July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಾಂತಿವನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯಲ್ಲಿ ಆಹಾರ ಮತ್ತು ಪೌಷ್ಠಿಕತೆಯ ಬಗ್ಗೆ ಜಾಗೃತಿ ಕಾರ್ಯಕ್ರಮ

ಉಜಿರೆ: ರಾಷ್ಟ್ರೀಯ ಪೌಷ್ಠಿಕಾಂಶ ಸಪ್ತಾಯ ಪ್ರಯುಕ್ತ ಶಾಂತಿವನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯಲ್ಲಿ ಸೆ.15 ರಂದು ಆಹಾರ ಮತ್ತು ಪೌಷ್ಠಿಕತೆಯ ಬಗ್ಗೆ ಸಾಧಕರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಆಳ್ವಾಸ್ ಕಾಲೇಜಿನ ಪದವಿ ಹಾಗೂ ಸ್ನಾತಕೋತ್ತರ ಪದವಿಯ ಆಹಾರ ಮತ್ತು ಪೋಷಣಾ ವಿಭಾಗದ ಮುಖ್ಯಸ್ಥ ಡಾ॥ ಅರ್ಚನಾ ಪ್ರಭಾತ್ ಸಾಧಕರಿಗೆ ಆಹಾರದ ಮಹತ್ವ ಮತ್ತು ಸಮಯ ಪಾಲನೆಯನ್ನು ನವ ಸಂಶೋಧನೆಗಳ ಉದಾಹರಣೆಯೊಂದಿಗೆ ತಿಳಿ ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಂತಿವನ ಟ್ರಸ್ಟ್‌ನ ಕಾರ್ಯದರ್ಶಿ ಬಿ. ಸೀತಾರಾಮ ತೋಳ್ಳಡಿತ್ತಾಯ ವಹಿಸಿ ಉಪವಾಸದ ಮಹತ್ವವನ್ನು ಪಸರಿಸಿದರು. ಕಾರ್ಯಕ್ರಮದಲ್ಲಿ ಆಸ್ಪತ್ರೆಯ ಮುಖ್ಯವೈದ್ಯಾಧಿಕಾರಿಗಳು ಹಾಗೂ ಯೋಗ ವಿಭಾಗದ ಡೀನ್ ಡಾ| ಶಿವಪ್ರಸಾದ್ ಶೆಟ್ಟಿ ಮತ್ತು ಶ್ರೀ ಧ. ಪ್ರ. ಚಿ. ಮಹಾವಿದ್ಯಾಲಯದ ಉಪಪ್ರಾಂಶುಪಾಲರು ಹಾಗೂ ಪ್ರಕೃತಿ ಚಿಕಿತ್ಸಾ ವಿಭಾಗದ ಡೀನ್ ಡಾ| ಸುಜಾತ ಅವರು ಉಪಸ್ಥಿತರನ್ನು ಉದ್ದೇಶಿಸಿ ಮಾತನಾಡಿದರು.

ಪೌಷ್ಠಿಕಾಂಶ ವಿಭಾಗದ ಡೀನ್ ಡಾ. ಗೀತಾ ಬಿ. ಶೆಟ್ಟಿ ಸ್ವಾಗತಿಸಿದರು ಹಾಗೂ ಸ್ಥಾನಿಕ ವೈದ್ಯಾಧಿಕಾರಿಗಳಾದ ಡಾ॥ ಬಿಂದು ವಂದಿಸಿದರು. ಸಭೆಯಲ್ಲಿ ಡಾ|| ಶಶಿಕಾಂತ್ ಜೈನ್ ನಿರ್ದೇಶಕರು, ವೈದ್ಯಾಧಿಕಾರಿಗಳು, ಸ್ನಾತಕೋತ್ತರ ವೈದ್ಯರು, ಕಲಿಕಾ ವೈದ್ಯರು, 200 ಕ್ಕೂ ಹೆಚ್ಚು ಸಾಧಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಗೇರುಕಟ್ಟೆ ಪ್ರೌಢಶಾಲೆಯಲ್ಲಿ ಪ್ರತಿಭಾ ಪುರಸ್ಕಾರ

Suddi Udaya

ಮರ್ಹೂಮ್ ಅಝ್ರಿನ್ ಸಿದ್ದೀಕ್ ಇವರ ಸ್ಮರಣಾರ್ಥ ಬೃಹತ್ ರಕ್ತದಾನ ಶಿಬಿರ

Suddi Udaya

ದೇಯಿಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭೇಟಿ

Suddi Udaya

ಉಜಿರೆ: ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಸಮ್ಮೇಳನದಲ್ಲಿ ಪ್ರಥ ಮ ಪ್ರಶಸ್ತಿ

Suddi Udaya

ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಆಡಳಿತ ಮಂಡಳಿಯ ಚುನಾವಣೆ: ಅಂಡಿಂಜೆಯಲ್ಲಿ ಸಹಕಾರ ಭಾರತಿ ಸಭೆ

Suddi Udaya

ನೈನಾಡು :ಪಿಂಟೊ ಬೇಕರಿ ಸಂಸ್ಥೆಯ ಮಾಲಕ ಸಿಲ್ವೆಸ್ಟರ್ ಪಿಂಟೊ ನಿಧನ

Suddi Udaya
error: Content is protected !!