೊಳಿಸಿ ಶುಭ ಹಾರೈಸಿದರು.

ಭಿತ್ತಿಪತ್ರಿಕೆಯನ್ನು ವೀಕ್ಷಿಸಿದ ಡಾ. ವೀರೇಂದ್ರ ಹೆಗ್ಗಡೆಯವರು ವಿದ್ಯಾರ್ಥಿಗಳನ್ನು ಹರಸಿದರು ಹಾಗೂ ಮಂಜುಶ್ರೀ ವಸ್ತು ಸಂಗ್ರಹಾಲಯದಲ್ಲಿ ಪ್ರದರ್ಶಿಸಲು ಅನುವು ಮಾಡಿದರು.

ಈ ಸಂದರ್ಭದಲ್ಲಿ ಎಸ್ ಡಿ ಎಂ ಪಪೂ ಕಾಲೇಜಿನ ಪ್ರಾಚಾರ್ಯ ಪ್ರಮೋದ್ ಕುಮಾರ್ , ಉಪಪ್ರಾಚಾರ್ಯ ಡಾ. ರಾಜೇಶ್ ಬಿ. , ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥ ಡಾ. ಪ್ರಸನ್ನಕುಮಾರ ಐತಾಳ್ ಹಾಗೂ ಭಿತ್ತಿಪತ್ರಿಕೆಯನ್ನು ರಚಿಸಿದ ವಿದ್ಯಾರ್ಥಿಗಳಾದ ಸಂಕೀರ್ತನಾ , ಅಮೂಲ್ಯ ಪ್ರಭು , ಧೃತಿ ಪಿ ಶೆಟ್ಟಿ ಮತ್ತು ಕ್ಷಿಪ್ರಪ್ರಸಾದ ಇವರು ಉಪಸ್ಥಿತರಿದ್ದರು.

Related posts

ಬಳಂಜ ತಾಲೂಕು ಮಟ್ಟದ ಪ್ರಾಥಮಿಕ, ಪ್ರೌಢಶಾಲಾ ಕ್ರೀಡಾ ಕೂಟ: ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಕ್ರೀಡೆ ಸಹಕಾರಿ: ಮೋಹನ್ ಕುಮಾರ್

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಮತ್ತು ಮಹಿಳಾ ವೇದಿಕೆಯ ಸದಸ್ಯರಿಂದ ವಿವಿಧ ಕ್ಷೇತ್ರಕ್ಕೆ ಭೇಟಿ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಬಳಂಜ : ಬೋಂಟ್ರೊಟ್ಟುಗುತ್ತು ದೈವಸ್ಥಾನದಲ್ಲಿ ಮಹಾ ಚಂಡಿಕಾಯಾಗ: ವಿಧಾನಪರಿಷತ್ ಶಾಸಕ ಕೆ.ಹರೀಶ್ ಕುಮಾರ್ ಸಹಿತ ನೂರಾರು ಭಕ್ತರು ಭಾಗಿ

Suddi Udaya

ಭಾರೀ ಮಳೆಗೆ ಉಜಿರೆ ಶಿವಾಜಿನಗರದಲ್ಲಿ ಗುಡ್ಡ ಕುಸಿತ: ಮನೆಯವರು ಅಪಾಯದಿಂದ ಪಾರು

Suddi Udaya

ನಿಡ್ಲೆ : ಕೊಡಂಗೆಯಲ್ಲಿ ಗುಡ್ಡ ಕುಸಿತ: ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ತುರ್ತು ಕಾರ್ಯಾಚರಣೆ

Suddi Udaya
error: Content is protected !!