25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ: ‘ ದಾನ ಪುರುಷಾರ್ಥ ‘ ಭಿತ್ತಿಪತ್ರಿಕೆ ಅನಾವರಣ

ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಡಾ. ವೀರೇಂದ್ರ ಹೆಗ್ಗಡೆಯವರ ಚತುರ್ದಾನಗಳ ಕುರಿತು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿದ್ಯಾರ್ಥಿಗಳಿಂದ ರಚಿಸಲ್ಪಟ್ಟ ‘ ದಾನ ಪುರುಷಾರ್ಥ ‘ ನಾಮಾಂಕಿತ ಭಿತ್ತಿಪತ್ರಿಕೆಯನ್ನು ಧರ್ಮಸ್ಥಳ ಕ್ಷೇತ್ರದಲ್ಲಿ ಶ್ರೀಮತಿ ಹೇಮಾವತಿ ವಿ ಹೆಗ್ಗಡೆಯವರು ಅನಾವರಣಗೊಳಿಸಿ ಶುಭ ಹಾರೈಸಿದರು.

ಭಿತ್ತಿಪತ್ರಿಕೆಯನ್ನು ವೀಕ್ಷಿಸಿದ ಡಾ. ವೀರೇಂದ್ರ ಹೆಗ್ಗಡೆಯವರು ವಿದ್ಯಾರ್ಥಿಗಳನ್ನು ಹರಸಿದರು ಹಾಗೂ ಮಂಜುಶ್ರೀ ವಸ್ತು ಸಂಗ್ರಹಾಲಯದಲ್ಲಿ ಪ್ರದರ್ಶಿಸಲು ಅನುವು ಮಾಡಿದರು.

ಈ ಸಂದರ್ಭದಲ್ಲಿ ಎಸ್ ಡಿ ಎಂ ಪಪೂ ಕಾಲೇಜಿನ ಪ್ರಾಚಾರ್ಯ ಪ್ರಮೋದ್ ಕುಮಾರ್ , ಉಪಪ್ರಾಚಾರ್ಯ ಡಾ. ರಾಜೇಶ್ ಬಿ. , ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥ ಡಾ. ಪ್ರಸನ್ನಕುಮಾರ ಐತಾಳ್ ಹಾಗೂ ಭಿತ್ತಿಪತ್ರಿಕೆಯನ್ನು ರಚಿಸಿದ ವಿದ್ಯಾರ್ಥಿಗಳಾದ ಸಂಕೀರ್ತನಾ , ಅಮೂಲ್ಯ ಪ್ರಭು , ಧೃತಿ ಪಿ ಶೆಟ್ಟಿ ಮತ್ತು ಕ್ಷಿಪ್ರಪ್ರಸಾದ ಇವರು ಉಪಸ್ಥಿತರಿದ್ದರು.

Related posts

ನಿಡ್ಲೆ: ಇನೋವಾ ಕಾರು ಹಾಗೂ ಪೊಲೀಸ್ ವ್ಯಾನ್ ನಡುವೆ ಡಿಕ್ಕಿ

Suddi Udaya

ಬೆಳ್ತಂಗಡಿ:  ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಆಟಿದ ಗಮ್ಮತ್ತ್’

Suddi Udaya

ಮದ್ದಡ್ಕ: ಸ್ಕೂಟಿ ಮತ್ತು ಕಾರು ಡಿಕ್ಕಿ

Suddi Udaya

ಮಚ್ಚಿನ: ವೀರಮ್ಮ ನಿಧನ

Suddi Udaya

ಸಬ್ ಸ್ಟೇಷನ್ಗಳನ್ನು ನಿರ್ಮಿಸಿ ಬೆಳ್ತಂಗಡಿ ತಾಲೂಕಿನ ಜನರಿಗೆ ನಿರಂತರವಾಗಿ ವಿದ್ಯುತ್ ಪೂರೈಸಲು ಸಮಸ್ಯೆಯಾಗದಂತೆ ಅಭಿವೃದ್ದಿ ಪಡಿಸಬೇಕೆಂದು ಶಾಸಕ ಹರೀಶ್ ಪೂಂಜರಿಂದ ಇಂಧನ ಸಚಿವರಿಗೆ ಮನವಿ

Suddi Udaya

ಸಹಾಯಕ ಪ್ರಾಧ್ಯಾಪಕಿ ಗೀತಾ ಏ.ಜೆ ರವರಿಗೆ ಪಿಎಚ್ ಡಿ ಪದವಿ

Suddi Udaya
error: Content is protected !!