23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಾಂತಿವನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯಲ್ಲಿ ಆಹಾರ ಮತ್ತು ಪೌಷ್ಠಿಕತೆಯ ಬಗ್ಗೆ ಜಾಗೃತಿ ಕಾರ್ಯಕ್ರಮ

ಉಜಿರೆ: ರಾಷ್ಟ್ರೀಯ ಪೌಷ್ಠಿಕಾಂಶ ಸಪ್ತಾಯ ಪ್ರಯುಕ್ತ ಶಾಂತಿವನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯಲ್ಲಿ ಸೆ.15 ರಂದು ಆಹಾರ ಮತ್ತು ಪೌಷ್ಠಿಕತೆಯ ಬಗ್ಗೆ ಸಾಧಕರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಆಳ್ವಾಸ್ ಕಾಲೇಜಿನ ಪದವಿ ಹಾಗೂ ಸ್ನಾತಕೋತ್ತರ ಪದವಿಯ ಆಹಾರ ಮತ್ತು ಪೋಷಣಾ ವಿಭಾಗದ ಮುಖ್ಯಸ್ಥ ಡಾ॥ ಅರ್ಚನಾ ಪ್ರಭಾತ್ ಸಾಧಕರಿಗೆ ಆಹಾರದ ಮಹತ್ವ ಮತ್ತು ಸಮಯ ಪಾಲನೆಯನ್ನು ನವ ಸಂಶೋಧನೆಗಳ ಉದಾಹರಣೆಯೊಂದಿಗೆ ತಿಳಿ ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಂತಿವನ ಟ್ರಸ್ಟ್‌ನ ಕಾರ್ಯದರ್ಶಿ ಬಿ. ಸೀತಾರಾಮ ತೋಳ್ಳಡಿತ್ತಾಯ ವಹಿಸಿ ಉಪವಾಸದ ಮಹತ್ವವನ್ನು ಪಸರಿಸಿದರು. ಕಾರ್ಯಕ್ರಮದಲ್ಲಿ ಆಸ್ಪತ್ರೆಯ ಮುಖ್ಯವೈದ್ಯಾಧಿಕಾರಿಗಳು ಹಾಗೂ ಯೋಗ ವಿಭಾಗದ ಡೀನ್ ಡಾ| ಶಿವಪ್ರಸಾದ್ ಶೆಟ್ಟಿ ಮತ್ತು ಶ್ರೀ ಧ. ಪ್ರ. ಚಿ. ಮಹಾವಿದ್ಯಾಲಯದ ಉಪಪ್ರಾಂಶುಪಾಲರು ಹಾಗೂ ಪ್ರಕೃತಿ ಚಿಕಿತ್ಸಾ ವಿಭಾಗದ ಡೀನ್ ಡಾ| ಸುಜಾತ ಅವರು ಉಪಸ್ಥಿತರನ್ನು ಉದ್ದೇಶಿಸಿ ಮಾತನಾಡಿದರು.

ಪೌಷ್ಠಿಕಾಂಶ ವಿಭಾಗದ ಡೀನ್ ಡಾ. ಗೀತಾ ಬಿ. ಶೆಟ್ಟಿ ಸ್ವಾಗತಿಸಿದರು ಹಾಗೂ ಸ್ಥಾನಿಕ ವೈದ್ಯಾಧಿಕಾರಿಗಳಾದ ಡಾ॥ ಬಿಂದು ವಂದಿಸಿದರು. ಸಭೆಯಲ್ಲಿ ಡಾ|| ಶಶಿಕಾಂತ್ ಜೈನ್ ನಿರ್ದೇಶಕರು, ವೈದ್ಯಾಧಿಕಾರಿಗಳು, ಸ್ನಾತಕೋತ್ತರ ವೈದ್ಯರು, ಕಲಿಕಾ ವೈದ್ಯರು, 200 ಕ್ಕೂ ಹೆಚ್ಚು ಸಾಧಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಲಯನ್ಸ್ ಕ್ಲಬ್ ನಿಂದ ಸ್ವಾತಂತ್ರೋತ್ಸವ ಆಚರಣೆ, ಪ್ರತಿಭಾ ಪ್ರೋತ್ಸಾಹ

Suddi Udaya

ಪಡಂಗಡಿ ಸರಕಾರಿ ಪ್ರೌಢ ಶಾಲೆಗೆ ಬೋರ್‌ವೆಲ್ ಸೌಲಭ್ಯವನ್ನು ಒದಗಿಸಿದ ಶಾಸಕ ಹರೀಶ್ ಪೂಂಜ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಬೆಂಗಳೂರು ಭುವನೇಶ್ವರಿ ಕ್ಯಾಟರರ್ಸ್ ಜೆಬಿಆರ್ ಎಂಟರ್ ಪ್ರೈಶಸ್ ರವರಿಂದ ದೇವರಿಗೆ ವಿಶೇಷ ಹೂವಿನ ಅಲಂಕಾರ

Suddi Udaya

ನಾಳ ಶಾಲಾ ಮಕ್ಕಳಿಗೆ ಕಲಿಕಾ ಸಾಮಾಗ್ರಿ ವಿತರಣೆ

Suddi Udaya

ಆರ್.ಎಸ್.ಎಸ್ ಸಂಘಟನೆಗೆ ನೂರರ ಸಂಭ್ರಮ, ಬಡ ಕುಟುಂಬಕ್ಕೆ ಮನೆ ನಿರ್ಮಾಣ

Suddi Udaya

ಹೊಕ್ಕಾಡಿಗೋಳಿ: ಮುಹಿಯುದ್ದೀನ್ ಜುಮಾ ಮಸೀದಿ – ಸಿರಾಜುಲ್ ಹುದಾ ಮದರಸ ಸಿರಾಜುಲ್ ಹುದ ಯಂಗ್ ಮೆನ್ಸ್ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!