September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಿಶ್ವ ಪ್ರಜಾಪ್ರಭುತ್ವ ದಿನ ಪ್ರಯುಕ್ತ ವಿಮ್ ಬೆಳ್ತಂಗಡಿ ವತಿಯಿಂದ ಸೆಮಿನಾರ್ ಕಾರ್ಯಕ್ರಮ

ಬೆಳ್ತಂಗಡಿ : ವಿಮೆನ್ ಇಂಡಿಯಾ ಮೂವ್ಮೆಂಟ್ – ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ “ವಿಶ್ವ ಪ್ರಜಾಪ್ರಭುತ್ವ ದಿನ” ಅಂಗವಾಗಿ ಬೆಳ್ತಂಗಡಿ ಪಕ್ಷದ ಕಛೇರಿಯಲ್ಲಿ ಸೆಮಿನಾರ್ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ವಿಮೆನ್ ಇಂಡಿಯಾ ಮೂವ್ಮೆಂಟ್ – ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿಯ ಅಧ್ಯಕ್ಷೆ ಶಮಾ ಉಜಿರೆ ಪ್ರಾಸ್ತಾವಿಕ ಮಾತುಗಳನ್ನಾಡಿದರು.

ಮುಖ್ಯ ಅತಿಥಿಯಾಗಿ ಆಗಮಿಸಿದ್ದ ನ್ಯಾಯವಾದಿ ಅಸ್ಮಾ ರಿಜ್ವಾನ್ ರಾಜಕೀಯದಲ್ಲಿ ಮಹಿಳೆಯರು ತಮ್ಮ ಪ್ರಾತಿನಿಧ್ಯದ ಅಗತ್ಯತೆಯನ್ನು ಮನಗಂಡು ಸಮಾಜಮುಖಿ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕೆಂದು ಅಭಿಪ್ರಾಯಪಟ್ಟರು. ಮಹಿಳೆಯರು ಕಾನೂನು ಅರಿವನ್ನು ಪಡೆದುಕೊಂಡು, ಸಬಲೀಕರಣಕ್ಕೆ ಆದ್ಯತೆ ನೀಡಬೇಕೆಂದು ಹೇಳಿದರು.

ಡಾಕ್ಟರ್ ಆಶಿಕಾ ಮಾತನಾಡಿ ನಮ್ಮ ನಡವಳಿಕೆಗಳಲ್ಲಿ ಸಹ ಪ್ರಜಾಪ್ರಭುತ್ವದ ಅಂಶಗಳನ್ನು ಅಳವಡಿಸಿಕೊಳ್ಳುವ ಪ್ರಯತ್ನ ಮಾಡಬೇಕು. ‌ಮುಖ್ಯವಾಗಿ ಅತ್ಯಂತ ಸರಳವಾದ ಕೆಲವು ಗುಣಗಳನ್ನು ಅನುಸರಿಸಬೇಕು. ಜನ, ದೇಶ ಮತ್ತು ಸಂವಿಧಾನ ಅತ್ಯಂತ ಮಹತ್ವದ್ದು. ಅದಕ್ಕೆ ಗೌರವ, ಪ್ರೀತಿ, ಮಾನ್ಯತೆ ಮತ್ತು ಮೊದಲ ಆದ್ಯತೆ ನೀಡಬೇಕೆಂದರು. ಸಂಯಮ, ಸಹಕಾರ, ಪ್ರೀತಿ, ಸಹಬಾಳ್ವೆ ಇವುಗಳು ದಿನನಿತ್ಯದ ಬದುಕಿನ ಚಟುವಟಿಕೆಗಳ ಭಾಗವಾಗಿರುವಂತೆ ನೋಡಿಕೊಳ್ಳಬೇಕೆಂದು ಅಭಿಪ್ರಾಯಪಟ್ಟರು.

ದಿಕ್ಸೂಚಿ ಭಾಷಣ ಮಾಡಿದ ಪತ್ರಕರ್ತೆ ಫಾತಿಮಾ ಉಸ್ಮಾನ್ ಅವರು ಜಗತ್ತಿನ ಅತೀದೊಡ್ಡ ಪ್ರಜಾಪ್ರಭುತ್ವ ದೇಶವಾದ ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕೊನೆಗೊಳಿಸಿ ನಿರಂಕುಶವಾದವನ್ನು ಹೇರಲು ಸಂವಿಧಾನ ವಿರೋಧಿಗಳು ಪಣತೊಟ್ಟಿರುವಾಗ ಪ್ರಜಾಪ್ರಭುತ್ವವನ್ನು ಈ ದೇಶದಲ್ಲಿ ಸಂರಕ್ಷಿಸುವ ಅಚಲ ನಿರ್ಧಾರವನ್ನು ನೈಜ ಭಾರತೀಯರಾದ ನಾವು ಕೈಗೊಳ್ಳಬೇಕು. ಈ ದೇಶದ ಸಾಂವಿಧಾನಿಕ ಮೌಲ್ಯಗಳನ್ನು ಪುನ‌ರ್ ಸ್ಥಾಪಿಸುವ ಗುರಿಯನ್ನು ಈಡೇರಿಸುವ ಕಠಿಣ ಹೋರಾಟಕ್ಕೆ ನಾವು ಬದ್ಧರಾಗಬೇಕು ಎಂದರು

ಕಾರ್ಯಕ್ರಮದಲ್ಲಿ ವಿಮೆನ್ ಇಂಡಿಯಾ ಮೂವ್ಮೆಂಟ್‌ನ ನಾಯಕಿಯರು, ಕಾರ್ಯಕರ್ತರು ಮತ್ತು ಪ್ರಜಾಪ್ರಭುತ್ವ ಪ್ರೇಮಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು .ವಿಮ್ ನಗರ ಸಮಿತಿ ಅಧ್ಯಕ್ಷೆಯಾದ ರುಬಿಯಾ ಸ್ವಾಗತಿಸಿ, ಸಮಿತಿ ಸದಸ್ಯೆ ರಫಾ ಕಾರ್ಯಕ್ರಮ ನಿರೂಪಿಸಿ, ರಮ್ಲತ್ ಧನ್ಯವಾದಗೈದರು.

Related posts

ಚಾರ್ಮಾಡಿ: ಸಂಚರಿಸುತ್ತಿದ್ದ ಲಾರಿಗೆ ಆಕಸ್ಮಿಕ ಬೆಂಕಿ ಸಂಪೂರ್ಣ ಸುಟ್ಟು ಹೋದ ಮೆಕ್ಕೆಜೋಳದ ಲಾರಿ

Suddi Udaya

ಪೆರ್ಮುಡ ಸ.ಹಿ.ಪ್ರಾ ಶಾಲೆಯಲ್ಲಿ ಗಿಡ ನಾಟಿ ಕಾರ್ಯಕ್ರಮ

Suddi Udaya

ಮೇ 17: ಶಾಸಕ ಹರೀಶ್ ಪೂಂಜರ ಸಹಕಾರದಲ್ಲಿ ಉಜಿರೆಯಲ್ಲಿ ಸಂಭ್ರಮದ ಕೇರಳ ಸಾಂಪ್ರದಾಯಿಕ “ವಿಷುಕಣಿ” ಆಚರಣೆ:ಕೇರಳದ ಸಾಂಪ್ರದಾಯಿಕ ಶೈಲಿಯ ಊಟೋಪಚಾರ,ಕೇರಳ ಚೆಂಡೆ ಪ್ರದರ್ಶನ,ಪೂಕಳಂ, ಅಂತರರಾಜ್ಯ ಕಲಾವಿದರಿಂದ ಸಾಂಸ್ಕೃತಿಕ ವೈಭವ

Suddi Udaya

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಯುವ ರೆಡ್ ಕ್ರಾಸ್ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Suddi Udaya

ಮದ್ದಡ್ಕ ತಾಯಿ‌ ಪಿಲಿಚಾಮುಂಡಿ‌ ದೈವಸ್ಥಾನದಲ್ಲಿ ತಾಂಬೂಲ ಪ್ರಶ್ನಾ ಚಿಂತನೆ

Suddi Udaya

ಎಸ್.ಡಿ.ಪಿ.ಐ ಕುವೆಟ್ಟು ಬ್ಲಾಕ್ ಸಮಿತಿ ವತಿಯಿಂದ ರಸ್ತೆ ದುರಸ್ಥಿಗೆ ಆಗ್ರಹಿಸಿ ಪ್ರತಿಭಟನೆ

Suddi Udaya
error: Content is protected !!