July 23, 2026
ಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿರಾಜ್ಯ ಸುದ್ದಿವರದಿ

ಧರ್ಮಸ್ಥಳ ಪ್ರಕರಣ ಎಸ್.ಐ.ಟಿ ಗೆ ಹೈಕೋರ್ಟ್‌ ನೋಟೀಸ್ಸ್ಥಳೀಯರು ಗುರುತಿಸಿದ ಸ್ಥಳಗಳಲ್ಲಿ ಅಗೆದು ಪರಿಶೀಲಿಸುವಂತೆ ಕೋರ್ಟ್ ಗೆ ಅರ್ಜಿ

ಬೆಳ್ತಂಗಡಿ; ಧರ್ಮಸ್ಥಳದ ಗ್ರಾಮದಲ್ಲಿ ನಾವು ಗುರುತಿಸಿರುವ ಸ್ಥಳಗಳಲ್ಲಿ ಕೂಡಲೇ ಅಗೆಯಲು ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ನಿರ್ದೇಶನ ನೀಡಬೇಕು ಎಂದು ಕೋರಿ ಧರ್ಮಸ್ಥಳ ನಿವಾಸಿಗಳಾದ ಪುರಂದರ ಗೌಡ ಹಾಗೂ ತುಕಾರಾಮ ಗೌಡ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ಸೋಮವಾರ ಎಸ್.ಐ.ಟಿ ಗೆ ನೋಟೀಸ್ ನೀಡಿದೆ.

ಈ ಸಂಬಂಧ ಧರ್ಮಸ್ಥಳ ಗ್ರಾಮದ ಪುರಂದರ ಗೌಡ ಹಾಗೂ ತುಕಾರಾಂ ಗೌಡ ಸಲ್ಲಿಸಿರುವ ರಿಟ್ ಅರ್ಜಿ ಕುರಿತು ಸೋಮವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ, ಧರ್ಮಸ್ಥಳ ಸಾಮೂಹಿಕ ಅಂತ್ಯ ಸಂಸ್ಕಾರ ಆರೋಪ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿಗೆ ನೋಟಿಸ್ ಜಾರಿಗೊಳಿಸಿತಲ್ಲದೆ, ಅರ್ಜಿಗೆ ಸಂಬಂಧಿಸಿದಂತೆ ಮಾಹಿತಿ ಪಡೆದು ನ್ಯಾಯಾಲಯಕ್ಕೆ ಒದಗಿಸುವಂತೆ ವಿಶೇಷ ಸರ್ಕಾರಿ ಅಭಿಯೋಜಕ ಬಿ.ಎನ್. ಜಗದೀಶ ಅವರಿಗೆ ಸೂಚಿಸಿ, ವಿಚಾರಣೆಯನ್ನು ಗುರುವಾರಕ್ಕೆ (ಸೆಪ್ಟೆಂಬರ್ 18) ಮುಂದೂಡಿತು.

ಅರ್ಜಿದಾರರ ಪರ ವಕೀಲ ದೀಪಕ್ ಖೋಸ್ಲಾ ಅವರು “ಅರ್ಜಿದಾರರು ಎಸ್‌ಐಟಿಗೆ ಆ 6 ಹಾಗೂ 29 ರಂದು ಅರ್ಜಿ ಸಲ್ಲಿಸಿದ್ದು, ಧರ್ಮಸ್ಥಳದಲ್ಲಿ ಅನಾಮಧೇಯ ಶವಗಳನ್ನು ಅಕ್ರಮವಾಗಿ ದಫನ ಮಾಡಿರುವ ಬಗ್ಗೆ ಸ್ಥಳಗಳನ್ನು ಗುರುತಿಸಿದ್ದಾರೆ. ಈ ಸ್ಥಳಗಳಲ್ಲಿ ಕೂಡಲೇ ಭೂಮಿ ಅಗೆದು ಪರಿಶೀಲನೆ ನಡೆಸಲು ಎಸ್‌ಐಟಿಗೆ ನಿರ್ದೇಶನ ನೀಡಬೇಕು” ಗುರುತಿಸಿರುವ ಜಾಗಗಳಲ್ಲಿ ಮೃತದೇಹಗಳ ಅವಶೇಶಷಗಳು ಪ್ರಾಣಿಗಳು ಹಾಗೂ ಮನುಷ್ಯರಿಗೆ ಕಾಣುವಂತಿದ್ದು ಕೂಡಲೇ ಸ್ಥಳ ಪರಿಶೀಲನೆ ನಡೆಸಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಎಸ್‌ಐಟಿಗೆ ಆಗಸ್ಟ್ 29ರಂದು ನೀಡಿರುವ ಮನವಿಯನ್ನು ಪರಿಶೀಲಿಸಿ ಈ ಕೂಡಲೇ ಕ್ರಮ ಕೈಗೊಳ್ಳಲು ನಿರ್ದೇಶಿಸಬೇಕು. ಅರ್ಜಿದಾರರು ತೋರಿಸುವ ಸ್ಥಳಗಳಲ್ಲಿ ಭೂಮಿ ಅಗೆಯಲು ಅನುವಾಗುವಂತೆ ಅರ್ಜಿದಾರರಿಗೆ ಜೊತೆಯಾಗಿ ನ್ಯಾಯಾಂಗ ರಿಜಿಸ್ಟ್ರಾರ್ ಅಥವಾ ನಿವೃತ್ತ ಜಿಲ್ಲಾ ನ್ಯಾಯಾಧೀಶರ ನೇತೃತ್ವದಲ್ಲಿ ಕೋರ್ಟ್ ಕಮಿಷನ‌ರ್ ನೇಮಕ ಮಾಡಬೇಕು. ಈ ಕುರಿತು ವಾಸ್ತವಿಕ ವರದಿಗಳನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಆದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.

Related posts

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ರಾಜ್ಯ ಮಟ್ಟದ ವಿಚಾರ ಸಂಕಿರಣಕ್ಕೆ ಚಾಲನೆ

Suddi Udaya

ಜೂ.13: ಕೊಕ್ಕಡದಲ್ಲಿ ಸತ್ಯಸುದ್ದಿ ನ್ಯೂಸ್ ಡಿಜಿಟಲ್ ಮೀಡಿಯಾ ಶುಭಾರಂಭ

Suddi Udaya

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಬೆಳ್ತಂಗಡಿ ತಾಲೂಕು, 27ನೇ ವರ್ಷದ ಸಾಮೂಹಿಕ ಗೌರಿ ಪೂಜೆ ಮತ್ತು ಶ್ರೀ ಗಣೇಶೋತ್ಸವ: ಧಾರ್ಮಿಕ ಸಭೆ

Suddi Udaya

ರಸ್ತೆ ಬದಿ ವಾಹನ ನಿಲ್ಲಿಸುವರಿಗೆ ಎಚ್ಚರಿಕೆ, ಬ್ಯಾಟರಿ ಕಳ್ಳರಿದ್ದಾರೆ: ಸುಲ್ಕೇರಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಹಲವು ವಾಹನಗಳ ಬ್ಯಾಟರಿ ಕಳವು; ವೇಣೂರು ಪೊಲೀಸ್ ಠಾಣೆಗೆ ದೂರು

Suddi Udaya

ಎಸ್‌.ಡಿ‌.ಎಂ. ನ್ಯಾಚುರೋಪತಿ ಹಾಗೂ ಯೋಗ ವಿಜ್ಞಾನ ಕಾಲೇಜು ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya

ಧರ್ಮಸ್ಥಳ: ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya
error: Content is protected !!